NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಹಿಂಬಾಕಿ ಕೂಡಲೇ ಪಾವತಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿಯನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಿ ಮುಷ್ಕರದ ಹಾದಿಯನ್ನು ತಪ್ಪಿಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಈ ಬಗ್ಗೆ ಮಾತನಾಡಿದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ” ಶಕ್ತಿ ಯೋಜನೆಗೆ ಶ್ರಮಿಸುತ್ತಿರುವ ರಾಜ್ಯ ಸಾರಿಗೆ ನಿಗಮಗಳ 1.15 ಲಕ್ಷ ನೌಕರರಿಗೆ 38 ತಿಂಗಳ ವೇತನವನ್ನು ಹಿಂಬಾಕಿ ಉಳಿಸಿಕೊಂಡಿರುವುದು ನಿಜಕ್ಕೂ ಸರ್ಕಾರವು ದಿವಾಳಿಯಾಗಿರುವ ಸಂಕೇತ.

2020ರ ಜನವರಿಯಿಂದ 2023ರ ಮಾರ್ಚ್ ವರೆಗೆ 1800 ಕೋಟಿ ರೂ. ವೇತನ ಬಾಕಿ ಇದ್ದು ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದಲ್ಲದೆ ಕೈಗಾರಿಕಾ ಒಪ್ಪಂದದ ಅನ್ವಯ ಸಾರಿಗೆ ನಿಗಮಗಳ ಅಧಿಕಾರಿ ನೌಕರರಿಗೆ 2024ರ ಜನವರಿ 1 ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಮಾಡಬೇಕಿತ್ತು, ಆದರೆ ಎರಡು ವರ್ಷಗಳಿಂದ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ.

ಸಾರಿಗೆ ನೌಕರರನ್ನು ರಾಜ್ಯದಲ್ಲಿ ಜೀತದಾಳು ಪದ್ಧತಿಯಂತೆ ನಡೆಸಿಕೊಳ್ಳುತ್ತಿರುವುದು ನಿಜಕ್ಕೂ ಅಮಾನವೀಯ ಸಂಗತಿ. ಕೂಡಲೇ ಸಾರಿಗೆ ನೌಕರರು ಮುಷ್ಕರದ ಹಾದಿಯನ್ನು ಹಿಡಿದು ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಮುನ್ನವೇ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು.

ಬಡ ನೌಕರರಿಗೆ ದಕ್ಕಬೇಕಿರುವ ವೇತನ ಹಿಂಬಾಕಿಯನ್ನು ಕೂಡಲೇ ಪಾವತಿ ಮಾಡಿ ಸರ್ಕಾರವು ತಾನು ದಿವಾಳಿಯಾಗಿಲ್ಲ ಎಂಬುದನ್ನು ಸಾಬೀತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಆಮ್ ಆದ್ಮಿ ಪಕ್ಷವು ಕಳೆದ ಹಲವು ವರ್ಷಗಳಿಂದ ಸಾರಿಗೆ ನೌಕರರ ನೈಜ ಬೇಡಿಕೆಗಳ ಹೋರಾಟಕ್ಕೆ ಜತೆಯಾಗಿ ನಿಂತಿದೆ. ಮುಂಬರುವ ದಿವಸಗಳಲ್ಲಿಯೂ ಸಾರಿಗೆ ನೌಕರರ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷವು ಸಹ ಕೈಜೋಡಿಸಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...