NEWSದೇಶ-ವಿದೇಶರಾಜಕೀಯ

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್

ನಿನ್ನೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ ನಂತರ, ರಾಜ್ಯಪಾಲರು ಸರ್ಕಾರ ರಚನೆಗೆ ಅನುಮೋದನೆ ನೀಡಿದರು.

ವಿಜಯಪಥ ಸಮಗ್ರ ಸುದ್ದಿ

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್ ಸೋಮವಾರ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಪ್ರಮಾಣ ವಚನ ಬೋಧಿಸಿದರು.

ಇವರ ಜತೆಗೆ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ.ಪಿ.ಅನಿಲ್ ಕುಮಾರ್, ಪಿ.ಸಿ.ವಿಷ್ಣುನಾಧ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ. ಜಾನ್, ಕೆ.ಎ ತುಳಸಿ ಮತ್ತು ಒ.ಜೆ.ಜನೀಶ್ ಕಾಂಗ್ರೆಸ್ ಸಚಿವರಾಗಿದ್ದಾರೆ. ಜೊತೆಗೆ ಪಿ.ಕೆ. ಕುನ್ಹಾಲಿಕುಟ್ಟಿ, ಕೆ.ಎಂ. ಶಾಜಿ, ಎನ್. ಶಂಸುದ್ದೀನ್, ಪಿ.ಕೆ. ಬಶೀರ್ ಮತ್ತು ವಿ.ಇ.ಅಬ್ದುಲ್ ಗಫೂರ್, ಮಾನ್ಸ್ ಜೋಸೆಫ್ (ಕೆಸಿ-ಜೋಸೆಫ್), ಅನೂಪ್ ಜೇಕಬ್ (ಕೆಸಿ-ಜೇಕಬ್), ಶಿಬು ಬೇಬಿ ಜಾನ್ (ಆರ್‌ಎಸ್‌ಪಿ) ಮತ್ತು ಸಿಪಿ ಜಾನ್ (ಸಿಎಂಪಿ) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಿನ್ನೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ ನಂತರ, ರಾಜ್ಯಪಾಲರು ಸರ್ಕಾರ ರಚನೆಗೆ ಅನುಮೋದನೆ ನೀಡಿದರು. ಇಡೀ ಯುಡಿಎಫ್ ಸಚಿವಾಲಯ ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಲಿದೆ. ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಯುಡಿಎಫ್ ಸಂಪುಟ ಏಕಕಾಲದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭ ಇದಾಗಿದೆ.

Megha
the authorMegha

Leave a Reply

error: Content is protected !!
Latest news
ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ