NEWSಮೈಸೂರುಸಂಸ್ಕೃತಿ

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಬಾನು ಮುಷ್ತಾಕ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಇಂದು ಚಾಲನೆ ಸಿಕ್ಕಿದೆ. ನಾಡಿನ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದರು.

ಸೋಮವಾರ ಬೆಳಗ್ಗೆ ವೃಶ್ಚಿಕ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಮೈಸೂರು ದಸರಾ’ಗೆ ಚಾಲನೆ ನೀಡಿದರು. ಉದ್ಘಾಟನೆಗೂ ಮುನ್ನ, ಬಾನು ಮುಷ್ತಾಕ್​ ಅವರು ಕುಟುಂಬ ಸಮೇತ ಚಾಮುಂಡಿ ಸನ್ನಿಧಿಗೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಅಂದರೆ ಬಾನು ಮುಷ್ತಾಕ್ ಅವರು ಕೇಸರಿ ಬಣ್ಣದ ಸೀರೆ, ಹಸಿರು ಬಣ್ಣದ ರವಿಕೆ, ತಲೆಯಲ್ಲಿ ಮಲ್ಲಿಗೆ ಹೂ ಮೂಡಿದು ಬಂದಿದ್ದರು. ಚಾಮುಂಡಿತಾಯಿ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿದ ಮುಷ್ತಾಕ್ ಅವರನ್ನು ಅಭಿನಂದಿಸಲಾಯಿತು.

ಇನ್ನು ಬಿಜೆಪಿ ನಾಯಕರ ಹೇಳಿಕೆಗೆ ಬಾನು ಮುಷ್ತಾಕ್ ಸೆಡ್ಡು ಹೊಡೆದರು. ದಸರಾ ಉದ್ಘಾಟನೆಗೆ ಬಾನು ಅವರ ಆಯ್ಕೆಯನ್ನು ಬಿಜೆಪಿ ಪ್ರಶ್ನೆ ಮಾಡಿತ್ತು. ಅಲ್ಲದೇ ಚಾಮುಂಡಿ ಸನ್ನಿಧಿಗೆ ಹೋಗುವ ಅವರು ಮಂಗಳಾರತಿ ತಗೋತಾರ? ಕೈಮುಗಿತಾರ ಅಂತಾ ಬಿಜೆಪಿ ಹೇಳಿತ್ತು. ಆದರೆ ಮುಷ್ತಾಕ್ ಅವರು ಚಾಮುಂಡೇಶ್ವರಿಗೆ ಕೈಮುಗಿದು, ಮಂಗಳಾರತಿ ತೆಗೆದುಕೊಂಡು ಭಾವುಕರಾದರು.

ದಸರಾ ಉದ್ಘಾಟಿಸಿ ಮಾತನಾಡಿದ ಬಾನು ಅವರು, ಪ್ರೀತಿಯ ಸಮಾಜ ಕಟ್ಟೋಣ, ಎಲ್ಲರಿಗೂ ಸಮಪಾಲು ಸಮಬಾಳು ಇರಲಿ. ನಾನು ನೂರಾರು ದೀಪಗಳನ್ನು ಬೆಳಗಿದ್ದೇನೆ. ಇವತ್ತು ಪುಷ್ಪಾರ್ಚನೆ ಮಾಡಿದೇನೆ ಎಂದರು.

ಅಲ್ಲದೆ ಮಂಗಳಾರತಿ ಸ್ವೀಕರಿಸಿದ್ದೇನೆ. ನನ್ನ ಹಿಂದೂ ಧರ್ಮದ ಸಂಬಂಧ ನನ್ನ ಆತ್ಮಕಥೆಯಲ್ಲಿ ಬರೆದಿದ್ದೇನೆ. ಅದು ನಾಳೆ ಪ್ರಕಟ ಆಗಲಿದೆ. ಎಷ್ಟೇ ಸವಾಲು ಬಂದ್ರೂ ದಿಟ್ಟವಾಗಿ ಆಹ್ವಾನ ನೀಡಿ ನೈತಿಕ ಬೆಂಬಲ ಕೊಟ್ಟ ಸಿಎಂ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ ಎಂದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ