NEWSನಮ್ಮಜಿಲ್ಲೆನಮ್ಮರಾಜ್ಯ

ಅನುಚಿತ ಪ್ರಭಾವ – ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿ, 4.82 ಕೋಟಿ ಹಣವನ್ನು ಜಪ್ತಿ ಮಾಡಿದ್ದರು.

ಅಧಿಕಾರಿಗಳು ಹಣ ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸ್‌ ಕೊಡಿಸುವಂತೆ” ಹೇಳಿದ್ದಾರೆ.

ಜತೆಗೆ ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್​ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದಾರೆ. ಈ ವಿಚಾರವಾಗಿ ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ್ದರು. ಬಳಿಕ ಎಸ್​ಎಸ್​ಟಿ ತಂಡದ ಮುಖ್ಯಸ್ಥ ದಶರಥ್​ ವಿ. ಕಂಬಾರ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುಧಾಕರ್ ವಿರುದ್ಧ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಾಚಾರದ ಪ್ರಯತ್ನ ಮಾಡಿದ್ದಕ್ಕಾಗಿ RP ಕಾಯಿದೆ 1951ರ ಅಡಿಯಲ್ಲಿ ಸೆಕ್ಷನ್ 171ಇ (ಲಂಚ ಸ್ವೀಕಾರ), 171ಎಫ್​ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರುವಿಕೆ) 171ಬಿ (ಮತದಾರರಿಗೆ ಹಣದ ಆಮಿಷ), 171ಸಿ (ಚುನಾವಣೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಸ್ತಕ್ಷೇಪ) ಆರೋಪದಡಿ ಎಫ್​ಐಆರ್ ದಾಖಲಾಗಿದೆ.

ದಾಳಿ ನಡೆದಿದ್ದು ಹೇಗೆ?: ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಶುಕ್ರವಾರ (ಏ.25) ದಾಳಿ ಮಾಡಿದ್ದರು. 10 ಜನ ಐಟಿ ಅಧಿಕಾರಿಗಳು ಮನೆಯ ಇಂಚಿಂಚು ಪರಿಶೀಲನೆ ಮಾಡಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿತ್ತು.

ಕೂಡಲೇ ಐಟಿ ಸಿಬ್ಬಂದಿ ಹಣ ಎಣಿಕೆ ಮೆಷಿನ್ ಹಾಗೂ ಚಿನ್ನಭರಣ ತೂಕದ ಮೆಷಿನ್ ತೆಗೆದುಕೊಂಡು ಬಂದು ಎಣಿಕೆ ಮಾಡಿದ್ದು, ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ