ಕೃಷ್ಣರಾಜಪೇಟೆ: ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕ ಸಜೀವ ದಹನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಗ್ರಾಮಾಂತರ ಠಾಣೆಯಲ್ಲಿ ಗ್ರಾಮದ ಸವರ್ಣಿಯ ಯುವಕನ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಗ್ರಾಮದ ನಿವಾಸಿ ಕೃಷ್ಣೇಗೌಡ ಎಂಬುವರ ಮಗ ಅನಿಲ್ ಕುಮಾರ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತ ದಲಿತ ಯುವಕ ಜಯಕುಮಾರ್ ಪತ್ನಿ ಲಕ್ಷ್ಮೀ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಅನಿಲ್ ಕುಮಾರ್ ನಾಪತ್ತೆಯಾಗಿದ್ದಾನೆ.
ಘಟನೆ ವಿವರ: ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಎಂಬುವರಿಗೆ ಸೇರಿರುವ ಗ್ರಾಂಟ್ ಜಮೀನಿನಲ್ಲಿ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯ್ತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಜಯಕುಮಾರ್ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮೊನ್ನೆ ಕೂಡ ಈ ವಿಚಾರವಾಗಿ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ ಗದ್ದಲ ನಡೆದಿದ್ದು ನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸಲ್ಲ, ಮೆದೆಗೆ ಬೆಂಕಿ ಹಾಕ್ತಿನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆ ಎಂದು ಸನಿಲ್ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ನನ್ನ ಪತಿಯ ಸಾವಿಗೆ ಅನಿಲ್ ಕಾರಣ ಎಂದು ಲಕ್ಷ್ಮೀ ದೂರು ನೀಡಿದ್ದಾರೆ.
ಈಗ ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗೆ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ನಾಗಮಂಗಲ ಡಿವೈಎಸ್ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುಧಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.
ಈ ವೇಳೆ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಮುಖಂಡರಾದ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಆನಂದ್ ಗೌಡ, ಮೃತ ಜಯಕುಮಾರ್ ಪತ್ನಿ ಲಕ್ಷ್ಮೀ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಕತ್ತರಘಟ್ಟ ಗ್ರಾಮಸ್ಥರು ಇದ್ದರು.
Related

You Might Also Like
ಕರ್ನಾಟಕ ಹೈಕೋರ್ಟ್ ನ್ಯಾ.ಸೋಮಶೇಖರ್ ಮಣಿಪುರ ಹೈಕೋರ್ಟ್ ಸಿಜೆಯಾಗಿ ನೇಮಕ
ಬೆಂಗಳೂರು: ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಸಂವಿಧಾನದ 217ನೇ ವಿಧಿಯಡಿ...
ಜನೌಷಧ ಕೇಂದ್ರಗಳ ಸ್ಥಾಪನೆ ವಿಚಾರ: ಒಂದರಿಂದ ಮತ್ತೊಂದು ಮಳಿಗೆ ವ್ಯವಹಾರಕ್ಕೆ ಅಡ್ಡಿ ಎಂಬ ಕಾರಣ ಸಲ್ಲ- ಹೈಕೋರ್ಟ್
ಬೆಂಗಳೂರು : ಬಡ ಜನತೆಗೆ ಕಡಿಮೆ ಬೆಲೆಗೆ ರೋಗ ನಿರೋಧಕ ಔಷಧಗಳು ಲಭ್ಯವಾಗುತ್ತಿರುವ ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳ ಸ್ಥಾಪನೆ ವಿಚಾರದಲ್ಲಿ ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಯ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸೇರಿ 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರೂ ಸೇರಿದಂತೆ 35ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ...
ವರುಣನ ಆರ್ಭಟಕ್ಕೆ ರಾಜ್ಯದಲ್ಲಿ ಐವರು ಬಲಿ: ಮನೆಗೆ ನುಗ್ಗಿದ ನೀರು- ನಿದ್ದೆಗೆಟ್ಟ ನಿವಾಸಿಗಳು
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 36 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆ ಮಂಗಳವಾರವೂ ಮುಂದುವರಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಕೆಲವೆಡೆ ಮನೆಗಳಿಗೆ...
ಸಿವಿಲ್ ನ್ಯಾಯಾಧೀಶರಾಗಲು ಕನಿಷ್ಠ ಮೂರು ವರ್ಷ ವಕೀಲ ವೃತ್ತಿ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನ್ಯೂಡೆಲ್ಲಿ: ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಪರೀಕ್ಷೆ ಬರೆಯಲು ಅಭ್ಯರ್ಥಿಯಾಗುವುದಕ್ಕೆ ಮೂರು ವರ್ಷ ವಕೀಲರಾಗಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸುಪ್ರೀಂಕೋರ್ಟ್...
ವಿಶ್ವ ಹೈಪರ್ ಟೆನ್ಷನ್ ಡೇ: ಮೂವರಲ್ಲಿ ಒಬ್ಬರಿಗೆ ಹೈಪರ್ ಟೆನ್ಷನ್ – ವಿಶ್ವವನ್ನೇ ಕಾಡುತ್ತಿದೆ ಸೈಲೆಂಟ್ ಕಿಲ್ಲರ್ !
ಬೆಂಗಳೂರು: ವಿಶ್ವದಲ್ಲಿ 30ರಿಂದ 70ರ ವಯಸ್ಸಿನ ನಡುವಿನ 1.28 ಬಿಲಿಯನ್ ಜನರು ಹೈಪರ್ ಟೆನ್ಷನ್ಗೆ ಒಳಗಾಗಿದ್ದಾರೆ. ಒಟ್ಟಾರೆ ಜನಸಂಖ್ಯೆಯ ಮೂವರಲ್ಲಿ ಒಬ್ಬರು ಹೈಪರ್ ಟೆನ್ಷನ್ ( ರಕ್ತದ...
ರಾಜ್ಯ ರಾಜಧಾನಿಯಲ್ಲಿ ರಾತ್ರಿಯಿಡೀ ಮಳೆ: ಮನೆಗಳು ಜಲಾವೃತ, ಧರೆಗುರುಳಿದ ಮರಗಳು
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ರಾತ್ರಿ ಇಡೀ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಹಲವು ಕಡೆ ಸಮಸ್ಯೆಯಾಗಿದ್ದು, ಬಿಬಿಎಂಪಿ ಅಧಿಕಾರಿ ಸಮಸ್ಯೆಯಾಗಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುವ...
ವಿವಾದಿತ ಜಮೀನಿನಲ್ಲಿ ಮಾವಿನಕಾಯಿ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ
ಹುಣಸೂರು: ವಿವಾದಿತ ಜಮೀನಿನಲ್ಲಿ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ರೈತನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಂಕಹಳ್ಳಿ ಗ್ರಾಮದ ನಿವಾಸಿ...
KKRTC: ಮಧ್ಯರಾತ್ರಿ ಕೆಟ್ಟುನಿಂತ ಎಸಿ ಬಸ್- 8ಗಂಟೆಗಳು ಪ್ರಯಾಣಿಕರ ಪರದಾಡಿಸಿದ ಡಿಎಂ ಅಮಾನತು ಮಾಡಿ ಎಂಡಿ ರಾಚಪ್ಪ ಆದೇಶ
ಮಧ್ಯರಾತ್ರಿ ಕೆಟ್ಟು ನಿಂತ ಕೆಕೆಆರ್ಟಿಸಿ ಬಸ್ । ಪರ್ಯಾಯ ವ್ಯವಸ್ಥೆ ಮಾಡದೆ ಡಿಪೋ ವ್ಯವಸ್ಥಾಪಕನ ನಿರ್ಲಕ್ಷ್ಯ ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KKRTC) ಸಂಸ್ಥೆಯ ಎಸಿ...