ನಿಮ್ಮ ಸದಾರಮೆ ಸಾಕು ಮಳೆ, ಕೊಲೆಗಳಿಂದ ತತ್ತರಿಸಿರುವ ಕರಾವಳಿ ಜನತೆಗೆ ಧೈರ್ಯ ತುಂಬಿ: ಸಿಎಂಗೆ ಎಚ್ಡಿಕೆ ತಾಕೀತು

ಬೆಂಗಳೂರು: ಕರಾವಳಿ ಭಾಗ ಸೇರಿ ರಾಜ್ಯದ ಉದ್ದಗಲಕ್ಕೂ ನಿರಂತರ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನವನ್ನು ಛಿದ್ರಗೊಳಿಸಿದೆ. ಜನ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ರಾಜ್ಯ ಸರಕಾರ, ಕರಾವಳಿಗರ ಕಣ್ಣೀರು ಒರೆಸುವ ಬದಲು ಅವರ ಕಣ್ಣಲ್ಲಿ ‘ರಕ್ತಕಣ್ಣೀರು’ ಸುರಿಯಲಿ ಎಂದು ಹಪಾಹಪಿಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಸಂಬಂಧ Xಮಾಡಿರುವ ಅವರು, ಮನೆ, ರಸ್ತೆ, ಸೇತುವೆಗಳು ಕುಸಿದಿವೆ. ನಗರ, ಪಟ್ಟಣ, ಹಳ್ಳಿಗಳು ಜಲದಿಗ್ಬಂಧನಕ್ಕೆ ಸಿಲುಕಿ ಜನ ವಿಲವಿಲವೆನ್ನುತ್ತಿದ್ದಾರೆ. ಮೂರಾಬಟ್ಟೆಯಾಗಿರುವ ಅವರ ಬದುಕಿನ ರಕ್ಷಣೆಗೆ ಸರಕಾರದ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.
ಇನ್ನು ‘ಕೋಟೆ ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಬಡಿದುಕೊಂಡರು’ ಎನ್ನುವಂತೆ ಮಳೆಯಲ್ಲಿ ಬದುಕು ಕೊಚ್ಚಿಹೋದ ಮೇಲೆ ಸಚಿವರಿಗೆ ಹೋಗಿ ಎಂದು ಮುಖ್ಯಮಂತ್ರಿ ಅಪ್ಪಣೆ ಕೊಟ್ಟರೆ ಫಲವೇನು? ಮಳೆ ಬರುವ ಮೊದಲು ಏನು ಮಾಡಿದ್ದೀರಿ? ಇದೇನಾ ಜನಪರ ಆಡಳಿತ? ನುಡಿದಂತೆ ನಡೆಯುವುದು ಎಂದರೆ ಹೀಗೆನಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ಸರಕಾರಕ್ಕೆ ಕರಾವಳಿ ಮಳೆ ಬಗ್ಗೆ ಚಿಂತೆ ಇಲ್ಲ. ಆದರೆ, ಕರಾವಳಿ ಕೊಲೆಗಳ ಬಗ್ಗೆ ಎಲ್ಲಿಲ್ಲದ ಕಾಳಜಿ. ಆ ಕಾಳಜಿ ಕೊಲೆಗಳನ್ನು ಹತ್ತಿಕ್ಕಲಿಕ್ಕಲ್ಲ, ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೋಡಿ ಸಿದ್ದರಾಮಯ್ಯ ನವರೇ, ಎರಡು ವರ್ಷದಿಂದ ಅಧಿಕಾರದಲ್ಲಿದ್ದೀರಿ. ಅನ್ಯಪಕ್ಷಗಳನ್ನು ದೂರುತ್ತಾ ಕಾಲಹರಣ ಮಾಡುತ್ತಿದ್ದೀರಿ. ನೀವು ಅಧಿಕಾರಕ್ಕೆ ಬಂದ ಮೇಲೆ ಕರಾವಳಿ ಭಾಗದಲ್ಲಿ ಎಷ್ಟು ಹತ್ಯೆಗಳಾದವು? ಅವನ್ನು ಹತ್ತಿಕ್ಕಲಿಲ್ಲ ಯಾಕೆ? ಒಂದು ಸಮುದಾಯ ನಿಮ್ಮ ಪಕ್ಷಕ್ಕೆ ನೂರಕ್ಕೆ ನೂರರಷ್ಟು ವೋಟು ಕೊಟ್ಟಿದೆಯಲ್ಲವೇ? ಅವರನ್ನು ರಕ್ಷಿಸಲು ವಿಫಲರಾಗಿರುವ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ!!
ಸರ್ವ ಜನಾಂಗದ ಶಾಂತಿಯ ತೋಟವನ್ನು ವಿಷ ಸರ್ಪಗಳ ತೋಟವನ್ನಾಗಿ ಪರಿವರ್ತಿಸಿದ್ದೀರಿ! ಸಿದ್ದರಾಮಯ್ಯನವರೇ, ನೀವೂ ಮತ್ತು ನಿಮ್ಮ ಸಂಗಡಿಗರ ಸದಾರಮೆ ಸಾಕು. ಕೂಡಲೇ ಕರಾವಳಿಗೆ ಭೇಟಿ ನೀಡಿ. ಮಳೆ, ಕೊಲೆಗಳಿಂದ ತತ್ತರಿಸಿರುವ ಅಲ್ಲಿನ ಜನತೆಗೆ ಧೈರ್ಯ ತುಂಬಿ. ಪ್ರಕೃತಿ ಪ್ರೇರಿತ ಮಳೆ ವಿಕೋಪ, ನಿಮ್ಮ ಪಕ್ಷ ಪ್ರೇಷಿತ ‘ಕೊಲೆ ವಿಕೋಪ’ಕ್ಕೆ ಪರಿಹಾರ ಕಂಡುಕೊಳ್ಳಿ. ಮುಖ್ಯಮಂತ್ರಿಯಾಗಿ ಇದು ನಿಮ್ಮ ತಕ್ಷಣದ ಕರ್ತವ್ಯ.
Related

You Might Also Like
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...
ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ
ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು...
ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ
ಬೆಂಗಳೂರು: ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು...
KSRTC: ನಡು ರಸ್ತೆಯಲ್ಲೇ ಸುಟ್ಟು ಬೂದಿಯಾದ ಬಸ್ – ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬನ್ನೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೈಸೂರು ವಿಭಾಗದ ಬಸ್ ಇಂಜಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನ ಮುಂದಿನ ಭಾಗ ಸುಟ್ಟು ಬೂದಿಯಾಗಿರುವ ಘಟನೆ ಇಂದು...