ಬೆಂಗಳೂರು: ಕಳೆದ 2021ರ ಏಪ್ರಿಲ್ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿತ್ತು.
ಈ ಎಲ್ಲ ಪ್ರಕರಣಗಳಲ್ಲಿ ಬಹುತೇಕ ಇತ್ಯರ್ಥವಾಗಿದ್ದು ಇನ್ನೂ ಕೆಲವು ಬಾಕಿ ಉಳಿದಿವೆ ಅವುಗಳನ್ನು ವಾಪಸ್ ಪಡೆಯಬೇಕು ಎಂದು ಸಾರಿಗೆ ನೌಕರರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ಇನ್ನು ಸಮಸ್ಯೆಗಳಿಗೆ ಒಳಗಾಗಿರುವ ನೌಕರರ ಬದುಕನ್ನು ಸರಿಪಡಿಸಲು ಸರ್ಕಾರ ಮುಂದಾಗಬೇಕು. ಜತೆಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಸರಿ ಸಮಾನ ವೇತನ ಜಾರಿಗೊಳಿಸಿ ಅದರ ವೇತನ ಹಿಂಬಾಕಿಯನ್ನು ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಸಾರಿಗೆ ಬಹುತೇಕ ಎಲ್ಲ ನೌಕರರ ಸಂಘಟನೆಗಳ ಮುಖಂಡರು ಇದೇ ಒತ್ತಾಯವನ್ನು ಸರ್ಕಾರ ಮತ್ತು 4 ಸಾರಿಗೆಯ ಆಡಳಿತ ಮಂಡಳಿಗೆ ಮಾಡುತ್ತಿದ್ದು, ಸೆ.20ರೊಳಗೆ ಬಿಎಂಟಿಸಿಯಲ್ಲಿ ಮುಷ್ಕರದ ಕಾರಣದಿಂದ ವಜಾಗಿಳಿಸಿರುವ ಎಲ್ಲ ನೌಕರರನ್ನು ವಾಪಸ್ ಡ್ಯೂಟಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಕಳೆದ ಆ.5ರಂದು ಎಐಟಿಯುಸಿ ಅಧ್ಯಕ್ಷ ಅನಂತ ಸುಬ್ಬರಾವ್ ನೇತೃತ್ವದಲ್ಲಿ ನಡೆದ ಒಂದು ದಿನದ ಮುಷ್ಕರದಲ್ಲಿ ಕೇವಲ ಚಾಲಕರು ಹಾಗೂ ನಿರ್ವಾಹಕರ ವೇತನವನ್ನು ಮಾತ್ರ ಕಡಿತಮಾಡಲಾಗಿದ್ದು ಉಳಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ವೇತನ ನೀಡಲಾಗಿದೆ. ಇದು ಸರಿಯಾದ ಕ್ರಮವಲ್ಲ ಚಾಲನಾ ಸಿಬ್ಬಂದಿಗಳಿಗೂ ಆ ಒಂದು ದಿನ ರಜೆ ಪಡೆದು ವೇತನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ನೌಕರರ ವಿರುದ್ಧ ಕೊಟ್ಟಿರುವ ಮೆಮೋ ಹಾಗೂ ಇತರೆ ನೋಟಿಸ್ಗಳನ್ನು ಕೂಡಲೇ ವಾಪಸ್ ಪಡೆದು ಅವರಿಗೆ ಆ ಒಂದು ದಿನದ ವೇತನ ಕೊಡುವ ಜತೆಗೆ ಅವರ ಎಲ್ಲ ಸಮಸ್ಯೆಗಳನ್ನು ಮುಖ್ಯ ಮಂತ್ರಿಗಳು, ಸಾರಿಗೆ ಸಚಿವರ ಗಮನಕ್ಕೆ ತಂದು ಸರಿಪಡಿಸಿಕೊಡುವಂತೆ ಮನವಿ ಮಾಡಲಾಗಿದ್ದು ಮತ್ತೊಮ್ಮೆ ಮನವಿ ಮಾಡುವುದಾಗಿಯೂ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಯ ಸಂಘಟನೆಗಳು ಇನ್ನಾದರೂ ಸ್ಟ್ರಾಂಗಾದ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಸಾರಿಗೆ ಅಡಳಿತ ಮಂಡಳಿ ಜತೆ ಖಡಕ್ಆಗಿ ಮಾತುಕತೆ ನಡೆಸಿ ಎಲ್ಲವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ನೌಕರರು ಒತ್ತಾಯಿಸಿದ್ದಾರೆ.
ಇನ್ನು ವೇತನ ಹೆಚ್ಚಳ ಮಾಡಬೇಕು ಎಂದು ನೌಕರರು ಮುಷ್ಕರ ಮಾಡಿದರೆ ಅಧಿಕಾರಿ ಮಹಾಶಯರೆನಿಸಿಕೊಂಡ ಬಹುತೇಕ ಎಲ್ಲ ಅಧಿಕಾರಿಗಳು ತಮಗೂ ವೇತನ ಹೆಚ್ಚಳವಾಗುತ್ತದೆ ಎಂಬುವುದು ತಿಳಿದಿದ್ದರೆ ಪರೋಕ್ಷವಾಗಿಯಾದರೂ ಬೆಂಬಲಿಸದೆ ಹೋರಾಟದಿನ ಡ್ಯೂಟಿ ಮಾಡದ ನೌಕರರ ವೇತನವನ್ನು ಕಟ್ ಮಾಡಿರುವುದು ನ್ಯಾಯಸಮ್ಮತವೆ?
ಇನ್ನಾದರೂ ಈ ಬಗ್ಗೆ ಅಧಿಕಾರಿಗಳಾದ ತಾವುಗಳು ಪ್ರಭುದ್ಧರಾಗಿ ಯೋಚಿಸಿ ನೌಕರರು ನಿಮ್ಮ ಪಾಲಿನ ಹೋರಾಟದ ಜವಾಬ್ದಾರಿಯನ್ನು ಹೊತ್ತು ರಸ್ತೆಗಿಳಿದಿದ್ದರೂ ಎಂದು ಅರಿತು ಸೆಪ್ಟೆಂಬರ್ ವೇತನದೊಂದಿಗಾದರೂ ವೇತನ ಬಿಡುಗಡೆ ಮಾಡಿ. ಇಲ್ಲ ನಾವು ಕೆಳಮಟ್ಟದಲ್ಲೇ ಯೋಚಿಸುವವರು ಅಂತ ಅಂದುಕೊಂಡಿದರೆ ತಮ್ಮ ಅಂಧಾದರ್ಬಾರನ್ನೇ ಮುಂದುವರಿಸಿ.
Related


You Might Also Like
ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ 2,000 ಕೋಟಿ ರೂ. ಲಾಭಗಳಿದ ಶಾಸಕ ವೀರೇಂದ್ರ ಪಪ್ಪಿ: ಇಡಿ ದಾಳಿ ವೇಳೆ ಬಯಲು!
ಚಿತ್ರದುರ್ಗ: ಜನಪ್ರತಿನಿಧಿಗಳು ಎಂದರೆ ಸಾಮಾನ್ಯ ಜನರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಕ್ರಮ ಆನ್ಲೈನ್ ಬೆಟ್ಟಿಂಗ್ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬುವುದು...
ನಾಗರಿಕರಿಗೆ ತ್ವರಿತವಾಗಿ ಸ್ಪಂದಿಸಿ: 5 ನಗರ ಪಾಲಿಕೆಗಳ ಆಯುಕ್ತರಿಗೆ ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಎಲ್ಲ ವಿಭಾಗಗಳ ಕುರಿತು ಸಮಗ್ರ ಪರಿಚಯ ಹಾಗೂ ವಿಶೇಷವಾಗಿ 3 ವಿಷಯಗಳಾದ ರಸ್ತೆ ಗುಂಡಿ, ಬೀದಿ ದೀಪ ಹಾಗೂ ಕಸದ ಸಮಸ್ಯೆ...
ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಜನರು ಸುಳ್ಳು ದೂರು ದಾಖಲಿಸಬೇಡಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜತೆಗೆ ನಿಜವಾದ...
ಜಿಬಿಎ-ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ, ಮುಕ್ತ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಕಠಿಣ ಕ್ರಮ: ರಾಜೇಂದ್ರ ಚೋಳನ್
ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಂಚಾರ, ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವ ಉದ್ದೇಶದಿಂದ ಗುಂಡಿ ಮುಕ್ತ ರಸ್ತೆ, ಬ್ಲಾಕ್ ಸ್ಪಾಟ್ ರಹಿತ...
ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ...
ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಸವರಾಜು ಸೂಚನೆ
ಬೆಂಗಳೂರು ಗ್ರಾಮಾಂತರ: ಯುವನಿಧಿ ಯೋಜನೆಯಡಿ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಫಲಾನುಭವಿಗಳ ಆಸಕ್ತಿ ಮತ್ತು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯ ತರಬೇತಿ ನೀಡಲು ಕ್ರಮ...
ಜಿಬಿಎ: ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಉಪಮುಖ್ಯಮಂತ್ರಿ ಶಿವಕುಮಾರ್
ಐದು ಪಾಲಿಕೆಗಳಿಗೆ 300 ಕೋಟಿ ರೂ. ಅನುದಾನ ಹಂಚಿಕೆ ಬೆಂಗಳೂರು: “ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲ ಪಾಲಿಕೆಗಳ ಗಡಿ...
ಜಿಬಿಎ: 9 ಸಾವಿರ ಕೆಜಿ ಏಕ ಬಳಕೆ ಪ್ಲಾಸ್ಟಿಕ್ ವಶ, 7.38 ಲಕ್ಷ ರೂ. ದಂಡ ವಸೂಲಿ- ಕರೀಗೌಡ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ನ...