NEWSನಮ್ಮಜಿಲ್ಲೆ

4 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ: ಪೊಲೀಸ್‌ ಶ್ಲಾಘನೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಆಟೋದಲ್ಲಿ ಮರೆತು ಬಿಟ್ಟುಹೋಗಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವರಸುದಾರರಿಗೆ ಮರಳಿ ಒಪ್ಪಿಸುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕರೆ ಮೆರೆದಿದ್ದು ಪೊಲೀಸರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತುಮಕೂರು ನಗರದ ಹನುಮಂತಪುರ ನಿವಾಸಿ ಆಟೋ ಚಾಲಕ ರವಿಕುಮಾರ್ ಎಂಬುವರೆ ಪ್ರಾಮಾಣಿಕತೆ ಮೆರೆದವರು. ಅರಸೀಕೆರೆ ಮೂಲದ ಗಾಯತ್ರಿ ಎಂಬುವರು ಇವರ ಆಟೋದಲ್ಲಿ ಪ್ರಯಾಣಿ ಮಾಡಿದ್ದು, ಇಳಿಯುವ ವೇಳೆ ತಮ್ಮ ಚಿನ್ನಾಭರಣವಿದ್ದ ಬ್ಯಾಗ್‌ಅನ್ನು ಮರೆತು ಬಿಟ್ಟು ಹೋಗಿದ್ದರು.

ಹೌದು! ಕುಂದೂರು ಗ್ರಾಮದಲ್ಲಿ ಸಂಬಂಧಿಕರ ಮನೆಗೆ ಸೀಮಂತ ಕಾರ್ಯಕ್ರಮಕ್ಕಾಗಿ ಗಾಯತ್ರಿ ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಮೂರು ಜನ ಆಟೋದಲ್ಲಿ ಬಸ್ ನಿಲ್ದಾಣಕ್ಕೆ ತೆರಳಿದ್ದರು. ಬಸ್ ನಿಲ್ದಾಣದಲ್ಲಿ ಇಳಿಯುವಾಗ ಆಟೋದಲಳೇ ಬ್ಯಾಗ್ ಬಿಟ್ಟು ಹೋಗಿದ್ದರು.

ಗಾಯತ್ರಿ ಅವರು ಬ್ಯಾಗ್ ಬಿಟ್ಟುಹೋಗಿರುವುದನ್ನು ಸ್ವಲ್ಪ ಸಮಯದ ಬಳಿಕ ಗಮನಿಸಿದ ಆಟೋ ಚಾಲಕ ರವಿಕುಮಾರ್ ಪ್ರಯಾಣಿಕರಿಗಾಗಿ ಹುಡುಕಾಡಿದ್ದಾರೆ. ಮತ್ತೊಂದು ಕಡೆ ಬ್ಯಾಗ್‌ ಬಿಟ್ಟಿರುವುದು ನೆನಪಾಗಿ ಪ್ರಯಾಣಿಕರು ಕೂಡ ಆಟೋಗಾಗಿ ಹುಡುಕಾಡಿದ್ದಾರೆ.

ಆದರೆ ಒಬ್ಬರಿಗೊಬ್ಬರು ಸಿಗದೆ ಹೋದಾಗ ಪ್ರಯಾಣಿಕರು ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಅದೇ ಸಮಯಕ್ಕೆ ಪ್ರಯಾಣಿಕರು ಸಿಗದ ಕಾರಣ ಆಟೋ ಚಾಲಕ ಬ್ಯಾಗ್ ಒಪ್ಪಿಸಲು ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಈ ವೇಳೆ ಪೊಲೀಸ್‌ಠಾಣೆಯಲ್ಲೇ ಒಬ್ಬರಿಗೊಬ್ಬರು ನಡೆದ ವಿಷಯವನ್ನು ಹಂಚಿಕೊಂಡಿರು.

ಇದರ ನಡುವೆ ಪ್ರಯಾಣಕರನ್ನು ಖಚಿತಪಡಿಸಿಕೊಂಡ ಪೊಲೀಸರು ಬ್ಯಾಗ್‌ನ್ನು ಮರಳಿಸಿದ್ದಾರೆ. ಆ ಬ್ಯಾಗ್‌ನಲ್ಲಿ ಬರೋಬರಿ 4 ಲಕ್ಷ ರೂ. ಮೌಲ್ಯದ 52 ಗ್ರಾಂ ಚಿನ್ನಾಭರಣಗಳಿದ್ದವು. ಅದನ್ನು ಮರಳಿ ಪಡೆದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಆಟೋ ಚಾಲಕ ರವಿಕುಮಾರ್ ಪ್ರಾಮಾಣಿಕತೆಗೆ ನಗರ ಠಾಣೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂಥ ಆಟೋ ಚಾಲಕರು ಇದ್ದರೆ ಜನರು ನೆಮ್ಮದಿಯಿಂದ ಹಾಗೂ ಧೈರ್ಯದಿಂದ ಓಡಾಡುತ್ತಾರೆ ಎಂದು ಶ್ಲಾಘಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...