NEWSಕೃಷಿದೇಶ-ವಿದೇಶ

ಕಾವೇರಿ ನೀರು ತಡೆಗಟ್ಟಿ ಎರಡು ರಾಜ್ಯಗಳ ರೈತರು ಬಳಸಿಕೊಂಡರೆ ತಪ್ಪೇನು: ಕುರುಬೂರು ಶಾಂತಕುಮಾರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೃಷ್ಣಗಿರಿ: ಹೆಚ್ಚು ಮಳೆ ಬಂದಾಗ ಕಾವೇರಿ ನೀರು ಸಮುದ್ರಕ್ಕೆ ಹರಿಯುವುದನ್ನು ತಡೆಗಟ್ಟಿ ಎರಡು ರಾಜ್ಯದ ರೈತರು ಬಳಸಿಕೊಂಡರೆ ತಪ್ಪೇನು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಇಂದು (ಜು.5) ಆಯೋಜಿಸಿದ್ದ ಬೃಹತ್ ರೈತ ಸಮಾವೇಶದಲ್ಲಿ ಮಾತನಾಡಿದರು.

ತಮಿಳುನಾಡು- ಕರ್ನಾಟಕ ಈ ಎರಡೂ ರಾಜ್ಯಗಳ ರಾಜಕೀಯ ಪಕ್ಷಗಳು ಸರ್ಕಾರಗಳು ರಾಜಕೀಯ ಗೊಂದಲ ಮಾಡಬಾರದು ಇದು ರೈತರ ಬದುಕಿನ ಪ್ರಶ್ನೆಯಾಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಮೇಕೆದಾಟು ಯೋಜನೆ ಸಾಧ್ಯವಾದರೆ 50 ಟಿಎಂಸಿ ನೀರು ಸಂಗ್ರಹಿಸಬಹುದು ಎಂದು ವಿವರಿಸಿದರು.

ಮಳೆ ಬರದ ಇಂಥ ಸಂಕಷ್ಟ ಕಾಲದಲ್ಲಿ ನೀರು ಸಂಗ್ರಹವಾಗಿದ್ದರೆ ಅದನ್ನು ಬಳಸಿಕೊಳ್ಳಬಹುದು ಎಂಬುದನ್ನು ನಾವೆಲ್ಲ ಚಿಂತನೆ ಮಾಡಬೇಕಾಗಿದೆ ಎಂದು ಹೇಳಿದರು.

ಇನ್ನು ವಿಶ್ವ ವ್ಯಾಪಾರ ಒಪ್ಪಂದ ನೀತಿಯಿಂದ ಕೇಂದ್ರ ಸರ್ಕಾರ ಆಮದು ಸುಂಕ ವಿನಾಯಿತಿ ನೀಡಿದ ಕಾರಣ ಮಲೇಶಿಯಾ ದೇಶದಿಂದ ತಾಳೆ ಎಣ್ಣೆ, ಚೀನಾ ದೇಶದಿಂದ ರೇಷ್ಮೆ ಆಮದು ಮಾಡಿಕೊಂಡ ಕಾರಣ ದೇಶದ ತೆಂಗು ಬೆಳೆಗಾರರು ಹಾಗೂ ರೇಷ್ಮೆ ಬೆಳೆಗಾರರು ಬೆಲೆ ಕುಸಿತದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಸಮಾವೇಶದಲ್ಲಿ ತೆಲಂಗಾಣ ರಾಜ್ಯದ ನರಸಿಂಹ ನಾಯ್ಡು ಮಾತನಾಡಿದರು. ತಮಿಳುನಾಡಿನ ರೈತ ಮುಖಂಡ ರಾಮನ್ ಗೌ೦ಡರ ಸಮಾವೇಶ ಆಯೋಜಿಸಿ ಅಧ್ಯಕ್ಷತೆ ವಹಿಸಿದ್ದರು. ನೂರಾರು ರೈತರು, ರೈತ ಮುಖಂಡರು ಭಾಗವಹಿಸಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...