CrimeNEWSನಮ್ಮಜಿಲ್ಲೆನಮ್ಮರಾಜ್ಯ

ಪ್ರತ್ಯೇಕ ಸ್ಥಳದಲ್ಲಿ ಬಿಎಂಟಿಸಿಯ ಇಬ್ಬರು ಚಾಲಕರ ಆತ್ಮಹತ್ಯೆ – ಅಧಿಕಾರಿಗಳ ಕಿರುಕುಳ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಇಬ್ಬರು ಚಾಲಕರು ಪತ್ಯೇಕ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

ಸಂಸ್ಥೆಯ ಜಿಗಣಿ ಘಟಕ 27ರ ಚಾಲಕರೊಬ್ಬರು ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಮನೆಯ ಫ್ಯಾನಿಗೆ ನೇಣುಬಿಗಿದುಕೊಂಡು ಸೋಮವಾರ (ಆ.29) ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಂಟಿಸಿ ಜಿಗಣಿ ಡಿಪೋ ಚಾಲಕ ರಾಜಕುಮಾರ್‌ (43) ಆತ್ಮಹತ್ಯೆ ಮಾಡಿಕೊಂಡವರು. ಅಧಿಕಾರಿಗಳ ಕಿರುಕುಳಕ್ಕೆ ಒಂದೇ ದಿನ ಬಿಎಂಟಿಸಿಯ ಇಬ್ಬರು ಚಾಲಕರು ಜೀವಕಳೆಕೊಂಡಿರುವುದು ಮನಕಲಕುವಂತಿದೆ.

ಚಾಲಕ ರಾಜಕುಮಾರ ಅವರಿಗೆ ಪಾರ್ಶ್ವವಾಯು ಹೊಡೆದಿತ್ತು. ಹೀಗಾಗಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಲೈಟ್‌ ಡ್ಯೂಟಿ ಕೊಡಲಾಗಿತ್ತು. ಆದರೆ, ಅಧಿಕಾರಿಗಳು ಚಾಲಕರ ಕೊರತೆಯಿದ್ದು ನೀವು ಚಾಲಕರಾಗಿ ಹೋಗಬೇಕು ಎಂದು ಅವರಿಗೆ ಕಿರುಕುಳ ಕೊಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇಂದು ಮಧ್ಯಾಹ್ನ ಚನ್ನಸಂದ್ರ ಡಿಪೋನ ಚಾಲಕ ಹೊಳೆ ಬಸಪ್ಪ ಆವರು ಕೂಡ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಡಿಪೋ ಒಳಗೆ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಬೆನ್ನಲ್ಲೇ ಬಿಎಂಟಿಸಿಯ ಮತ್ತೊಬ್ಬ ಚಾಲಕ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ಅಧಿಕಾರಿಗಳ ಕಿರುಕುಳ ಎಷ್ಟಿರಬಹುದು ಎಂದು ಊಹಿಸಲು ಸಾಧ್ಯವಿಲ್ಲ ಎನಿಸುತ್ತಿದೆ.

ರಾಜಕುಮಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಮನೆಯವರು ಯಾರು ಸ್ಥಳದಲ್ಲಿ ಇಲ್ಲದ ಕಾರಣ ನಾವು ಬರುವವರೆಗೂ ಬಾಡಿ ಇಳಿಸಬೇಡಿ ಎಂದು ತಿಳಿಸಿರುವುದರಿಂದ ಇನ್ನು ಮೃತದೇಹವನ್ನು ಇಳಿಸಿಲ್ಲ ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ