NEWSನಮ್ಮಜಿಲ್ಲೆಸಂಸ್ಕೃತಿ

ರಾಜ್ಯ ಕಸಾಪ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಬನ್ನೂರು ರಾಜುಗೆ ಸನ್ಮಾನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪ್ರಸ್ತುತ ವರ್ಷದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀ ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್ ದತ್ತಿ ಪ್ರಶಸ್ತಿ’ಗೆ ಖ್ಯಾತ ಸಾಹಿತಿ ಪತ್ರಕರ್ತ ಬನ್ನೂರು ಕೆ.ರಾಜು ಅವರು ಭಾಜನರಾಗಿರುವ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲೊಂದಾದ ಮೈಸೂರು ಕನ್ನಡ ವೇದಿಕೆಯ ವತಿಯಿಂದ “ಸಾಹಿತ್ಯ ರತ್ನ” ಬಿರುದು ನೀಡಿ ದಂಪತಿ ಸಮೇತ ಸನ್ಮಾನಿಸಲಾಯಿತು.

ಸಾಹಿತಿ ಬನ್ನೂರು ರಾಜು ಅವರ ಸ್ವಗೃಹದಲ್ಲಿ ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಮೈಸೂರು ಕನ್ನಡ ವೇದಿಕೆಯ ಉಪಾಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ನಾಲಾ ಬೀದಿ ರವಿ ಅವರು, ಅರ್ಹ ಸಾಹಿತಿಗಳನ್ನು ಹಾಗೂ ಉತ್ತಮ ಸಾಹಿತ್ಯ ಕೃತಿಗಳನ್ನು ದತ್ತಿ ಪ್ರಶಸ್ತಿಗಳ ಮೂಲಕ ಗುರುತಿಸಿ ಗೌರವಿಸುತ್ತಿರುವ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ನಡೆ ನಿಜಕ್ಕೂ ಶ್ಲಾಘನೀಯವಾದದ್ದು ಎಂದರು.

ಇನ್ನು ವಿಶೇಷವಾಗಿ ಬರವಣಿಗೆಯನ್ನೇ ಬದುಕು ಮಾಡಿಕೊಂಡು ಲೇಖನಿಯ ಮೂಲಕ ಕನ್ನಡದ ರಥವನ್ನು ಎಳೆಯುತ್ತಿರುವ ಸಾಹಿತಿ ಬನ್ನೂರು ರಾಜು ಅವರಂತಹ ಅಕ್ಷರ ತಪಸ್ವಿಗಳ ಸಾಹಿತ್ಯ ಕೃಷಿಯನ್ನು ಪರಿಷತ್ತು ಪ್ರಾಮಾಣಿಕವಾಗಿ ಗುರುತಿಸಿ ಗೌರವಿಸುತ್ತಿರುವುದು ನಾಡು ಮೆಚ್ಚುವಂಥ ಸತ್ಕಾರ್ಯವಾಗಿದೆ ಎಂದ ಅವರು, ಈ ದಿಶೆಯಲ್ಲಿ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ಯವರ ಕನ್ನಡ ಸಾಹಿತ್ಯ ಸೇವೆ ಹೊಸ ದಿಕ್ಕಿನತ್ತ ಸನ್ಮಾರ್ಗದಲ್ಲಿ ಸಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯ ಅಧ್ಯಕ್ಷ ಎಸ್. ಬಾಲಕೃಷ್ಣ ಕಾರ್ಯಕ್ರಮದ ಅದ್ಯಕ್ಷತೆವಹಿಸಿದ್ದು ಬನ್ನೂರು ರಾಜು ಅವರ ಸಾಹಿತ್ಯ ಸಾಧನೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವೇದಿಕೆಯ ಗುರುಬಸಪ್ಪ ,ಮದನ್, ಮಾಲಿನಿ ಪಾಲಾಕ್ಷ, ಸರಸ್ವತಿಪುರಂ ಬಾಲು, ಹಿರಣ್ಮಯಿ ಪ್ರತಿಷ್ಠಾನದ ಅಧ್ಯಕ್ಷ ಎ.ಸಂಗಪ್ಪ,ಕಾವೇರಿ ಬಳಗದ ಅಧ್ಯಕ್ಷೆ ಎನ್.ಕೆ. ಕಾವೇರಿಯಮ್ಮ, ಪಿ.ಮಹಾಲಕ್ಷ್ಮಿ ರಾಜು, ಜ್ಯೋತಿಷ್ಯರತ್ನ ರಮೇಶ್ ಸ್ಥಪತಿ, ಸವಿತಾ ಸುರೇಶ್, ಬಿ.ಆರ್.ಧನುಷ್ ಇನ್ನಿತರರಿದ್ದರು.ಕೊನೆಯಲ್ಲಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ