NEWSಕೃಷಿಮೈಸೂರು

ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘ ವತಿಯಿಂದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬದ ಹಾಗೂ ಮಹಿಳಾ ದಿನಾಚರಣೆಯ ಅಂಗವಾಗಿ ಕೃಷಿ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸಲಾಯಿತು.

ನಗರದ ಜಲದರ್ಶಿನಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾಗಮ್ಮ ನಂಜನಗೂಡು ಅಳಗಂಜಿ, ಭಾಗ್ಯಮ ಮೈಸೂರು ತಾಲೂಕಿನ ವಾಜಮಂಗಲ, ರೂಪ ಎಚ್.ಡಿ.ಕೋಟೆ ತಾಲೂಕಿನ ಶಾಂತಿಪುರ ಗ್ರಾಮದ ಕೃಷಿ ಕಾರ್ಮಿಕ ರೈತ ಮಹಿಳೆ, ಇವರನ್ನು ಸನ್ಮಾನಿಸಲಾಯಿತು.

ಮಾರ್ಚ್‌ ತಿಂಗಳ ಮಹಿಳಾ ದಿನಾಚರಣೆ ಅಂಗವಾಗಿ ಈ ಕೃಷಿ ಕಾರ್ಮಿಕ ಮಹಿಳೆಯರ ಸನ್ಮಾನಿಸಿ ಮಾತನಾಡಿದ ರೈತರತ್ನ ಕುರುಬೂರು ಶಾಂತಕುಮಾರ್, ಇಂದು ನನ್ನ 64 ವಸಂತಗಳ ದಾಟಿದ ಹುಟ್ಟುಹಬ್ಬದ ನೆನಪಿಗಾಗಿ ರೈತರ ಕೃಷಿ ಕಾರ್ಯಕ್ಕೆ ಬೆನ್ನೆಲುಬಾಗಿ ಸದಾ ದುಡಿಯುವ ಮಹಿಳೆಯರನ್ನು ಗೌರವಿಸುವುದು, ರೈತ ಸಂಕುಲಕ್ಕೆ ಗೌರವ ತಂದುಕೊಡುತ್ತದೆ ಎಂದರು.

ಇನ್ನು ಕೃಷಿ ಕಾರ್ಮಿಕರು ರೈತರ ಕಣ್ಣುಗಳಿದ್ದಂತೆ. ಕೃಷಿ ಕಾರ್ಮಿಕ ಮಹಿಳೆಯರು ನಮ್ಮ ಸಮಾಜದ ಶಕ್ತಿಯಾಗಿದ್ದಾರೆ. ಅವರ ಶ್ರಮದಿಂದಲೇ ಕೃಷಿ ಕ್ಷೇತ್ರ ಬೆಳೆಯುತ್ತಿದೆ. ಆದ್ದರಿಂದ ಅವರನ್ನು ಗೌರವಿಸಿ, ಅವರ ಜೀವನ ಮಟ್ಟವನ್ನು ಸುಧಾರಿಸುವುದು ನಮ್ಮ ಎಲ್ಲರ ಹೊಣೆಗಾರಿಕೆಯಾಗಿದೆ, ಸರ್ಕಾರ ಕೃಷಿ ಕಾರ್ಮಿಕ ಮಹಿಳೆಯರಿಗೆ ಉಚಿತ ಆರೋಗ್ಯ ಸೇವೆ ಹಾಗೂ ಜೀವನ ಭದ್ರತೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕೃಷಿ ಕ್ಷೇತ್ರದಲ್ಲಿ ಮಾತ್ರವಲ್ಲ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ದುಡಿಮೆಯಲಿ ಮುಂದಾಗಿದ್ದಾರೆ. ಜನರ ಧ್ವನಿ ಆಗಬೇಕಾಗಿದ್ದ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಚಿಂತಿಸಬೇಕಾದ ಶಾಸಕರು ಹೈಟೆಕ್ ಭಿಕ್ಷುಕರಂತೆ IPL ಕ್ರಿಕೆಟ್ ಟಿಕೆಟ್ ಬೇಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಮುಖ್ಯ ಅತಿಥಿ ರಾಜ್ಯಧರ್ಮ ಪತ್ರಿಕೆಯ ಸಂಪಾದಕ ಮಹಿ ಮಹೇಶ್ ಕೃಷಿ ಕಾರ್ಮಿಕ ಮಹಿಳೆಯರನ್ನು ಶಾಲು ಹೊದಿಸಿ ಮೈಸೂರು ಪೇಟ ಹಾಕಿ ಸನ್ಮಾನಿ ಮಾತನಾಡುತ್ತಾ, ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ತಮ್ಮ ಸಾಧನೆ ತೋರಿಸಿದ್ದಾರೆ. ಕೃಷಿ ಕ್ಷೇತ್ರದಲ್ಲೂ ಪುರುಷರಷ್ಟೇ ಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸರ್ಕಾರಗಳು ಎಲ್ಲ ರಂಗದಲ್ಲಿಯೂ ಶೇಕಡ 50ರಷ್ಟು ಮೀಸಲಾತಿ ನೀಡುವುದು ಅವಶ್ಯಕವಿದೆ ಎಂದರು.

ರಾಜ್ಯ ಕಬ್ಬು ಬೆಳೆಗಾರ ಸಂಘದ ಖಜಾಂಚಿ ಎಂ.ಬಿ.ಚೇತನ್, ಕಮಲಮ್ಮ, ರೂಪ ಮುದುಕನಪುರ, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾಧ್ಯಕ್ಷ ಸೋಮಶೇಖರ್, ಮಾರ್ಬಳ್ಳಿ ನೀಲಕಂಠಪ್ಪ, ಲಕ್ಷ್ಮೀಪುರ ವೆಂಕಟೇಶ್, ವರಕೋಡು ನಾಗೇಶ್, ರಾಜೇಶ್, ದೇವನೂರು ವಿಜಯೇಂದ್ರ, ಕಿರಗಸೂರು ಪ್ರಸಾದ್ ನಾಯಕ, ಅಂಬಳೆ ಮಂಜುನಾಥ್, ಸಾತಗಳ್ಳಿ ಬಸವರಾಜ್, ಕಾಟೂರು ಮಹದೇವಸ್ವಾಮಿ, ದೇವನೂರು ಮಹಾದೇವಪ್ಪ, ಕೂರ್ಗಳ್ಳಿ ರವಿಕುಮಾರ್, ಕೆಂಡಗಣ್ಣಸ್ವಾಮಿ, ವಾಜಮಂಗಲ ಮಹಾದೇವು, ಪ್ರಭುಸ್ವಾಮಿ, ರಂಗರಾಜು, ಇನ್ನು ಮುಂತಾದವರು ಇದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ