ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್ ಪ್ರಮಾಣ ವಚನ ಸ್ವೀಕಾರ
ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರಿವರು: ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ.ಸಿ ವಿಷ್ಣುನಾಧ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ. ಜಾನ್, ಕೆ.ಎ ತುಳಸಿ ಮತ್ತು ಒ.ಜೆ ಜನೀಶ್ ಕಾಂಗ್ರೆಸ್ ಸಚಿವರಾಗಿದ್ದಾರೆ. ಜತೆಗೆ ಪಿ.ಕೆ ಕುನ್ಹಾಲಿಕುಟ್ಟಿ, ಕೆ.ಎಂ. ಶಾಜಿ, ಎನ್ ಶಂಸುದ್ದೀನ್, ಪಿ.ಕೆ. ಬಶೀರ್ ಮತ್ತು ವಿ.ಇ. ಅಬ್ದುಲ್ ಗಫೂರ್, ಮಾನ್ಸ್ ಜೋಸೆಫ್ (ಕೆಸಿ-ಜೋಸೆಫ್), ಅನೂಪ್ ಜೇಕಬ್ (ಕೆಸಿ-ಜೇಕಬ್), ಶಿಬು ಬೇಬಿ ಜಾನ್ (ಆರ್ಎಸ್ಪಿ) ಮತ್ತು ಸಿಪಿ ಜಾನ್ (ಸಿಎಂಪಿ) ಇತರ ಸಚಿವರು ನಾಮನಿರ್ದೇಶನಗೊಂಡಿದ್ದಾರೆ.

ತಿರುವನಂತಪುರಂ: ಕೇರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ವಿ.ಡಿ. ಸತೀಶನ್ ಹಾಗೂ ಇತರ 20 ಮಂದಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ಸತೀಶನ್ ಭಾನುವಾರ (ನಿನ್ನೆ) ಯುಡಿಎಫ್ ಮೈತ್ರಿಕೂಟದ ಸಚಿವ ಸಂಪುಟವನ್ನು ಅನಾವರಣಗೊಳಿಸಿದರು. 21 ಸಚಿವರಲ್ಲಿ ಸತೀಶನ್ ಸೇರಿದಂತೆ 14 ಮಂದಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಅಲ್ಲದೇ ಸಂಪುಟದಲ್ಲಿ ಇಬ್ಬರು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಸಮುದಾಯದ ಇಬ್ಬರು ಸದಸ್ಯರು ಸೇರಿದ್ದಾರೆ.
ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ ನಂತರ, ರಾಜ್ಯಪಾಲರು ಸರ್ಕಾರ ರಚನೆಗೆ ಅನುಮೋದನೆ ನೀಡಿದರು. ಇಡೀ ಯುಡಿಎಫ್ ಸಚಿವಾಲಯ ಇಂದು ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಲಿದೆ. ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಯುಡಿಎಫ್ ಸಂಪುಟ ಏಕಕಾಲದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭ ಇದಾಗಿದೆ.
ಸಂಪುಟದಲ್ಲಿ ಸ್ಥಾನ ಪಡೆದುಕೊಂಡ ಕಾಂಗ್ರೆಸ್ನ 11 ಶಾಸಕರು : ಇನ್ನು ಮುಖ್ಯಮಂತ್ರಿ ಹುದ್ದೆಯೊಂದಿಗೆ 11 ಮಂದಿ ಕಾಂಗ್ರೆಸ್ ಶಾಸಕರು ಕೇರಳ ನೂತನ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನ ಐವರು, ಕೇರಳ ಕಾಂಗ್ರೆಸ್ (ಜೋಸೆಫ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್ಎಸ್ಪಿ), ಕೇರಳ ಕಾಂಗ್ರೆಸ್ (ಜಾಕೋಬ್) ಮತ್ತು ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ (ಸಿಎಂಪಿ) ಗಳು ತಲಾ ಒಂದು ಸ್ಥಾನ ಪಡೆದುಕೊಂಡಿವೆ.
ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರಿವರು: ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ.ಸಿ ವಿಷ್ಣುನಾಧ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ. ಜಾನ್, ಕೆ.ಎ ತುಳಸಿ ಮತ್ತು ಒ.ಜೆ ಜನೀಶ್ ಕಾಂಗ್ರೆಸ್ ಸಚಿವರಾಗಿದ್ದಾರೆ. ಜತೆಗೆ ಪಿ.ಕೆ ಕುನ್ಹಾಲಿಕುಟ್ಟಿ, ಕೆ.ಎಂ. ಶಾಜಿ, ಎನ್ ಶಂಸುದ್ದೀನ್, ಪಿ.ಕೆ. ಬಶೀರ್ ಮತ್ತು ವಿ.ಇ. ಅಬ್ದುಲ್ ಗಫೂರ್, ಮಾನ್ಸ್ ಜೋಸೆಫ್ (ಕೆಸಿ-ಜೋಸೆಫ್), ಅನೂಪ್ ಜೇಕಬ್ (ಕೆಸಿ-ಜೇಕಬ್), ಶಿಬು ಬೇಬಿ ಜಾನ್ (ಆರ್ಎಸ್ಪಿ) ಮತ್ತು ಸಿಪಿ ಜಾನ್ (ಸಿಎಂಪಿ) ಇತರ ಸಚಿವರು ನಾಮನಿರ್ದೇಶನಗೊಂಡಿದ್ದಾರೆ.
ಡಿಕೆಶಿ, ಖರ್ಗೆ ಕೇರಳಕ್ಕೆ: ಇಂದು ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕ ಉಪಮುಖ್ಯಮಂತ್ರು ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇರಳಕ್ಕೆ ತೆರಳಲಿದ್ದು, ನೂತನ ಸಿಎಂ ಹಾಗೂ ಸಚಿವರಿಗೆ ಶುಭಕೋರಲಿದ್ದಾರೆ.
Related









