NEWSದೇಶ-ವಿದೇಶನಮ್ಮರಾಜ್ಯ

ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು

ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.

ನಾಳೆ ರಾಹುಲ್ ಗಾಂಧಿಯವರು ಸಮಯ ನೀಡಿದರೆ ಭೇಟಿಯಾಗುತ್ತೇನೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮ – ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ