ಬೆಂಗಳೂರು: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.
ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ ಹಸಿರೆಲೆ ಗೊಬ್ಬರ/ ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.
ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.
ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ.
ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.
ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.
ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...