NEWSನಮ್ಮರಾಜ್ಯಶಿಕ್ಷಣ-

ತುಮಕೂರು ಮುಕ್ತ ವಿವಿ :  ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಇವರಿಗೆ ಸಿಗಲಿದೆ ಉಚಿತ ಪ್ರವೇಶಾತಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರು:  ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ಮಾರ್ಚ್ 31 ಕಡೆಯ ದಿನವಾಗಿದೆ.

ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.7,700/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-., ಬಿ.ಕಾಂ.-ರೂ.8,200/-., ಬಿ.ಸಿ.ಎ/ಬಿ.ಎಸ್ಸಿ-ರೂ.22,500/-., ಬಿ.ಎಸ್.ಡಬ್ಲ್ಯೂ-ರೂ.12,000/-., ಎಂ.ಎ-ರೂ.9,800/-., ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-., ಎಂ.ಕಾಂ-ರೂ.11,500/-. ಎಂ.ಸಿ.ಜೆ-ರೂ.15,100/-., ಎಂ.ಎಸ್.ಡಬ್ಲ್ಯೂ-ರೂ.20,000/-., ಎಂ.ಎಲ್.ಐ.ಎಸ್ಸಿ-ರೂ.17,000/-ಗಳಾಗಿರುತ್ತದೆ.

ಬೋಧನಾ ಶುಲ್ಕ ರಿಯಾಯಿತಿ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 15%, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 25% ರಿಯಾಯಿತಿ ಇರುತ್ತದೆ.

ಉಚಿತ ಪ್ರವೇಶಾತಿ: ಕೋವಿಡ್‌ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.

ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಆರ್. ಲೋಕೇಶ ತಿಳಿಸಿದ್ದಾರೆ‌.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ