NEWSಆರೋಗ್ಯನಮ್ಮಜಿಲ್ಲೆ

ರೋಗಿಗಳಿಗೆ ನಗುಮೊಗದೊಂದಿಗೆ ಚಿಕಿತ್ಸೆ ನೀಡಿ: ವೈದ್ಯರಿಗೆ DHO ಡಾ.ಮೋಹನ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಸರ್ಕಾರಿ ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ನಗುಮೊಗದೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡಿ, ಆ ಜನರ ನಿಸ್ವಾರ್ಥ ಸೇವೆಯಲ್ಲಿ ಭಗವಂತನನ್ನು ಕಾಣಿರಿ ಎಂದು ವೈದ್ಯರಿಗೆ ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ.ಮೋಹನ್ ಸಲಹೆ ನೀಡಿದರು.

ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ ಡಾ.ಮೋಹನ್ ದಿಢೀರ್ ಭೇಟಿ ನೀಡಿ, ರೋಗಿಗಳ ಆರೋಗ್ಯ ಕುಶಲೋಪರಿ ವಿಚಾಡಿಸಿ ವಾರ್ಡಗಳ ಪರಿಶೀಲಿಸಿದ ಬಳಿಕ ಆಸ್ಪತ್ರೆಯ ವೈದ್ಯರ ಕಾರ್ಯದಕ್ಷತೆ ಹಾಗೂ ಸೇವಾ ಮನೋಭಾವನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೈದ್ಯೋ ನಾರಾಯಣೋ ಹರಿ ಎಂಬ ನಾಣ್ನುಡಿಯಂತೆ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಬಡಜನರೇ ಆಗಿರುವುರಿಂದ ವೈದ್ಯರು ರೋಗಿಗಳನ್ನು ನಗುಮೊಗದಿಂದ ಆತ್ಮೀಯತೆಯೊಂದಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕಲ್ಲದೆ, ಸರ್ಕಾರವೇ ಉಚಿತವಾಗಿ ನೀಡುವ ಔಷಧಗಳು ಹಾಗೂ ಮಾತ್ರೆಗಳನ್ನು ನೀಡಿ ಶೀಘ್ರವೇ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಆಸ್ಪತ್ರೆಯ ಆಡಳಿತ ವೈದ್ಯಧಿಕಾರಿ ಡಾ. ಶಶಿಕುಮಾರ್, ತಾಲೂಕು ಆರೋಗ್ಯಧಿಕಾರಿ ಡಾ.ಅಜಿತ್ ಸೇರಿದಂತೆ ಆಸ್ಪತ್ರೆಯ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ