NEWSಸಿನಿಪಥ

ಅಪರ್ಣಾ ಕೊನೆ ಸಂದರ್ಶನದಲ್ಲಿ ಏನಿತ್ತು.. ಟೆಲಿವಿಶನ್​​ ಲೋಕಕ್ಕೆ ಹೇಗೆ ಬಂದಿದ್ದು ಹೇಗೆ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಪರ್ಣಾ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇತ್ತೀಚೆಗೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು ಇಹಲೋಕ ತ್ಯಜಿಸಿದ್ದಾರೆ. ಟೆಲಿವಿಶನ್​​ ಲೋಕಕ್ಕೆ ಹೇಗೆ ಬಂದಿದ್ದು? ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಅಪರ್ಣಾ ಕೊನೆ ಸಂದರ್ಶನದಲ್ಲಿ ಏನಿತ್ತು..?: ದೂರದರ್ಶನ ಎಂಬ ಮಾಧ್ಯಮ ಆಗಷ್ಟೇ ಹುಟ್ಟಿದ ಕೂಸು. 1983ರಲ್ಲೇ ಟೆಲಿವಿಷನ್ ಶುರುವಾಗಿದ್ದು. ಆಗ ಹಿಂದಿ ಕಾರ್ಯಕ್ರಮಗಳು ಮಾತ್ರ ಪ್ರಸಾರ ಆಗುತ್ತಿದ್ದವು. ನನಗೆ ಮೊದಲ ಬಾರಿ ದೂರದರ್ಶನ ಕಂಡಾಗ ಎಲ್ಲಿಲ್ಲದ ಸಂತೋಷ. ಯಾವತ್ತೋ ಒಂದು ದಿನ ದೂರದರ್ಶನದಲ್ಲಿ ಬದುಕು ಕಟ್ಟಿಕೊಳ್ಳುತ್ತೇನೆ ಎಂದು ಅವತ್ತೇ ಕನಸು ಕಂಡಿದ್ದೆ ಎಂದಿದ್ದರು ಅಪರ್ಣಾ.

ಖಾಸಗಿ ಚಾನೆಲ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತಾಡಿದ್ದ ಅಪರ್ಣಾ, ಡ್ರಾಮಾ ಆಡಿಷನ್ ಮೂಲಕ ಕಲಾವಿದೆ ಆಗಬೇಕು ಎಂದು ಕನಸು ಕಂಡಿದ್ದೆ. ಆಗ ನನಗೆ ಸಹಾಯ ಮಾಡಿದವರು ಶ್ರೀನಿವಾಸ ಪ್ರಭು ಅವರು. ಬಳಿಕ ಸೂರಿ ಅವರ ನಿರ್ದೇಶನದಲ್ಲಿ ನಾಪತ್ತೆ ಆದ ಪ್ರೇಮಿ ಎಂಬ ನಾಟಕ ಮಾಡಿದೆ ಎಂದಿದ್ದರು.

ರಂಗ ಭೂಮಿ ಕಲಾವಿದರಾದ ವಿಶ್ವನಾಥ್ ರಾವ್, ಮಂಗಳ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್​ ಸೇರಿದಂತೆ ಹಲವರು ಚಿತ್ರರಂಗಕ್ಕೆ ಬರುವ ಮುಂಚೆ ನಮ್ಮೊಂದಿಗೆ ಇದ್ದರು. ನಮ್ಮ ಜೊತೆ ರಂಗ ಭೂಮಿಯ ಕಲಾವಿದರಾಗಿ ನಾಟಕದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು ಎಂದು ಹೇಳಿದ್ದರು.

ನಾನು 1989ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದೆ. 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ಮಸಣದ ಹೂವು ಚಿತ್ರದಲ್ಲಿ ನಟಿಸಿದ್ದೆ. ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದೇನೆ. 90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದೇನೆ. ರೇಡಿಯೋ ಜಾಕಿ ಕೂಡ ಆಗಿದ್ದೆ.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದೇನೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಭಾಗವಹಿಸಿದ್ದೇನೆ. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದೆ ಎಂದು ತಮ್ಮ ಕೊನೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು ಅಪರ್ಣಾ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ