NEWSಬೆಂಗಳೂರು

ನಮ್ಮ ಉಸಿರಿಗಾಗಿ ಪರಿಸರ ಸಂರಕ್ಷಿಸಬೇಕು: ಉಪಮುಖ್ಯಮಂತ್ರಿ ಡಿಕೆಶಿ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ನಾವು ಪರಿಸರವನ್ನು ಕೇವಲ ಹಸಿರಿಗಾಗಿ ಮಾತ್ರವಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಜವಹರಲಾಲ್ ನೆಹರು ತಾರಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ “ವಿಶ್ವ ಪರಿಸರ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪ್ರಕೃತಿ ಯಾರ ಆಸ್ತಿಯಲ್ಲ. ಮಾನವ ಸೇರಿದಂತೆ ಎಲ್ಲ ಪ್ರಾಣಿಗಳು ಬದುಕುತ್ತಿರುವುದು ಪ್ರಕೃತಿಯಿಂದ. ನೀರು, ಗಾಳಿ, ಮರ, ಪರಿಸರಕ್ಕೆ ಜಾತಿ, ಧರ್ಮವಿಲ್ಲ. ಹಿಂದೆ ಹಳ್ಳಿಗಳಲ್ಲಿ ಮನೆಯಪಕ್ಕ ಸಣ್ಣ ತೋಟವಾದರೂ ಮಾಡಿಕೊಳ್ಳುತ್ತಿದ್ದೆವು. ನಂತರ ಮನೆ ಕಾಂಪೌಂಡ್ ಒಳಗೆ ತೆಂಗು, ಮಾವು, ಹಲಸಿನ ಮರ ಹಾಕುತ್ತಿದ್ದೆವು. ನಗರ ಪ್ರದೇಶಗಳಲ್ಲಿ ಜಾಗದ ಕೊರತೆಯಿಂದ ವಿವಿಧ ಸಣ್ಣಪುಟ್ಟ ಗಿಡಗಳನ್ನು ಬೆಳೆಸುತ್ತಿದ್ದೇವೆ” ಎಂದರು.

ನಮ್ಮ ಮಕ್ಕಳು ನಮ್ಮ ನಿಜವಾದ ಆಸ್ತಿ. ಅವರಿಗಾಗಿ ಭವಿಷ್ಯ ರೂಪಿಸಬೇಕು ಎಂದು ಮಕ್ಕಳಿಂದಲೇ ಒಂದೊಂದು ಗಿಡ ನೆಡಿಸಿ ಅವರೇ ಅವುಗಳನ್ನು ಬೆಳೆಸುವಂತೆ ಮಾಡಬೇಕು ಎಂಬುದು ನಮ್ಮೆಲ್ಲರ ಆಸೆ. ಹೀಗಾಗಿ ನಾನು ಬೆಂಗಳೂರು ನಗರದ ಸಚಿವನಾದ ಬಳಿಕ ಈ ಕಾರ್ಯಕ್ರಮವನ್ನು ನಡೆಸಲು ಆದೇಶ ನೀಡಲಾಯಿತು ಎಂದರು.

ಇನ್ನು ಶಾಲೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಪ್ರತಿ ಶಾಲೆ ಒಂದೊಂದು ಪ್ರದೇಶ ಆಯ್ಕೆ ಮಾಡಿಕೊಂಡು ಅಲ್ಲಿ ತಮ್ಮ ಶಾಲೆ ವಿದ್ಯಾರ್ಥಿಗಳಿಂದ ಗಿಡ ನೆಡಿಸಿ ಅದನ್ನು ಬೆಳೆಸಬೇಕು. ಆ ಗಿಡದ ಮೇಲೆ ಆ ಮಗುವಿನ ಹೆಸರು ಹಾಕಿಕೊಳ್ಳುವ ಅವಕಾಶ ನೀಡುವ ಕಾರ್ಯ ಆರಂಭಿಸಿದೆವು. ಈ ಕಾರ್ಯಕ್ರಮದ ಮೂಲಕ ಇಲ್ಲಿಯವರೆಗೂ 53 ಸಾವಿರ ಮಕ್ಕಳು ಗಿಡ ನೆಟ್ಟು ಅವುಗಳನ್ನು ಬೆಳೆಸುತ್ತಿದ್ದಾರೆ. ಈ ಪ್ರಕ್ರಿಯೆ ಹೀಗೆ ಮುಂದುವರಿಯಬೇಕು ಎಂದು ಹೇಳಿದರು.

ಇಂದು ಬೆಂಗಳೂರು ಹವಾಮಾನ ಕ್ರಿಯಾ ಕೋಶ (ಬೆಂಗಳೂರು ಕಾರ್ಯಯೋಜನೆ ಕ್ಲಬ್) ಆರಂಭಿಸಿದ್ದೇವೆ. ಈ ಕ್ಲಬ್ ನಲ್ಲಿ ಕನಿಷ್ಠ 10 ಜನ ಸದಸ್ಯರು ಇರಬೇಕು ಎಂದು ಪ್ರಸ್ತಾವನೆ ಬಂದಿತ್ತು. ಆದರೆ ನಾನು ಕನಿಷ್ಠ 25 ಸದಸ್ಯರು ಇರಬೇಕು ಎಂದು ತೀರ್ಮಾನ ಮಾಡಿದೆ. ಬೆಂಗಳೂರಿನಲ್ಲಿ ಸುಮಾರು 7 ಸಾವಿರ ಶಾಲೆಗಳಿವೆ. ಇಲ್ಲಿ ಆರಂಭಿಸಿದ ನಂತರ ಬೇರೆ ಪ್ರದೇಶಗಳಲ್ಲಿ ವಿಸ್ತರಿಸಬಹುದು. ಬೆಂಗಳೂರು ಗಾರ್ಡನ್ ಸಿಟಿ ಎಂಬ ಹೆಸರು ಪಡೆದಿದ್ದು, ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಈ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ನೀಡಬೇಕು ಎಂದು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು..

ನಾನು ಸರ್ಕಾರಿ ಶಾಲೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಕಾರ್ಯಕ್ರಮ ನಡೆಸುತ್ತಿದ್ದರು. ಇದನ್ನು ನೋಡಿ ನನಗೆ ಅಸಮಾಧಾನವಾಯಿತು. ಹೀಗಾಗಿ ಅವರಿಗೆ ನಾನು ಒಂದು ಸೂಚನೆ ನೀಡಿದೆ. ಮುಂದೆ ಬೆಂಗಳೂರಿನಲ್ಲಿ ಶಾಲೆಯಲ್ಲಿ ಕಾರ್ಯಕ್ರಮ ಮಾಡಿದರೆ ಅವುಗಳನ್ನು ಶಾಲಾ ಮಕ್ಕಳೇ ನಡೆಸಬೇಕು ಎಂದು ಮಾರ್ಗದರ್ಶನ ನೀಡಿದೆ. ಈ ಕಾರ್ಯಕ್ರಮವನ್ನು ಮಕ್ಕಳೇ ನಡೆಸುತ್ತಿದ್ದಾರೆ. ಆಮೂಲಕ ಅವರಲ್ಲಿ ನಾಯಕತ್ವ ಗುಣಬೆಳೆಸಬೇಕು ಎಂದು ಹೇಳಿದರು.

ಇಂದು ನಾವು ಬ್ಲೂ, ಗ್ರೀನ್ ಪ್ರಶಸ್ತಿ ನೀಡಿದ್ದೇವೆ. ಮುಂದೆ ಇದಕ್ಕೆ ಹೆಚ್ಚು ಪ್ರೋತ್ಸಾಹ ನೀಡಿ ಹೆಚ್ಚು ಸ್ಪರ್ಧೆ ಏರ್ಪಡಲಿದೆ. ವಿವಿಧ ನಾಗರೀಕ ಸಂಘ ಸಂಸ್ಥೆಗಳು ಕೂಡ ಈ ವಿಚಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇಂದು 175 ಅರ್ಜಿಗಳು ಬಂದಿವೆ. ಮುಂದೆ 500-1000 ಅರ್ಜಿ ಬರಬಹುದು. ಶಾಲೆಗಳಲ್ಲಿನ ಕ್ಲಬ್ ಗಳಿಗೆ ಅಗತ್ಯ ನೆರವು ನೀಡಲಾಗುವುದು. ಈ ಕ್ಲಬ್ ಗಳ ಕಾರ್ಯಾಚರಣೆ ಕುರಿತ ಮಾರ್ಗಸೂಚಿ ಪುಸ್ತಕವನ್ನು ಇಂದು ನಾವು ಬಿಡುಗಡೆ ಮಾಡಿದ್ದೇವೆ. ನಿಮ್ಮ ಜತೆ ಎಲ್ಲಾ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ಕೆಲಸ ಮಾಡಲು ಇದನ್ನು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

“ಜೂ.5ರಂದು ಪರಿಸರ ದಿನವನ್ನು ಆಚರಿಸುತ್ತೇವೆ. ಯಾಕೋ ಏನೋ ಈ ಕಾರ್ಯಕ್ರಮವನ್ನು 6ರಂದು ನಡೆಸೋಣ ಎಂದು ಅಧಿಕಾರಿಗಳಿಗೆ ಹೇಳಿದ್ದೆ. ದುರ್ಘಟನೆ ಹಿನ್ನೆಲೆಯಲ್ಲಿ ಗುರುವಾರದಂದು ಸರ್ಕಾರದ ವತಿಯಿಂದ ಮಾಡಬೇಕಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ನಮ್ಮ ಜನ ಸಂಭ್ರಮಾಚರಣೆ ಸಮಯದಲ್ಲಿ ಶೋಕ ಆಚರಿಸುವಂತಾಯಿತು. ಇದರಿಂದ ನಾವೆಲ್ಲರೂ ನೋವಿನಲ್ಲಿದ್ದು, ಈ ವಿಚಾರವಾಗಿ ಹೆಚ್ಚು ವ್ಯಾಖ್ಯಾನ ಮಾಡುವುದಿಲ್ಲ” ಎಂದು ತಿಳಿಸಿದರು.

ಬೆಂಗಳೂರು ಸ್ವಚ್ಛತೆಗೆ ಕಾರ್ಯಕ್ರಮ: ಕಾರ್ಯಕ್ರಮದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು ಸ್ವಚ್ಛತೆಗೆ ರೂಪಿಸಿರುವ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಬೆಂಗಳೂರನ್ನು ಸ್ವಚ್ಛ ಮಾಡಲು ಜಿಬಿಎ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದರಲ್ಲಿ ಸಾರ್ವಜನಿಕರು ಕಸ ಇರುವ ಸ್ಥಳಗಳನ್ನು ಫೋಟೋ, ವಿಡಿಯೋ ಮಾಡಿ ಆ ಸ್ಥಳದ ಲೊಕೇಶನ್ ಕಳುಹಿಸಿದರೆ ಪಾಲಿಕೆ ಅಧಿಕಾರಿಗಳು ಅವುಗಳನ್ನು ಸ್ವಚ್ಛ ಮಾಡಲಿದ್ದಾರೆ. ಪಾಲಿಕೆ ಪೌರಕಾರ್ಮಿಕರನ್ನು ಖಾಯಂಗೊಳಿಸಿದ್ದು, ಅವರು ಕೂಡ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈ ವಿಚಾರವಾಗಿ ಪಾಲಿಕೆ ಆಯುಕ್ತರಿಗೆ ಮಾರ್ಗದರ್ಶನ ನೀಡಿದ್ದೇನೆ” ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...