CrimeNEWSಆರೋಗ್ಯನಮ್ಮಜಿಲ್ಲೆ

ವಿಜಯಪುರ: ಮೆದುಳು ಜ್ವರದಿಂದ ಬಾಲಕ ಸಾವು

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಮೆದುಳು ಜ್ವರಕ್ಕೆ ಬಾಲಕನೊಬ್ಬ ಬಲಿಯಾದ ಘಟನೆ ನಗರದ ಗೋಳಗುಮ್ಮಟ ಏರಿಯಾದಲ್ಲಿ ನಡೆದಿದೆ.

ರಜಿತ್ ಮಿಥುನ್ ಅಳ್ಳಿಮೋರೆ (10) ಮೃತ ಬಾಲಕ. ಈತ ಗೋಳಗುಮ್ಮಟ ಬಡವಾಣೆ ನಿವಾಸಿಯಾಗಿದ್ದ. ವಾರದ ಹಿಂದೆ ರಜಿತ್ ತೀವ್ರ ಜ್ವರದಿಂದ ಬಳಲುತ್ತಿದ್ದ. ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರಜಿತ್‌ನನ್ನ ದಾಖಲಿಸಲಾಗಿತ್ತು.

ಆದರೆ, ಜ್ವರ ನೆತ್ತಿಗೆ ಏರಿದ್ದರಿಂದ ಮೆದುಳಲ್ಲಿ ಬಾವು ಕಾಣಿಸಿಕೊಂಡಿತ್ತು. ಹೀಗಾಗಿ ಚಿಕಿತ್ಸೆ ಸ್ಪಂದಿಸದೆ ಬಾಲಕ ಅಸುನೀಗಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಏನು ಅರಿಯದ ಬಾಲಕ ಕೊನೆಯುಸಿರೆಳೆದಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ಮೆದುಳು ಜ್ವರದ ಲಕ್ಷಣಗಳು * ಜ್ವರ, ತಲೆನೋವು * ಮಗುವಿನ ತಲೆಯಲ್ಲಿ ಮೃದುವಾದ ಗುಳ್ಳೆಗಳು ಏಳುವುದು * ಬೆಳಕಿಗೆ ಕಣ್ಣು ತೆರೆಯಲು ಸಾಧ್ಯವಾಗದಿರುವುದು

* ಕುತ್ತಿಗೆ ಬಿಗಿಯಾಗುವುದು * ಕೋಮಾವಸ್ಥೆ * ತ್ವಚೆಯಲ್ಲಿ ಗುಳ್ಳೆಗಳು * ಹಸಿವು ಇಲ್ಲದಿರುವುದು * ಮಾತನಾಡುವಾಗ ತೊದಲುವುದು * ಮೈಯಲ್ಲಿ ನಡುಕ ಉಂಟಾಗುವ ಮೂಲಕ ಜ್ವರದ ತೀವ್ರತೆಯನ್ನು ತೋರಿಸುತ್ತದೆ. ಈ ಬಗ್ಗೆ ಪಾಲಕರು ಎಚ್ಚರಿಕೆಯಿಂದ ಇರಬೇಕು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ