ಸಾರಿಗೆ ನೌಕರರಿಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತೆಯೇ ಸರಿ ಸಮಾನ ವೇತನ ಮಾಡುತ್ತೇವೆ: ಸಚಿವ ರಾಮಲಿಂಗಾರೆಡ್ಡಿ
- ಜತೆಗೆ2020ರ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ
- ನಮ್ಮ 2024ರ ಈವರೆಗಿನ ಹಿಂಬಾಕಿ ಕೊಡಬೇಕು ಎನ್ನುವುದು ಜ್ಞಾಪಕವಿದೆ
ಬೆಂಗಳೂರು: ಸಾರಿಗೆ ನೌಕರಿಗೆ ಸರಿಸಮಾನ ವೇತನ ಕೊಡುವುದಾಗಿ ನಮ್ಮ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಹೇಳಿದ್ದೇವೆ ಅದನ್ನು ಈಡೇರಿಸುವ ನಿಟ್ಟಿನಲ್ಲಿ ಇದ್ದೀವಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದ ಪುರಭವನದಲ್ಲಿ ಮಂಗಳವಾರ ನಾಲ್ಕೂ ನಿಗಮಗಳ ಪರಿಶಿಷ್ಟ ಜಾತಿ- ಪಂಗಡಗಳ ನೌಕರರ ಸಂಘ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯಲ್ಲಿ ಅವರು ಮಾತನಾಡಿದರು.
ಹಾಗೆಯೆ 2020ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಿರುವ ಅದರ 38 ತಿಂಗಳ ಹಿಂಬಾಕಿ ಜತೆಗೆ 2024ರ ಜನವರಿಯಿಂದ ಆಗಬೇಕಿರುವುದು ಸೇರಿ ಈಗ ಎಲ್ಲವನ್ನು ಕೊಡುತ್ತೇವೆ ಎಂದು ಹೇಳಿದರು.
ಈಗಾಗಲೇ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಮಾತನಾಡಿದ್ದು ಅವರು ಕೂಡ ಆದಷ್ಟು ಬೇಗನೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಯಾರು ಆತಂಕಪಡುವುದು ಬೇಡ ಎಲ್ಲವೂ ಜ್ಞಾಪಕವಿದೆ. ಒಂದು ಮುಕ್ತಾಯ ಹಂತಕ್ಕೆ ಬರಬೇಕು ಬರುತ್ತವೆ ಎಂದು ಹೇಳಿದರು.
ಚಾಲಕ-ನಿರ್ವಾಹಕರ 35 ಸಾವಿರ ಕೇಸ್ಗಳು ವಜಾ: ಇನ್ನು ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರ ವಿರುದ್ಧ ಹಾಕಲಾಗಿದೆ 35 ಸಾವಿರ ಪ್ರಕರಣಗಳನ್ನು ನಮ್ಮ ಎಂಡಿ ಅನ್ಬುಕುಮಾರ್ ಅವರು ವಜಾ ಮಾಡಿದ್ದಾರೆ. ಅಲ್ಲದೆ ಮುಷ್ಕರದ ಸಮಯದಲ್ಲಿ ಆಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಕೇಳುತ್ತಿದ್ದೀರಿ. ಒಂದು ಬಾರಿ ಎಫ್ಐಆರ್ ಆದಮೇಲೆ ಇದನ್ನು ನಾವು ವಾಪಸ್ ಪಡೆಯಲು ಬರುವುದಿಲ್ಲ.
ಕ್ಯಾಬಿನೆಟ್ ಸಬ್ ಕಮಿಟ್ ಮುಂದೆ ನಿಮ್ಮ ಕೇಸ್ ತನ್ನಿ: ಹೀಗಾಗಿ ಯಾರ ವಿರುದ್ಧ ಎಫ್ಐಆರ್ ಆಗಿದೆ ಅವರು ನಮ್ಮ ಗೃಹ ಸಚಿವರ ಬಳಿ ಬಂದು ಅವರ ಗಮನಕ್ಕೆ ತರಬೇಕು ಅಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಇದೆ ಆ ಕಮಿಟಿಯಲ್ಲಿ ನಾವು ಮೆಂಬರ್ ಇದ್ದೇವೆ. ಆ ಸಬ್ ಕಮಿಟಿ ಮುಂದೆ ನಿಮ್ಮ ಕೇಸ್ಗಳು ಬಂದರೆ ನಾವು ವಿತ್ಡ್ರಾ ಮಾಡಿಸಬಹುದು. ಇಲ್ಲ ಎಂದರೆ ನಾವು ಕ್ಯಾಬಿನೆಟ್ ಮುಂದೆ ತೆಗೆದುಕೊಂಡು ಹೋಗಬೇಕು ಇದು ಬೇಡ ನೀವು ಗೃಹ ಸಚಿವರ ಬಳಿ ಕೇಸ್ ತೆಗೆದುಕೊಂಡು ಬನ್ನಿ ಎಂದು ಸಲಹೆ ನೀಡಿದರು.
ವಜಾಗೊಂಡಿದ್ದ ಬಹುತೇಕ ಎಲ್ಲ ನೌಕರರು ವಾಪಸ್ ಬಂದಿದ್ದಾರೆ, ಇನ್ನು ಕೆಲವರಿದ್ದಾರೆ ಅಷ್ಟೆ. ಆದರೆ ಎಲ್ಲರಿಗೂ ಸಿಗಬೇಕಾ ಸೌಲಭ್ಯಗಳ ಬಗ್ಗೆ ಅದನ್ನು ಸರಿ ಪಡಿಸಬೇಕು ಅದನ್ನು ನಾನು ಮಾಡಿಕೊಡುತ್ತೇನೆ ಬನ್ನಿ ಎಂದು ತಿಳಿಸಿದರು.
ಅಲ್ಲದೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಂದ ಈಗವರೆಗೂ 629 ಪ್ರಶಸ್ತಿಗಳು ಬಂದಿವೆ. ಪ್ರಪಂಚದಲ್ಲಿ ಯಾವುದೇ ಸಂಸ್ಥೆಗೂ ಇಷ್ಟೊಂದು ಪ್ರಶಸ್ತಿಗಳು ಬಂದಿಲ್ಲ. ಇದರ ಎಲ್ಲ ಕ್ರೆಡಿಟ್ಗಳು ನಮ್ಮ ನೌಕರರಿಗೆ ಹಾಗೂ ಅಧಿಕಾರಿಗಳಿಗೆ ಸಲ್ಲಬೇಕು ಎಂದರು.
ಶಕ್ತಿ ಕಾರ್ಯಮದಿಂದ ಜನರಿಗೂ ಶಕ್ತಿ ಬಂದಿದೆ ಈ ಹಿಂದೆ ಒಂದು ದಿನಕ್ಕೆ 80 ಸಾವಿರ ಪ್ರಯಾಣಿಸುತ್ತಿದ್ದರು ಈಗ 1 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ. ಇದರಲಿಂದಲೂ ಸಂಸ್ಥೆಗಳಿಗೆ ಲಾಭವಾಗುತ್ತಿದೆ ಎಂದು ಹೇಳಿದರು.
Related

You Might Also Like
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...
KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
ಆ.5ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....
ಚಲಿಸುತ್ತಿದ್ದ ಬಸ್ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ
ಮುಂಬೈ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...
ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ನೀಡಲು ಪಟ್ಟು: ಡಿಸಿ ಕಚೇರಿ ಬಳಿ ರೈತ ಮುಖಂಡರ ಪ್ರತಿಭಟನೆ
ಮೈಸೂರು: 66/11 ಕೆ.ವಿ. ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ರೈತರ ಜಮೀನಿನ ಮೇಲೆ ಹಾದು ಹೋಗಿರುವುದರಿಂದ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ...
ಬಿ.ಸರೋಜಾದೇವಿ ಮೇರು ನಟಿ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ...
ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ...
KKRTC ವೋಲ್ವೋ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕನ ಕಾಲು ಮುರಿದಿದ್ದು,...