CrimeNEWSದೇಶ-ವಿದೇಶಸಿನಿಪಥ

ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದು ಈಗಾಗಲೇ ಶಂಕಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಅವರು ಮನೆಯಲ್ಲಿ ಮಲಗಿದ್ದಾಗ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಸೈಫ್‌ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪತ್ನಿ ಕರೀನಾ ಕಪೂರ್‌ ಮತ್ತು ಇಬ್ಬರೂ ಮಕ್ಕಳು ಸೇಫ್‌ ಆಗಿದ್ದಾರೆ.

ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈಗಾಲೇ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ನಟನ ನಿವಾಸಕ್ಕೆ ತಡರಾತ್ರಿ ದುಷ್ಕರ್ಮಿಗಳು ನುಗ್ಗಿದ್ದು, ಈ ವೇಳೆ, ದರೋಡೆಕೋರನಿಗೆ ಪ್ರತಿರೋಧ ತೋರುವಾಗ ಚಾಕುವಿನಿಂದ ಇರಿದಿದ್ದಾರೆ. ಸೈಫ್ ಕುತ್ತಿಗೆ, ಕೈ ಸೇರಿ 6 ಕಡೆ ಗಾಯವಾಗಿದೆ. 2 ಕಡೆ ಗಂಭೀರವಾಗಿ ಪೆಟ್ಟಾಗಿದೆ. ಹೆಚ್ಚು ರಕ್ತಸ್ರಾವ ಆಗಿರುವ ಹಿನ್ನೆಲೆ ಕೂಡಲೇ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಟನಿಗೆ ಆಪರೇಷನ್ ನಡೆದಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿ ಕರೀನಾ ಕಪೂರ್ ಮತ್ತು ಮಕ್ಕಳು ಸೇವ್ ಆಗಿದ್ದು ಹೇಗೆ?: ದುಷ್ಕರ್ಮಿಗಳು ಚಾಕುವಿನಿಂದ ಇರಿದ ವೇಳೆ ಪತ್ನಿ ಕರೀನಾ ಕಪೂರ್ ಮತ್ತು ಮಕ್ಕಳು ಸೇವ್ ಆಗಿದ್ದು ಹೇಗೆ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಜ.15ರಂದು ಮನೆಯಲ್ಲಿ ಸೈಫ್ ಅಲಿ ಖಾನ್ ಮತ್ತು ಕೆಲಸಗಾರರು ಅಷ್ಟೇ ಮನೆಯಲ್ಲಿದ್ದರು. ದುಷ್ಟರ್ಮಿಗಳು ನಟನ ಮೇಲೆ ಅಟ್ಯಾಕ್ ಮಾಡಿದ ಸಂದರ್ಭದಲ್ಲಿ ಕರೀನಾ ಕಪೂರ್ ಮತ್ತು ಮಕ್ಕಳು ಮನೆಯಲ್ಲಿ ಇರಲಿಲ್ಲ.

ಈ ಸಂದರ್ಭದಲ್ಲಿ ಕರೀನಾ ಕಪೂರ್ ಅವರು ಸಹೋದರಿ ಕರೀಷ್ಮಾ ಕಪೂರ್ ಹಾಗೂ ರಿಯಾ, ಸೋನಂ ಜತೆ ಪಾರ್ಟಿಗೆ ತೆರಳಿದ್ದರು. ಪಾರ್ಟಿ ಮಾಡುತ್ತಿರುವ ಫೋಟೋವನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ‘ಗರ್ಲ್ಸ್ ನೈಟ್ ಇನ್’ ಎಂದು ಅಡಿಬರಹ ನೀಡಿದ್ದಾರೆ. ಹಾಗಾಗಿ ದರೋಡೆಕೋರರ ಹಲ್ಲೆಯಿಂದ ಅವರು ಬಚಾವ್ ಆಗಿದ್ದಾರೆ. ಕರೀನಾ ಮತ್ತು ಮಕ್ಕಳಿಬ್ಬರು ಹೀಗೆ ಸೇಫ್‌ ಆಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ