CRIMENEWSನಮ್ಮಜಿಲ್ಲೆ

ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ.

ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು ಕುಡಿದು ಕಳೆದ ಮೂರು ದಿನಗಳಿಂದ 30ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೆ ಈ ವಿಷಯ ತಿಳಿಯುತ್ತಿದ್ದಂತೆ ವೈದರ ತಂಡವೊಂದು ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಎರಡು ಅಂಬುಲೆನ್ಸ್ ಕೂಡ ಇಲ್ಲಿಯೇ ಇದ್ದು ಅಸ್ವಸ್ಥಗೊಂಡಿರುವ ಮಂದಿ ಗಂಭೀರ ಸ್ಥಿತಿಗೆ ತಲುಪಿದರೆ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆಗಳಿಗೆ ಸಾಗಿಸುವುದಕ್ಕೆ ಸಿದ್ದವಾಗಿವೆ.

ಈಗಾಗಲೇ ಕೆಲವರನ್ನು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಜತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ ಎಂದು ಗ್ರಾಪಂ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಬ್ಯಾಲಿಹಾಳ ಗ್ರಾಮದ ಬಹುತೇಕ ಗ್ರಾಮಸ್ಥರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜತೆಗೆ ವೈದರ ತಂಡ ಗ್ರಾಮದಲ್ಲಿಯೇ ಇದ್ದು ಸೂಕ್ತ ಚಿಕಿತ್ಸೆ ನೀಡುತ್ತಿದೆ. ಹೀಗಾಗಿ ಇದುವರೆಗೂ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ