
ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಹಿಳಾ ಮಾಲೀಕರ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
Advertisemet
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದರು.
Advertisemet
ಇನ್ನು ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.
Advertisemet