CrimeNEWSಆರೋಗ್ಯನಮ್ಮಜಿಲ್ಲೆ

ವಿಜಯಪುರ: ಮೆದುಳು ಜ್ವರದಿಂದ ಬಾಲಕ ಸಾವು

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಮೆದುಳು ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ನಗರದ ಗೋಳಗುಮ್ಮಟ ಏರಿಯಾದಲ್ಲಿ ನಡೆದಿದೆ.

ರಜಿತ್ ಮಿಥುನ್ ಅಳ್ಳಿಮೋರೆ (10) ಮೃತ ಬಾಲಕ. ಈತ ಗೋಳಗುಮ್ಮಟ ಬಡವಾಣೆ ನಿವಾಸಿಯಾಗಿದ್ದ. ವಾರದ ಹಿಂದೆ ರಜಿತ್ ತೀವ್ರ ಜ್ವರದಿಂದ ಬಳಲುತ್ತಿದ್ದ. ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರಜಿತ್‌ನನ್ನ ದಾಖಲಿಸಲಾಗಿತ್ತು.

ಆದರೆ, ಜ್ವರ ನೆತ್ತಿಗೆ ಏರಿದ್ದರಿಂದ ಮೆದುಳಲ್ಲಿ ಬಾವು ಕಾಣಿಸಿಕೊಂಡಿತ್ತು. ಹೀಗಾಗಿ ಚಿಕಿತ್ಸೆ ಸ್ಪಂದಿಸದೆ ಬಾಲಕ ಅಸುನೀಗಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಏನು ಅರಿಯದ ಬಾಲಕ ಕೊನೆಯುಸಿರೆಳೆದಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ಮೆದುಳು ಜ್ವರದ ಲಕ್ಷಣಗಳು * ಜ್ವರ, ತಲೆನೋವು * ಮಗುವಿನ ತಲೆಯಲ್ಲಿ ಮೃದುವಾದ ಗುಳ್ಳೆಗಳು ಏಳುವುದು * ಬೆಳಕಿಗೆ ಕಣ್ಣು ತೆರೆಯಲು ಸಾಧ್ಯವಾಗದಿರುವುದು

* ಕುತ್ತಿಗೆ ಬಿಗಿಯಾಗುವುದು * ಕೋಮಾವಸ್ಥೆ * ತ್ವಚೆಯಲ್ಲಿ ಗುಳ್ಳೆಗಳು * ಹಸಿವು ಇಲ್ಲದಿರುವುದು * ಮಾತನಾಡುವಾಗ ತೊದಲುವುದು * ಮೈಯಲ್ಲಿ ನಡುಕ ಉಂಟಾಗುವ ಮೂಲಕ ಜ್ವರದ ತೀವ್ರತೆಯನ್ನು ತೋರಿಸುತ್ತದೆ. ಈ ಬಗ್ಗೆ ಪಾಲಕರು ಎಚ್ಚರಿಕೆಯಿಂದ ಇರಬೇಕು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ