KSRTC ಬಸ್ ನಿಲ್ಲಿಸಿ ಮುಷ್ಕರ ಮಾಡುದಕ್ಕೆ ನಮ್ಮ ಬೆಂಬಲ ಇಲ್ಲ: ಅಧಿಕಾರಿಗಳು- ಆಡಳಿತ ಸಿಬ್ಬಂದಿ ಸಂಘಟನೆಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ 2024 ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು, 14 ತಿಂಗಳುಗಳು ಕಳೆದರೂ ಕೂಡ ಈವರೆಗೂ ಸರ್ಕಾರ ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ. ಜತೆಗೆ 2020ರ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಬೇಕು.
ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಒಕ್ಕೂಟ ಮಾ.25ರ ಬಳಿಕ ಮುಷ್ಕರ ಮಾಡುವುದಾಗಿ ಮೊನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಆದರೆ, ಅಧಿಕಾರಿಗಳ ವರ್ಗ ಬರದಿದ್ದರೆ ನಾವು ಮುಷ್ಕರ ಮಾಡುವುದಕ್ಕೆ ಮುಂದಾಗುವುದಿಲ್ಲ ಎಂದು ಬಹುತೇಕ ನಾಲ್ಕೂ ನಿಗಮಗಳ ಎಲ್ಲ ನೌಕರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೇರಿದಂತೆ ಇತರೆ ಆಡಳಿತ ಸಿಬ್ಬಂದಿ ವರ್ಗದ ಸಂಘಟನೆಗಳ ಪದಾಧಿಕಾರಿಗಳನ್ನು ಈ ಬಗ್ಗೆ ವಿಜಯಪಥ ಸ್ಪಷ್ಟನೆ ಕೇಳಿದಾಗ ಅದಕ್ಕೆ ಅಧಿಕಾರಿಗಳು ಹಾಗೂ ಇತರೆ ಆಡಳಿತ ಸಂಘಟನೆಗಳ ಮುಖಂಡರು ನಾವು ಯಾವುದೇ ಕಾರಣಕ್ಕೂ ಬಸ್ ನಿಲ್ಲಿಸಿ ಸಾರ್ವಜನಿಕರಿಗೆ ತೊಂದರೆ ಕೊಡುವ ಮುಷ್ಕರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ನೀವು ಮುಷ್ಕರಕ್ಕೆ ಬೆಂಬಲ ಕೊಡದಿದ್ದರೆ ಟ್ರೇಡ್ ಯೂನಿಯನ್ಗಳು (ಜಂಟಿಕ್ರೀಯಾ ಸಮಿತಿ. ಸಾರಿಗೆ ನೌಕರರ ಒಕ್ಕೂಟಗಳು) ಕರೆ ಕೊಡುವ ಮುಷ್ಕರದಲ್ಲಿ ನೌಕರರು ಭಾಗಿಯಾದರೆ ಆ ವೇಳೆ ಅವರನ್ನು ವಜಾ, ಅಮಾನತು, ವರ್ಗಾವಣೆ ಹಾಗೂ ಪೊಲೀಸ್ ಕೇಸ್ ಮಾಡುವುದಿಲ್ಲ ಎಂದು ಪ್ರಶ್ನಿಸಿದ್ದಕ್ಕೆ, ಇದು ನಾವು ಮಾಡುವುದಲ್ಲ ಸರ್ಕಾರದ ನಿರ್ದೇಶನ ಅಥವಾ ಆದೇಶವನ್ನು ನಾವು ಪಾಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಶಾಂತಿಯುತ ಧರಣಿಗೆ ನಾವು ಬಾಹ್ಯಬೆಂಬಲ ನೀಡತ್ತೇವೆ. ಬಸ್ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ನಾವು ಸಪೋರ್ಟ್ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಅಧಿಕಾರಿಗಳು ಹಾಗೂ ಇತರೆ ಸಂಘಟನೆಗಳ ಪದಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಇತ್ತ ಅಧಿಕಾರಿಗಳು ನಿಮ್ಮ ಮುಷ್ಕರವನ್ನು ಬೆಂಬಲಿಸುವುದಕ್ಕೆ ಮುಂದಾಗುತ್ತಿಲ್ಲ ಅಂದಮೇಲೆ ನೀವು ಮುಷ್ಕರ ಮಾಡುವ ವೇಳೆ ಬೆಂಬಲಿಸುವ ನೌಕರರನ್ನು ಅಮಾನತು, ವಜಾ ಮಾಡಿದರೆ ಅದರ ಹೊಣೆಯನ್ನು ನೀವು ಹೊರಲು ಸಿದ್ದರಿದ್ದೀರಾ ಎಂದು ಟ್ರೇಡ್ ಯೂನಿಯನ್ಗಳ ಮುಖಂಡರನ್ನು ಪ್ರಶ್ನಿಸಿದ್ದಕ್ಕೆ ಆ ಮುಖಂಡರು ಮೌನಕ್ಕೆ ಶರಣಾದರು.
ಈ ಎಲ್ಲವನ್ನು ಗಮನಿಸಿದರೆ ಇಲ್ಲಿ ಅಧಿಕಾರಿಗಳು ಬಸ್ ನಿಲ್ಲಿಸಿ ಮುಷ್ಕರ ಮಾಡುವ ನೌಕರರ ವಿರುದ್ಧ ಸರ್ಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳುತ್ತಾರೆ. ಆ ಬಳಿಕ ಮುಂದಿನ ಸಾಲಿನಲ್ಲಿ ಗುರುತಿಸಿಕೊಳ್ಳುವ ನೌಕರರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಅಧಿಕಾರಿಗಳಿಗೆ ವೈಯಕ್ತಿವಾಗಿ ಆಗದ ಕೆಲ ನೌಕರರು ಕೂಡ ಇಲ್ಲಿ ಬಲಿಪಶುಗಳಾಗುತ್ತಾರೆ.
ಹೀಗಾಗಿ ಟ್ರೇಡ್ ಯೂನಿಯನ್ಗಳು ಕರೆ ನೀಡುವ ಮುಷ್ಕರದ ವೇಳೆ ನೌಕರರು ಅಮಾನತು, ವಜಾ, ವರ್ಗಾವಣೆ ಮತ್ತು ಪೊಲೀಸ್ ಕೇಸ್ ಆದರೆ ಅದರ ಹೊಣೆಯನ್ನು ನೌಕರನೇ ಹೊತ್ತುಕೊಳ್ಳಬೇಕು. ಅಂದರೆ ಯಾವುದೇ ಟ್ರೇಡ್ ಯೂನಿಯನ್ಗಳು ನಿಮ್ಮ ಪರ ಕಾನೂನು ಹೋರಾಟ ಮಾಡುವುದಕ್ಕೆ ಸಿದ್ಧರಿರುವುದಿಲ್ಲ.
ಇನ್ನು ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್ ಕೇಸ್ ಆದ ನೌಕರರು ಇದೇ ಯೂನಿಯನ್ಗಳ ಮುಖಂಡರಿಗೆ ಅವರು ನಿಗದಿ ಪಡಿಸಿದಷ್ಟು ಹಣವನ್ನು ಕೊಟ್ಟು ಅವರ ಮೂಲಕ ವಕೀಲರನ್ನು ನೇಮಕ ಮಾಡಿಕೊಂಡು ಕಾನೂನು ಹೋರಾಟ ಮಾಡಬೇಕು. ಇದೆಲ್ಲವನ್ನು ಗಮನಿಸಿದರೆ ಈ ಯೂನಿಯನ್ಗಳು ಕರೆ ಕೊಡುವ ಹೋರಾಟ ಒಂದು ರೀತಿಯಲ್ಲಿ ಅಧಿಕಾರಿಗಳಿಗೆ ಲಾಭ ನೌಕರರಿಗೆ ಸಂಚಕಾರ ಎಂಬಂತೆ ಇದೆ.
ಹೀಗಾಗಿ ಪ್ರತಿಯೊಬ್ಬ ನೌಕರರು ಯೋಚಿಸಿ, ನಾವು ಟ್ರೇಡ್ ಯೂನಿಯನ್ಗಳು ಈ ಮೊದಲೇ ಹೇಳಿದಂತ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಕರೆ ಕೊಡುವ ಮುಷ್ಕರಕ್ಕೆ ನಾವು ಹೋಗಬೇಕಾ ಬೇಡವೆ ಎಂದು. ಕಾರಣ ಇಲ್ಲಿ ಅಧಿಕಾರಿಗಳು ಸರ್ಕಾರದ ನಿರ್ದೇಶನವನ್ನು ಪಾಲನೆ ಮಾಡುತ್ತಿದ್ದೇವೆ ಎಂದು ನಿಮ್ಮ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾರೆ ಇದು ಕಟು ಸತ್ಯ.
ಅದನ್ನು ಎದರಿಸಲು ಅಧಿಕಾರಿಗಳು ಅಥವಾ ಸರ್ಕಾರದ ವಿರುದ್ಧ ಯೂನಿಯನ್ಗಳು ಮತ್ತೆ ಹೋರಾಟ ಮಾಡುವುದಿಲ್ಲ. ಬದಲಿಗೆ ನಾವು ಹೋರಾಟ ಮಾಡಿದ್ದರಿಂದ ನೌಕರರಿಗೆ ಇಷ್ಟು ಪರ್ಸೆಂಟ್ ವೇತನ ಹೆಚ್ಚಾಯಿತು ಎಂದು ಹೇಳಿ ಹೊರಟು ಹೋಗುತ್ತವೆ. ಇದರಿಂದ ಮುಷ್ಕರದ ವೇಳೆ ಆದ ವಜಾ, ಅಮಾನತು, ವರ್ಗಾವಣೆ ಹಾಗೂ ಪೊಲೀಸ್ ಪ್ರಕರಣಗಳನ್ನು ಮೈಮೇಲೆ ಎದುಕೊಳ್ಳುವ ನೌಕರರು ಇತ್ತ ಡ್ಯೂಟಿಯೂ ಇಲ್ಲದೆ ವೇತನವೂ ಇಲ್ಲದೆ ಸಂಸಾರವನ್ನು ಬೀದಿಗೆ ತಂದು ನಿಂತುಕೊಳ್ಳಬೇಕಾ? ಯೋಚಿಸಿ ನಿರ್ಧರಿಸಿ ಇದು ನೌಕರರಿಗೆ ಬಿಟ್ಟ ವಿಚಾರ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...