NEWSದೇಶ-ವಿದೇಶರಾಜಕೀಯಸಂಸ್ಕೃತಿ

ಜಗದ ಅದ್ಭುತ, ಸೌಂದರ್ಯರಾಶಿಗಳೊಂದಿಗೆ  ಮೈದಳೆಯಲಿದೆ ಅಯೋಧ್ಯೆ

ವಿಜಯಪಥ ಸಮಗ್ರ ಸುದ್ದಿ

ಅಯೋಧ್ಯೆ: ಸರಯೂ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಚೆಲುವು ಜಗದ ಅದ್ಭುತಗಳನ್ನೂ ನಾಚಿಸಲಿದೆ. ಅಂದರೆ ಮಂದಿರ ಕಟ್ಟಡ ಅಷ್ಟೇ ನಾಜೂಕಾಗಿ ವಿನ್ಯಾಸಗೊಳ್ಳುವ ಜತೆಗೆ ಅದರದೇ ಆದ ಚೆಲುವನ್ನು ಹೊಂದಿರಲಿದೆ.

ಉದ್ದೇಶಿತ ರಾಮಮಂದಿರ 10 ಎಕರೆ ಪ್ರದೇಶದ ಕಲಾಸೃಷ್ಟಿಯಾಗಿದ್ದು, ಉಳಿದ 57 ಎಕರೆಯಲ್ಲಿ ರಾಮ ದೇಗುಲದ ಸಂಕೀರ್ಣ ನಿರ್ಮಾಣಗೊಳ್ಳಲಿದೆ. ಮೊದಲಿಗೆ ಮೂರು ಮಹಡಿ, ಮ್ಯೂಸಿಯಂ, ನಕ್ಷತ್ರ ವಾಟಿಕಾ, ರಾಮ್‌ಕಥಾಪುಂಜ್‌ ಉದ್ಯಾನ! ಹೀಗೆ ಹಲವು ಸೌಂದರ್ಯರಾಶಿಗಳೊಂದಿಗೆ ಸಹಸ್ರ ಪುಣ್ಯಧಾಮ ಅಯೋಧ್ಯೆ ಮೈದಳೆಯಲಿದೆ. ದೇಗುಲ ಸಂಕೀರ್ಣದಲ್ಲಿ ರಚನೆಗೊಳ್ಳುವ “ನಕ್ಷತ್ರ ವಾಟಿಕಾ’ ಭಕ್ತಿಲೋಕವನ್ನು ಧರೆಗಿಳಿಸಲಿದೆಯಂತೆ.

ನಕ್ಷತ್ರವಾಟಿಕಾ ಅಂದರೆ ಹಿಂದುಗಳ ನಂಬಿಕೆಯ 27 ನಕ್ಷತ್ರಗಳನ್ನು ಪ್ರತಿನಿಧಿಸುವ ಮರಗಳ ಸಮೂಹ. ಜನರು ತಮ್ಮ ಜನ್ಮನಕ್ಷತ್ರಗಳಿಗೆ ಅನುಗುಣವಾಗಿ ಆಯಾ ಮರದ ಕೆಳಗೆ ಕುಳಿತು ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸಬಹುದು. ಅಲ್ಲದೆ, ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾದ ಮರಗಳನ್ನೂ ಇದರ ಸಮೀಪವೇ ನೆಡಲು ರಾಮಜನ್ಮಭೂಮಿ ಟ್ರಸ್ಟ್‌ ಮುಂದಾಗಿದೆ.

ಇನ್ನು ರಾಮ ದೇಗುಲ ಆವರಣದ ಸಮೀಪದಲ್ಲೇ ಶ್ರೀರಾಮನ ಬದುಕಿನ ಕಥೆ ಸಾರುವ ರಾಮ್‌ಕಥಾ ಕುಂಜ್‌ ಪಾರ್ಕ್‌ ರೂಪುತಳೆಯಲಿದೆ. ಇದರ ಪಕ್ಕದಲ್ಲೇ ಉತ್ಖನನ ವೇಳೆ ದೊರೆತ ಶಿಲ್ಪಾ ಕೃತಿಗಳನ್ನು ಒಳಗೊಂಡ ಮ್ಯೂಸಿಯಂ ಸೃಷ್ಟಿಯಾಗಲಿದೆ. ಆಗಸ್ಟ್‌ 5ರ ಭೂಮಿಪೂಜೆಯ ನಂತರ ದೇಗುಲ ಸಂಕೀರ್ಣದಲ್ಲಿ ಶೇಷಾವತಾರ ಸನ್ನಿಧಾನವನ್ನು ತಾತ್ಕಾಲಿಕವಾಗಿ ನಿರ್ಮಿಸಲು ಟ್ರಸ್ಟ್‌ ಯೋಜಿಸಿ, ಅಡಿಪಾಯದಲ್ಲಿ ದೇಗುಲ ವಿವರ ರಾಮಮಂದಿರದ ಭೂಮಿ ಪೂಜೆಗೆ ತಾಮ್ರಫ‌ಲಕವನ್ನು ಸಿದ್ಧಪಡಿಸಲಾಗುತ್ತಿದೆ.

ದೇಗುಲದ ಹೆಸರು, ಸ್ಥಳ, ನಕ್ಷತ್ರರಾಶಿ, ಕಾಲವನ್ನು ಸಂಸ್ಕೃತ ಭಾಷೆಯಲ್ಲಿ ತಾಮ್ರದ ಫ‌ಲಕದ ಮೇಲೆ ಬರೆದು ಅಡಿಪಾಯದಲ್ಲಿ ಸ್ಥಾಪಿಸಲಾಗುತ್ತದೆ.

ಭೂಮಿಪೂಜೆಗೆ ಬಿಹಾರದ ಫಾಲ್ಗು ನದಿಯ ಮರಳನ್ನು ಬಳಸಲು ಟ್ರಸ್ಟ್‌ ನಿರ್ಧರಿಸಿದೆ. ಫಾಲ್ಗು ಹಿಂದೂಗಳ ಪಾಲಿಗೆ ಪವಿತ್ರ ನದಿ. ಭಗವಾನ್‌ ಶ್ರೀರಾಮನು ಸೀತೆ, ಲಕ್ಷ್ಮಣರೊಂದಿಗೆ ಇದೇ ನದಿಯ ದಡದಲ್ಲಿ ದಶರಥನಿಗೆ ಪಿಂಡಪ್ರದಾನ ನೆರವೇರಿಸಿದ್ದ ಎಂದು ರಾಮಾಯಣ ಹೇಳುತ್ತದೆ. ಈಗಲೂ ಈ ತಾಣ ಪಿಂಡಪ್ರದಾನಕ್ಕೆ ಹೆಸರುವಾಸಿ. ಅಲ್ಲದೆ, ಏಳು ಸಮುದ್ರಗಳು ಹಾಗೂ ದೇಶದ ಪ್ರಮುಖ ಧಾರ್ಮಿಕ ನದಿಗಳ ನೀರನ್ನು ಭೂಮಿಪೂಜೆಗೆ ಬಳಸಲು ನಿರ್ಧರಿಸಲಾಗಿದೆ.

ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಯ ಸಂಗಮ ಕ್ಷೇತ್ರದಿಂದ ಪವಿತ್ರ ಮಣ್ಣು, ನೀರನ್ನು ರಾಮಮಂದಿರದ ಭೂಮಿಪೂಜೆಗೆ ಬಳಸಲಾಗುತ್ತದೆ. ವಿಹಿಂಪ ಮಾಜಿ ಅಧ್ಯಕ್ಷ, ದಿ. ಅಶೋಕ್‌ ಸಿಂಘಲ್‌ ಆಶಯದಂತೆ ಈ ಕಾರ್ಯ ನೆರವೇರಲಿದೆ. ಭೂಮಿ ಪೂಜೆ ದಿನದಂದು ಎಲ್ಲ ಹಿಂದು ಮನೆಗಳಲ್ಲಿ ದೀಪ ಬೆಳಗಿಸುವ ಕಾರ್ಯಕ್ರಮವನ್ನು ವಿಹಿಂಪ ಆಯೋಜಿಸಿದೆ. ದೇಶದ ಎಲ್ಲ ದೇವಾಲಯ, ಮಠಗಳಲ್ಲಿ ವಿಶೇಷ ಪೂಜೆಗಳು ನೆರವೇರಲಿವೆ ಎಂದು ವಿಹಿಂಪ ವಕ್ತಾರ ಅಶ್ವನಿ ಮಿಶ್ರಾ ಹೇಳಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ