KSRTC ಸೇವೆ- ನಿರ್ವಹಣೆಗೆ ಮಾರುಹೋದ ಯುಪಿ ಸರ್ಕಾರ, ಅಧಿಕಾರಿಗಳ ತಂಡ ಕಳುಹಿಸಿ ಇನ್ನಷ್ಟು ಮಾಹಿತಿ ಸಂಗ್ರಹ
ಬೆಂಗಳೂರು: ಎಲ್ಲೆಡೆ ಯುಪಿ ಮಾಡೆಲ್ ಎನ್ನುವ ಚರ್ಚೆಯ ನಡುವೆ ಯುಪಿಯಲ್ಲೇ ಕರ್ನಾಟಕ ಮಾಡೆಲ್ನ ಚಿಂತನೆ ನಡೆದಿದ್ದು ಕುತೂಹಲಮೂಡಿಸಿದೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಉಪಕ್ರಮಗಳಿಗೆ ಉತ್ತರ ಪ್ರದೇಶ ಸರ್ಕಾರ ಫಿದಾ ಆಗಿದ್ದು, ಸಾಮಾನ್ಯ ಸಾರಿಗೆ ಹಾಗೂ ಪ್ರೀಮಿಯಂ ಸೇವೆಗಳೆರಡರ ನಿರ್ವಹಣೆಗೂ ಮಾರುಹೋಗಿದ್ದು ಯುಪಿ ಸರ್ಕಾರದ ಅಧಿಕಾರಿಗಳ ನಿಯೋಗವೇ KSRTC ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.
ಹೌದು! ನಿನ್ನೆ ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳ ತಂಡದ ಯುಪಿಆರ್ಟಿಸಿ ನಿಯೋಗ KSRTC ಕೇಂದ್ರ ಕಚೇರಿಗೆ ಭೇಟಿ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆ ನಿರ್ವಾಹಣೆ ಬಗ್ಗೆ ಮಾಹಿತಿ ಸಂಗ್ರಹಿಸಿದೆ.
ಮುಖ್ಯ ಮಂತ್ರಿ ಯೋಗಿಆದಿತ್ಯ ನಾಥ್ ಅವರ ಸಲಹೆಗಾರ ಡಾ.ಕೆ.ವಿ.ರಾಜು, ಯುಪಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್. ವೆಂಕಟೇಶ್ವರಲು ಹಾಗೂ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಂ.ಕೆ.ಷಣ್ಮುಗ ಸುಂದರಂ ಸೇರಿದಂತೆ ಅಧಿಕಾರಿಗಳ ತಂಡವು ಶಾಂತಿನಗರದಲ್ಲಿರುವ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರ ಪಡೆದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಯುಪಿ ನಿಯೋಗಕ್ಕೆ ಅಗತ್ಯ ಮಾಹಿತಿ ಒದಗಿಸಿದರು. ನಂತರ ತಂಡ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಟಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್ಗಳ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್ಗೆ ಭೇಟಿ ಕೊಟ್ಟಿತು. ಪ್ರೀಮಿಯಂ ಸೇವೆಗಳ ಉಪಕ್ರಮಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿತು.
ಈ ಹಿಂದೆ KSRTC ಕೇಂದ್ರ ಕಚೇರಿಗೆ ಭೇಟಿ ನೀಡದ ಯುಪಿ ಅಧಿಕಾರಿಗಳ ನಿಯೋಗ ಸಚಿವ ರಾಮಲಿಂಗಾರೆಡ್ಡಿ ಜತೆ ಸಮಾಲೋಚನೆ ನಡೆಸಿ ಗ್ರಾಮೀಣ ಸಾರಿಗೆ, ನಗರ ಸಾರಿಗೆ, ವೇಗದೂತ, ರಾಜಹಂಸ, ಹವಾನಿಯಂತ್ರಣ ರಹಿತ ಸ್ಲೀಪರ್, ಎಸಿ ಸ್ಲೀಪರ್, ವೋಲ್ವೋ, ಮಲ್ಟಿ ಆಕ್ಸಲ್ ವೋಲ್ವೋ, ಮಲ್ಟಿ ಆ್ಯಕ್ಸಲ್ ಸ್ಲೀಪರ್ಜತೆಗೆ ಅಂತರ್ಜಿಲ್ಲೆಗಳಿಗೆ ಎಸಿ ವಿದ್ಯುತ್ ಚಾಲಿತ ಬಸ್ಗಳನ್ನು ಕಾರ್ಯಾಚರಿಸುತ್ತಿರುವ ವಿವರ ಪಡೆದುಕೊಂಡಿತು.
ಇನ್ನು ಈ ಎಲ್ಲ ವಿವರಗಳ ವರದಿ ಮೆಚ್ಚಿರುವ ಉತ್ತರಪ್ರದೇಶ ಸಾರಿಗೆ ಇಲಾಖೆ KSRTC ಉಪಕ್ರಮಗಳ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾಹಿತಿ ನೀಡಿತ್ತು . ಆ ವರದಿ ಹಿನ್ನೆಲೆಯಲ್ಲಿ ಖುದ್ದು ತಮ್ಮ ಸಲಹೆಗಾರರ ನೇತೃತ್ವದ ತಂಡವನ್ನೇ ಕರ್ನಾಟಕಕ್ಕೆ ಕಳಿಸಿಕೊಟ್ಟಿರುವ ಯೋಗಿ, KSRTC ಉಪಕ್ರಮಗಳ ಬಗ್ಗೆ ಮತ್ತಷ್ಟು ವಿವರ ಪಡೆದುಕೊಂಡು ಬರುವಂತೆ ಸೂಚಿಸಿದ್ದಾರೆ. ಅದರಂತೆ ಅಧಿಕಾರಗಳ ತಂಡ ಬಂದು ಹೋದ 10 ದಿನದಲ್ಲೇ ಸಿಎಂ ಸಲಹೆಗಾರರ ನಿಯೋಗ ರಾಜ್ಯಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದೆ.

Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...