ಬೆಂಗಳೂರು: ಸ್ಯಾಂಡಲ್ವುಡ್ ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ 77 ವರ್ಷದ ಬ್ಯಾಂಕ್ ಜನಾರ್ಧನ್ ಅವರು ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ತಡರಾತ್ರಿ 2.30ರಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3–4 ಗಂಟೆ ವೇಳೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯ: ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು 500ಕ್ಕೂ ಹೆಚ್ಚು ಚಲನ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತಮ್ಮ ಛಾಪು ಮೂಡಿಸಿ ಕನ್ನಡಿಗರ ಮನಗೆದ್ದಿದ್ದಾರೆ.
80, 90ರ ದಶಕದಲ್ಲಿ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಅವರು, ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ.
ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದು ಸಿನಿಮ ರಸಿಕರ ಮನಸೂರೆಗೊಂಡಿದ್ದಾರೆ.
ಗಣ್ಯರ ಕಂಬನಿ: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ ಎಂಬ ವಿಷಯಕೇಳಿ ಸ್ಯಾಂಡಲ್ವುಡ್ ಮಂದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಅವರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Related

You Might Also Like
ಪ್ರಧಾನಿ ಮೋದಿ ಪ್ರಚಾರದಿಂದಷ್ಟೇ ಬದುಕಿರುವುದು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದಿಂದ ಬದುಕಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ...
ಖಾತೆ ಬದಲಾಯಿಸುವಂತೆ ಕೇಳಿಲ್ಲ- ಗಣನೆಗೆ ತೆಗೆದುಕೊಳ್ಳುವುದು ಬೇಡ: ಪರವೇಶ್ವರ್
ಬೆಂಗಳೂರು: ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಜತೆಗೆ ಈಗ ಖಾತೆ ಬದಲಾಯಿಸುವಂತೆಯೂ ಕೇಳಿಲ್ಲ. ಸುಳ್ಳುಸುದ್ದಿ ಗಣನೆಗೆ ತೆಗೆದುಕೊಳ್ಳುವುದು ಬೇಡ ಎಂದು...
ತುಮಕೂರಿಗೆ ಅರ್ಬನ್, ಮೆಟ್ರೋ ರೈಲು ಎರಡು ಬರಲಿ: ಗೃಹ ಸಚಿವ ಜಿ.ಪರಮೇಶ್ವರ
ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ತುಮಕೂರು ಜಿಲ್ಲಾ...
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...