NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಧಿವೇಶನದಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಕೋಲಾಹಲ : ಸದನದ ಬಾವಿಗಿಳಿದು ವಿಪಕ್ಷಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸದನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಆಡಳಿ ಮತ್ತು ವಿಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆದಿದ್ದು, ಸದನದಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಪಟ್ಟುಹಿಡಿದರು ಈ ವೇಳೆ ಸಚಿವ ಗೋವಿಂದ ಕಾರಜೋಳ ಅವರು ವಿಪಕ್ಷ ಶಾಸಕರ ವಿರುದ್ಧ ಏಕವಚನ ಪ್ರಯೋಗ ಮಾಡಿದರು. ಹೀಗಾಗಿ ಸದಸನಲ್ಲಿ ಕೋಲಹಲವೇ ಸೃಷ್ಟಿಯಾಯಿತು.

ಇದನ್ನು ಖಂಡಿಸಿ ಸದನದ ಬಾವಿಗಿಳಿದು ವಿಪಕ್ಷ ಶಾಸಕರು ಆಡಳಿತ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಸರ್ಕಾರದ ಸಚಿವರ ನಡೆಯನ್ನು ಖಂಡಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಇನ್ನು ನೌಕರರ ಬೇಡಿಕೆ ಈಡೆರಿಸುವಲ್ಲಿ ಸರ್ಕಾರಕ್ಕೆ ಏನು ಸಮಸ್ಯೆಯಾಗಿದೆ ಎಂದು ಕಿಡಿಕಾರಿದ ವಿಪಕ್ಷಗಳಿಗೆ ಸಚಿವ ಶ್ರೀರಾಮುಲು ಅವರು ಈ ಬಗ್ಗೆ ಈಗಾಗಲೇ ಮಾತುಕತೆ ಮಾಡಿದ್ದೇನೆ ಸದನ ಮುಕ್ತಾಯವಾಗುವುದರೊಳಗೆ ತೀರ್ಮಾನವಾಗಲಿದೆ ಎಂದು ಉತ್ತರ ನೀಡಿದರು.

ಈ ವೇಳೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು ಎಂಬ ಬಗ್ಗೆ ಮಾತನಾಡಲು ಜೆಡಿಎಸ್ ಶಾಸಕ ಡಿ.ಸಿ. ತಮ್ಮಣ್ಣ ಮತ್ತು ಕಾಂಗ್ರೆಸ್‌ ಶಾಸಕರಿಗೆ ಮಾತನಾಡಲು ಅವಕಾಶ ನೀಡದಂತೆ ಬಿಜೆಪಿಯ ಸಚಿವರು ಪಟ್ಟು ಹಿಡಿದ್ದಾರೆ. ಇದರಿಂದ ಸದಸನಲ್ಲಿ ಗದ್ದಲ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ