NEWSಕೃಷಿನಮ್ಮರಾಜ್ಯ

ದ.ಕ.ದಲ್ಲಿ ವರುಣನ ಅಬ್ಬರ- ಮಣ್ಣಗುಂಡಿ ಬಳಿ ಗುಡ್ಡಕುಸಿತ: BM ಹೆದ್ದಾರಿ ಬಂದ್

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸಂಚಾರಕ್ಕೆ ಯಾವುದೆ ಅಡಚಣೆ ಇಲ್ಲ.

ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಮಣ್ಣಗುಂಡಿ ಬಳಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ-75ರ ಮೇಲೆ ಎರಡು ಬದಿ ಮಣ್ಣು ಕುಸಿದಿದ್ದು, ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆ ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ಲಾರಿ, ಬಸ್, ಟ್ರಕ್‌ಗಳ ಸಂಚಾರ ಸ್ಥಗಿತಗೊಂಡಿದೆ.

ಈ ನಡುವೆಯೂ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ, ಧರ್ಮಸ್ಥಳ ಕ್ರಾಸ್‌ನಿಂದ ಸ್ವಲ್ಪ ಮುಂದೆ ಕುಸಿತ ಉಂಟಾಗಿದೆ. ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ.75ನ್ನು ತಲುಪಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ.

ಮಂಗಳೂರಿನ ಕದ್ರಿ ಹಿಲ್ಸ್‌ನ ಸರ್ಕ್ಯೂಟ್ ಹೌಸ್ ಬಳಿ ರಸ್ತೆ ಮೇಲೆ ಬೃಹತ್ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಕಲ್ಲು, ಮಣ್ಣು ರಸ್ತೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಇನ್ನು ಈ ರಸ್ತೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಬಿದ್ದಿರೋದ್ರಿಂದ ಯಾವುದೇ ಅನಾಹುತವಾಗಿಲ್ಲ. ಇತ್ತ ರಸ್ತೆಗೆ ಬಿದ್ದಿರೋ ಕಲ್ಲು, ಮಣ್ಣನ್ನು ಪಾಲಿಕೆ ಸಿಬ್ಬಂದಿಗಳು ತೆರವುಗೊಳಿಸುತ್ತಿದ್ದಾರೆ.

ಮೇರಿಹಿಲ್‌ನ ಕೆನರಾ ವಿಕಾಸ ಕಾಲೇಜಿನ ಕಾಂಪೌಂಡ್ ಗೋಡೆ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ 16 ಬೈಕ್ ಹಾಗೂ ಒಂದು ಇನೋವಾ ಕಾರ್ ಸಂಪೂರ್ಣವಾಗಿ ಹಾನಿಯಾಗಿದೆ. ಕಾಂಪೌಂಡ್ ಕುಸಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Megha
the authorMegha

Leave a Reply

error: Content is protected !!
Latest news
BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ ನ್ಯಾಯಾಲಯದ ಆದೇಶ ಪಾಲಿಸದ KKRTC: ಮೃತರ ಕುಟುಂಬಕ್ಕೆ 36 ಲಕ್ಷ ರೂ. ಪರಿಹಾರ ನೀಡದಕ್ಕೆ ಔರಾದ್ ಘಟಕದ 2ಬಸ್‌ಗಳ ಜಪ್ತಿ ಸರ್ಕಾರದಿಂದ ಹೊರಬಿತ್ತು ಮಹತ್ವದ ಆದೇಶ: ಇನ್ನುಮುಂದೆ ಸರ್ಕಾರಿ ಪುರುಷ ನೌಕರರು ಪಡೆಯಬಹುದು 6ತಿಂಗಳ ಶಿಶುಪಾಲನಾ ರಜೆ KSRTC: ಇಂದಿನಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಣೆಗೆ ಸರ್ಕಾರದ ಆದೇಶ ಬಿಡದಿ ಟೌನ್ ಶಿಪ್‌: ರೈತರ ವಿರೋಧದ ನಡುವೆಯೂ ಎಕರೆಗೆ 2.14 ಕೋಟಿ ರೂ. ದರ ನಿಗದಿ- ಭೂಸ್ವಾಧೀನಕ್ಕೆ ಮುಂದಾದ ಸರ್ಕಾರ ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ...