ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!

ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ ಈಗ ಸಮಯ ಕೂಡಿ ಬಂದಿದೆ ಅಂದರೆ ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ವಿಧಾನಸೌಧ ಮುಕ್ತವಾಗಿದೆ.
ಹೀಗಾಗಿ ಶಕ್ತಿಸೌಧವನ್ನು ದೂರದಿಂದಲೇ ನೋಡಿ.. ಫೋಟೋ ಕ್ಲಿಕ್ಕಿಸಿ ಸಂತಸಪಟ್ಟುಕೊಳ್ಳುತ್ತಿದ್ದ ಮಂದಿಗೆ ಹತ್ತಿರದಿಂದಲೇ ನೋಡುವ ಅವಕಾಶ ಸಿಕ್ಕಿದೆ. ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ ಸರ್ಕಾರ ʻಗೈಡೆಡ್ ಟೂರ್ʼ ಹೆಸರಿನಲ್ಲಿ ಪ್ರವಾಸ ಭಾಗ್ಯ ಕಲ್ಪಿಸಿದೆ. ನಿತ್ಯ 25 ರಿಂದ 30 ಸದಸ್ಯರ 10 ಬ್ಯಾಚ್ಗಳಿಗೆ ವೀಕ್ಷಣೆಗೆ ಅವಕಾಶ ಇದೆ.
ಇನ್ನು ಇಂದಿನಿಂದ ಗೈಡೆಡ್ ಟೂರ್ ಶುರುವಾಗಿದ್ದು, ಪ್ರವಾಸಿಗರಿಗೆ ವಿಧಾನಸೌಧದ ಮಹತ್ವ, ಇತಿಹಾಸ, ಪರಂಪರೆ, ಅಧಿವೇಶನ ಸಭಾಂಗಣ, ಭವ್ಯ ಮೆಟ್ಟಿಲುಗಳ ವಿವರಣೆ ಕೊಡುವ ಕೆಲಸವನ್ನು ಮಾರ್ಗದರ್ಶಿಗಳು ಮಾಡವವರಿದ್ದಾರೆ. ವಿಧಾನಸೌಧದ ಮಹತ್ವವನ್ನು ಪ್ರವಾಸಿಗರಿಗೆ ತಿಳಿಸಿಕೊಡಲು 10 ಗೈಡ್ಗಳನ್ನ ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ವಿವರಣೆ ನೀಡಲಿದ್ದಾರೆ.
ಗುರುತಿನ ಚೀಟಿ ಕಡ್ಡಾಯ: ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯ, ಹೊರ ದೇಶಗಳ ಪ್ರವಾಸಿಗರೂ ವಿಧಾನಸೌಧ ವೀಕ್ಷಣೆಗೆ ಬರ್ತಿದ್ದಾರೆ. ವಿಧಾನಸೌಧ ಪ್ರವಾಸಕ್ಕೆ ಪ್ರತಿ ಬ್ಯಾಚ್ಗೂ ಒಂದೂವರೆ ಗಂಟೆ ಸಮಯ, ಒಂದೂವರೆ ಕಿಮೀ ನಡಿಗೆ ಇರಲಿದೆ. ವಿಕಾಸಸೌಧದ ಎಂಟ್ರಿ ಗೇಟ್ (ನಂಬರ್ 3) ಮೂಲಕ ಟೂರ್ ಆರಂಭವಾಗಲಿದೆ. 20 ನಿಮಿಷ ಮುಂಚೆ ಟೂರ್ ಆರಂಭಕ್ಕೂ ಮುನ್ನ ಹಾಜರಿರಬೇಕು, ಟಿಕೆಟ್ ಬುಕ್ ಮಾಡಿದವರು ಸರ್ಕಾರ ವಿತರಿಸಿರುವ ಯಾವುದಾದರೂ ಗುರುತಿನ ಚೀಟಿ ತರಬೇಕು. ವಿಧಾನಸೌಧ ಟೂರ್ ವೇಳೆ ನಿಗದಿತ ಸ್ಥಳದಲ್ಲಿ ಮಾತ್ರ ಫೋಟೋ ತೆಗೆಯಲು ಅವಕಾಶ ನೀಡಲಾಗಿದೆ.
ಟಿಕೆಟ್ ದರ ಎಷ್ಟು?: ಪ್ರತೀ ಪ್ರವಾಸಿಗರಿಗೂ ತಲಾ 50 ರೂ. ಟಿಕೆಟ್ ನಿಗದಿ ಮಾಡಲಾಗಿದೆ. ಇನ್ನೂ 15 ವರ್ಷದೊಳಗಿನ ಮಕ್ಕಳು, ಎಸ್ಎಸ್ಎಲ್ಸಿ ವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ. ಕಳೆದ ವಾರವಷ್ಟೇ ಸ್ಪೀಕರ್ ಯು.ಟಿ.ಖಾದರ್ ಹಾಗೂ ಸಭಾಪತಿ ಹೊರಟ್ಟಿಯವರು ಗೈಡೆಡ್ ಟೂರ್ಗೆ ಚಾಲನೆ ನೀಡಿದ್ದರು.
ವಿಧಾನಸೌಧ ಈಗ ಪ್ರವಾಸಿ ತಾಣ: ಬೆಂದಕಾಳೂರಿನ ಹೆಗ್ಗುರುತು, ರಾಜ್ಯದ ಆಡಳಿತ ಶಕ್ತಿಸೌಧ ಅಂತನೇ ಕರೆಯಿಸಿಕೊಳ್ಳುವ ವಿಧಾನಸೌಧ ಈಗ ಪ್ರವಾಸಿ ತಾಣ. ಇಲ್ಲಿಯವರೆಗೂ ಕೇವಲ ಗೇಟ್ ಹೊರಭಾಗದಿಂದ, ರಸ್ತೆಯಿಂದ ಕಾಣಿಸುತ್ತಿದ್ದ ವಿಧಾನಸೌಧ ಇನ್ಮುಂದೆ ಪ್ರವಾಸಿ ಸ್ಥಳ ಆಗಲಿದೆ. ಗೈಡೆಡ್ ಟೂರ್ ಹೆಸರಲ್ಲಿ ಸಾರ್ವಜನಿಕರ ವೀಕ್ಷಣೆಗೆ ಸರ್ಕಾರ ಅವಕಾಶ ನೀಡಿದೆ. ಇನ್ಮುಂದೆ ವಿಧಾನಸೌಧದ ಒಳಗೆ ಹೋಗಿ ಭವ್ಯ ಐತಿಹಾಸಿಕ ಕಟ್ಟಡವನ್ನು ಕಣ್ತುಂಬಿಕೊಳ್ಳಬಹುದು.

ಇನ್ನು ಮತ್ತೇಕೆ ತಡ ಹಳ್ಳಿ ಹಳ್ಳಿಗಳಲ್ಲೇ ಕುಳಿತು ನಾನು ವಿಧಾನಸೌಧ ನೋಡಬೇಕಿತ್ತು ಏನು ಮಾಡುವುದು ಎಂಬ ಚಿಂತೆ ಬಿಟ್ಟು ಈಗ ಸರ್ಕಾರ ಕೊಟ್ಟಿರುವ ಯಾವುದಾದರೊಂದು ಗುರುತಿನ ಚೀಟಿ ಜತೆಗೆ 50 ರೂ. ಹಿಡಿದುಕೊಂಡು ಬಂದರೆ ಸಾಕು. ನೀವು ಶಕ್ತಿಸೌಧದ ಸಂಪೂರ್ಣ ಇತಿಹಾಸ ತಿಳಿದುಕೊಳ್ಳುವ ಜತೆಗೆ ನಾನು ಕೂಡ ವಿಧಾನಸೌಧ ನೋಡಿ ಬಂದಿದ್ದೇನೆ ಎಂದು ಹೆಮ್ಮೆಯಿಂದ ನಿಮ್ಮ ಹಳ್ಳಿಯಲ್ಲಿ ಅಷ್ಟೆ ಏಕೆ ಹೋದಲೆಲ್ಲ ಹೇಳಿಕೊಳ್ಳಬಹುದು.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...