Search By Date & Category

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಧಿವೇಶನದಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಕೋಲಾಹಲ : ಸದನದ ಬಾವಿಗಿಳಿದು ವಿಪಕ್ಷಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸದನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಆಡಳಿ ಮತ್ತು ವಿಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆದಿದ್ದು, ಸದನದಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಪಟ್ಟುಹಿಡಿದರು ಈ ವೇಳೆ ಸಚಿವ ಗೋವಿಂದ ಕಾರಜೋಳ ಅವರು ವಿಪಕ್ಷ ಶಾಸಕರ ವಿರುದ್ಧ ಏಕವಚನ ಪ್ರಯೋಗ ಮಾಡಿದರು. ಹೀಗಾಗಿ ಸದಸನಲ್ಲಿ ಕೋಲಹಲವೇ ಸೃಷ್ಟಿಯಾಯಿತು.

ಇದನ್ನು ಖಂಡಿಸಿ ಸದನದ ಬಾವಿಗಿಳಿದು ವಿಪಕ್ಷ ಶಾಸಕರು ಆಡಳಿತ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಸರ್ಕಾರದ ಸಚಿವರ ನಡೆಯನ್ನು ಖಂಡಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಇನ್ನು ನೌಕರರ ಬೇಡಿಕೆ ಈಡೆರಿಸುವಲ್ಲಿ ಸರ್ಕಾರಕ್ಕೆ ಏನು ಸಮಸ್ಯೆಯಾಗಿದೆ ಎಂದು ಕಿಡಿಕಾರಿದ ವಿಪಕ್ಷಗಳಿಗೆ ಸಚಿವ ಶ್ರೀರಾಮುಲು ಅವರು ಈ ಬಗ್ಗೆ ಈಗಾಗಲೇ ಮಾತುಕತೆ ಮಾಡಿದ್ದೇನೆ ಸದನ ಮುಕ್ತಾಯವಾಗುವುದರೊಳಗೆ ತೀರ್ಮಾನವಾಗಲಿದೆ ಎಂದು ಉತ್ತರ ನೀಡಿದರು.

ಈ ವೇಳೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು ಎಂಬ ಬಗ್ಗೆ ಮಾತನಾಡಲು ಜೆಡಿಎಸ್ ಶಾಸಕ ಡಿ.ಸಿ. ತಮ್ಮಣ್ಣ ಮತ್ತು ಕಾಂಗ್ರೆಸ್‌ ಶಾಸಕರಿಗೆ ಮಾತನಾಡಲು ಅವಕಾಶ ನೀಡದಂತೆ ಬಿಜೆಪಿಯ ಸಚಿವರು ಪಟ್ಟು ಹಿಡಿದ್ದಾರೆ. ಇದರಿಂದ ಸದಸನಲ್ಲಿ ಗದ್ದಲ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

Leave a Reply

error: Content is protected !!