NEWSಮೈಸೂರುಸಂಸ್ಕೃತಿ

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಬಾನು ಮುಷ್ತಾಕ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಇಂದು ಚಾಲನೆ ಸಿಕ್ಕಿದೆ. ನಾಡಿನ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದರು.

ಸೋಮವಾರ ಬೆಳಗ್ಗೆ ವೃಶ್ಚಿಕ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಮೈಸೂರು ದಸರಾ’ಗೆ ಚಾಲನೆ ನೀಡಿದರು. ಉದ್ಘಾಟನೆಗೂ ಮುನ್ನ, ಬಾನು ಮುಷ್ತಾಕ್​ ಅವರು ಕುಟುಂಬ ಸಮೇತ ಚಾಮುಂಡಿ ಸನ್ನಿಧಿಗೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಅಂದರೆ ಬಾನು ಮುಷ್ತಾಕ್ ಅವರು ಕೇಸರಿ ಬಣ್ಣದ ಸೀರೆ, ಹಸಿರು ಬಣ್ಣದ ರವಿಕೆ, ತಲೆಯಲ್ಲಿ ಮಲ್ಲಿಗೆ ಹೂ ಮೂಡಿದು ಬಂದಿದ್ದರು. ಚಾಮುಂಡಿತಾಯಿ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿದ ಮುಷ್ತಾಕ್ ಅವರನ್ನು ಅಭಿನಂದಿಸಲಾಯಿತು.

ಇನ್ನು ಬಿಜೆಪಿ ನಾಯಕರ ಹೇಳಿಕೆಗೆ ಬಾನು ಮುಷ್ತಾಕ್ ಸೆಡ್ಡು ಹೊಡೆದರು. ದಸರಾ ಉದ್ಘಾಟನೆಗೆ ಬಾನು ಅವರ ಆಯ್ಕೆಯನ್ನು ಬಿಜೆಪಿ ಪ್ರಶ್ನೆ ಮಾಡಿತ್ತು. ಅಲ್ಲದೇ ಚಾಮುಂಡಿ ಸನ್ನಿಧಿಗೆ ಹೋಗುವ ಅವರು ಮಂಗಳಾರತಿ ತಗೋತಾರ? ಕೈಮುಗಿತಾರ ಅಂತಾ ಬಿಜೆಪಿ ಹೇಳಿತ್ತು. ಆದರೆ ಮುಷ್ತಾಕ್ ಅವರು ಚಾಮುಂಡೇಶ್ವರಿಗೆ ಕೈಮುಗಿದು, ಮಂಗಳಾರತಿ ತೆಗೆದುಕೊಂಡು ಭಾವುಕರಾದರು.

ದಸರಾ ಉದ್ಘಾಟಿಸಿ ಮಾತನಾಡಿದ ಬಾನು ಅವರು, ಪ್ರೀತಿಯ ಸಮಾಜ ಕಟ್ಟೋಣ, ಎಲ್ಲರಿಗೂ ಸಮಪಾಲು ಸಮಬಾಳು ಇರಲಿ. ನಾನು ನೂರಾರು ದೀಪಗಳನ್ನು ಬೆಳಗಿದ್ದೇನೆ. ಇವತ್ತು ಪುಷ್ಪಾರ್ಚನೆ ಮಾಡಿದೇನೆ ಎಂದರು.

ಅಲ್ಲದೆ ಮಂಗಳಾರತಿ ಸ್ವೀಕರಿಸಿದ್ದೇನೆ. ನನ್ನ ಹಿಂದೂ ಧರ್ಮದ ಸಂಬಂಧ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟ ಆಗಲಿದೆ. ಎಷ್ಟೇ ಸವಾಲು ಬಂದ್ರೂ ದಿಟ್ಟವಾಗಿ ಆಹ್ವಾನ ನೀಡಿ ನೈತಿಕ ಬೆಂಬಲ ಕೊಟ್ಟ ಸಿಎಂ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ ಎಂದರು.

Megha
the authorMegha

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ