NEWSಕೃಷಿನಮ್ಮರಾಜ್ಯ

ದ.ಕ.ದಲ್ಲಿ ವರುಣನ ಅಬ್ಬರ- ಮಣ್ಣಗುಂಡಿ ಬಳಿ ಗುಡ್ಡಕುಸಿತ: BM ಹೆದ್ದಾರಿ ಬಂದ್

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸಂಚಾರಕ್ಕೆ ಯಾವುದೆ ಅಡಚಣೆ ಇಲ್ಲ.

ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಮಣ್ಣಗುಂಡಿ ಬಳಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ-75ರ ಮೇಲೆ ಎರಡು ಬದಿ ಮಣ್ಣು ಕುಸಿದಿದ್ದು, ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆ ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ಲಾರಿ, ಬಸ್, ಟ್ರಕ್‌ಗಳ ಸಂಚಾರ ಸ್ಥಗಿತಗೊಂಡಿದೆ.

ಈ ನಡುವೆಯೂ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ, ಧರ್ಮಸ್ಥಳ ಕ್ರಾಸ್‌ನಿಂದ ಸ್ವಲ್ಪ ಮುಂದೆ ಕುಸಿತ ಉಂಟಾಗಿದೆ. ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ.75ನ್ನು ತಲುಪಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ.

ಮಂಗಳೂರಿನ ಕದ್ರಿ ಹಿಲ್ಸ್‌ನ ಸರ್ಕ್ಯೂಟ್ ಹೌಸ್ ಬಳಿ ರಸ್ತೆ ಮೇಲೆ ಬೃಹತ್ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಕಲ್ಲು, ಮಣ್ಣು ರಸ್ತೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಇನ್ನು ಈ ರಸ್ತೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಬಿದ್ದಿರೋದ್ರಿಂದ ಯಾವುದೇ ಅನಾಹುತವಾಗಿಲ್ಲ. ಇತ್ತ ರಸ್ತೆಗೆ ಬಿದ್ದಿರೋ ಕಲ್ಲು, ಮಣ್ಣನ್ನು ಪಾಲಿಕೆ ಸಿಬ್ಬಂದಿಗಳು ತೆರವುಗೊಳಿಸುತ್ತಿದ್ದಾರೆ.

ಮೇರಿಹಿಲ್‌ನ ಕೆನರಾ ವಿಕಾಸ ಕಾಲೇಜಿನ ಕಾಂಪೌಂಡ್ ಗೋಡೆ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ 16 ಬೈಕ್ ಹಾಗೂ ಒಂದು ಇನೋವಾ ಕಾರ್ ಸಂಪೂರ್ಣವಾಗಿ ಹಾನಿಯಾಗಿದೆ. ಕಾಂಪೌಂಡ್ ಕುಸಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Megha
the authorMegha

Leave a Reply

error: Content is protected !!
Latest news
ನೌಕರರ 18 ತಿಂಗಳ ಬಾಕಿ ಹಣ 6 ಕಂತುಗಳಲ್ಲಿ ನೀಡಲಾಗುವುದು: ವಿತ್ತ ಸಚಿವರ ಭರವಸೆ KSRTC ಕೋಲಾರ ವಿಭಾಗದ ಅಧಿಕಾರಿಗಳ ದರ್ಪ- ಚಾಲಕರ ಹೆದರಿಸಿ ವಿಶ್ರಾಂತಿ ರಹಿತ ಡಬಲ್‌ ಡ್ಯೂಟಿ, ಸಿಂಗಲ್‌ ಪೇಮೆಂಟ್‌, ಒಟಿ ... BMTC: ಕರ್ತವ್ಯದಲಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಾವು- ಪರಿಹಾರಕ್ಕೆ ಆಗ್ರಹಿಸಿ ಚಾಲಕರಿಂದ ಡಿಪೋ ಬಳಿ ಪ್ರತಿಭಟನೆ ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ