ಯಾವಾಗ ಸ್ವಾಮಿ ತಾವು ಸರಿ ಸಮಾನ ವೇತನ ಕೊಡಿಸುವುದು 2024ರ ಅಗ್ರಿಮೆಂಟ್ ಆದ ಮೇಲಾ: ನೌಕರರ ಪ್ರಶ್ನೆ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುತ್ತೇವೆ ಎಂದು 1/1/2020ರ ವೇತನ ಅಗ್ರಿಮೆಂಟ್ ಬೇಡ ಎಂದು ಮುಷ್ಕರ ಮಾಡಿಸಿದ್ದೀರಾ, ಮುಷ್ಕರ ಫೇಲಾದ ನಂತರ ಸರಿಸಮಾನ ವೇತನ ಕೊಡಿಸುತ್ತೇನೆ ಎಂದು ಹೋರಾಟಗಳನ್ನು ಮಾಡುತ್ತೀರಾ. ನಿಮ್ಮ ಕಡೆ ವೇತನ ಹೆಚ್ಚಾಗದೆ ಇದ್ದ ಕಾರಣ ಜಂಟಿ ಸಮಿತಿ ಮಧ್ಯ ಪ್ರವೇಶ ಮಾಡಿತು.
ಆ ಬಳಿಕ ಸಾರಿಗೆ ನೌಕರರಿಗೆ ಸರ್ಕಾರ ಶೇ.15ರಷ್ಟು ವೇತನ ಹೆಚ್ಚಳ ಮಾಡಿತ್ತು. ಜಂಟಿ ಹೋರಾಟದಿಂದಲೇ ಇದು ಆಯಿತು ಎಂದು ಹೇಳಲೇಬೇಕು. ಏಕೆಂದರೆ ನೀವು ಅಗ್ರಿಮೆಂಟ್ ಬೇಡ ಎಂದು ಹೋರಾಟ ಮಾಡುತ್ತಲೇ ಬಂದಿದ್ದೀರಿ ಹಾಗಾಗಿ ಅಗ್ರಿಮೆಂಟ್ ವೇಳೆ ಶೇ. 15ರಷ್ಟು ವೇತನ ಹೆಚ್ಚಳವಾಗಿರುವುದರಲ್ಲಿ ನಿಮ್ಮ ಕೂಡದ ಹೋರಾಟ ಸೊನ್ನೆಯೇ ಆಗಿದೆ.
ಇನ್ನು ಶೇ.15ರಷ್ಟು ವೇತನ ಹೆಚ್ಚಳ 2020ರ ಜ.1ರಿಂದ ಜಾರಿಗೆ ಬರುವಂತೆ ಸರ್ಕಾರ ಘೋಷಣೆ ಮಾಡಿದ್ದು 2023ರ ಮಾರ್ಚ್ನಲ್ಲಿ. ಆ ಬಳಿಕ ಸರ್ಕಾರ ಮಾಡಿರುವ ಹೆಚ್ಚಳದ ಹಿಂಬಾಕಿ ಕೊಡಿಸುವುದಕ್ಕಾದರೂ ಹೋರಾಟ ಮಾಡಬಹುದಿತ್ತು. ಅದಕ್ಕೂ ಸಮರ್ಪಕವಾಗಿ ನಿಮ್ಮ ಕೂಟ ತೊಡಗಿಸಿಕೊಳ್ಳಲಿಲ್ಲ. ಈಗಲೂ ಆ ಬಗ್ಗೆ ತೊಡಗಿಸಿಕೊಂಡಿಲ್ಲ ಎಂದೇ ಹೇಳಬಹುದು.
ಸರಿ ಆದರೂ ನೌಕರರು ನಿಮ್ಮ ಕೂಟವನ್ನು ನಂಬಿಕೊಂಡು ಈಗಲೂ ನಮಗೆ ಸರಿ ಸಮಾನ ವೇತನ ಆಗುತ್ತದೆ ಎಂದು ಚಾತಕಪಕ್ಷಿಯಂತೆ ಕಾದು ಕುಳಿತಿದ್ದಾರೆ. ಆದರೆ ತಾವು ಏನು ಮಾಡಿದ್ಧೀರಿ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಸರಿ ಸಮಾನ ವೇತನ ಕೊಡಿಸುವುದಕ್ಕೆ ಮುಂದಾದರ ಇಲ್ಲ. ಅದೂ ಹೋಗಲಿ 2020ರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯೂ ಈವರೆಗೂ ಬಂದಿಲ್ಲ ಏನು ಮಾಡುತ್ತಿದ್ದೀರಿ?
ಇನ್ನು ತಾವು ಸರ್ಕಾರ ಬದಲಾದ ಬಳಿಕ ಸರಿ ಸಮಾನ ವೇತನ ಆಗುತ್ತದೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವುದನ್ನು ನಮಗೆ ಕೊಡುತ್ತದೆ ಎಂದು ಹೇಳಿಕೊಂಡೇ ಕಳೆದ ಒಂದೂವರೆ ವರ್ಷದಿಂದಲೂ ನೌಕರರ ಸೊಸೈಟಿ ಚುನಾವಣೆ, ಆಟೋಟ ಹಾಗೂ ಇನ್ನಿತ ನಿಮ್ಮ ಒಕ್ಕೂಟದ ಕೆಲಸಗಳಲ್ಲಿ ಬ್ಯುಸಿ ಆಗಿ ವೇತನದ ಬಗ್ಗೆ ಎಲ್ಲೂ ಮಾತನಾಡಲಿಲ್ಲ. ಆದರೂ ನೌಕರರು ಕೂಟ ಮತ್ತು ಒಕ್ಕೂಟವನ್ನು ನಂಬಿಕೊಂಡೆ ಈಗಲೂ ಇದ್ದಾರೆ.
ಹೀಗಾಗಿ ತಾವು ಈಗಲಾದರೂ ನೌಕರರಿಗೆ ಅತೀ ಶೀಘ್ರದಲ್ಲೇ ಸಿಹಿ ಸುದ್ದಿಕೊಡಲು ಸರ್ಕಾರ ಮುಂದಾಗುತ್ತಿದೆ ಎಂದೋ ಅಥವಾ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದೋ ಹೇಳಿಲ್ಲ. ಹೇಳಿದ್ದರೂ ಅದಕ್ಕೆ ಯಾವುದೆ ಸಮಯದ ಗಡಿ ನಿರ್ಧಾರವಾಗಿಲ್ಲ. ಏಕೆ ಹೀಗೆ ನೌಕರರ ದಿಕ್ಕು ತಪ್ಪಿಸಿಕೊಂಡೇ ಬರುತ್ತಿದ್ದೀರಿ?
2024ರ ಜನವರಿ 1ರಿಂದ ಅಗ್ರಿಮೆಂಟ್ ಮಾಡುವುದಕ್ಕೋ ಇಲ್ಲ ನಿಮ್ಮ ಹೇಳಿಕೆಯಂತೆ ಸರಿ ಸಮಾನವೇತನ ಮಾಡುವುದಕ್ಕೋ ಈ 11 ತಿಂಗಳಿಂದ ಏಕೆ ಸಾಧ್ಯವಾಗಿಲ್ಲ. ಸರ್ಕಾರದ ಖಜಾನೆಯಲ್ಲಿ ನೌಕರರಿಗೆ ಕೊಡಲು ಹಣವಿಲ್ಲವೇ? ಈ ಕಾಲವಕಾಶದಲ್ಲಿ ಅಂದರೆ ಕಳೆದ 11 ತಿಂಗಳಲ್ಲಿ ತಾವು ನೌಕರರಿಗೆ ಸರಿ ಸಮಾನ ವೇತನ ಕೊಡಿಸ ಬಹುದಾಗಿತ್ತು. ಆದರೆ ಇದರ ಬಗ್ಗೆ ಈವರೆಗೂ ದೃಢ ನಿರ್ಧಾರ ತೆಗೆದುಕೊಂಡಿಲ್ಲ.
ಬದಲಿಗೆ ಕೆಎಸ್ಆರ್ಟಿಸಿ ಸೊಸೈಟಿ ಎಲೆಕ್ಷನ್ ಗಾಗಿ ವಿನೂತನವಾಗಿ ಹೋರಾಟ ಮಾಡಿ ಜಯಶೀಲರಾಗಿ ಇದ್ದೀರಾ ಒಳ್ಳೆಯದಾಗಲಿ. ಆದರೆ, ಈಗ ಜಂಟಿ ಸಮಿತಿ ಅವರು ವೇತನ ಹೆಚ್ಚಳ ಮಾಡಿಸುವುದಕ್ಕಾಗಿ ಹೋರಾಟ ಮಾಡಲು ಮುಂದೆ ಬಂದ ಬಳಿಕ ಈಗ ಮಾಧ್ಯಮಗಳಲ್ಲಿ ಕಾಣಿಸಿಕೊಂಡು ಹೇಳಿಕೆ ಕೊಡುವ ಮೂಲಕ ಯಾಕೆ ನೌಕರರನ್ನು ದಾರಿ ತಪ್ಪಿಸುತ್ತಿದ್ದೀರಾ?
ಇನ್ನು ತಮಗೆ ಡಿ.31ರವರೆಗೂ ಅಂದರೆ 16 ದಿನಗಳ ಸಮಯವಿದೆ. ಈ ಸಮಯದಲ್ಲಾದರೂ ತಾವು ಸರಿ ಸಮಾನ ವೇತನ ಕೊಡಿಸಿ ನೌಕರರಿಗೆ ಒಳ್ಳೆ ಸುದ್ದಿ ಕೊಡಬೇಕು ಅಲ್ಲವೇ? ಅದನ್ನು ಬಿಟ್ಟು ಈಗಲೂ ತಾವು ಆ ನಿಟ್ಟಿನಲ್ಲಿ ಹೇಳಿಕೆ ಕೊಡದೆ ಡಿ.31ರ ಹೋರಟಕ್ಕೆ ಬೆಂಬಲವಿಲ್ಲ ಎಂದರೆ ತಾವು ಏನು ಮಾಡಲು ಹೊರಟಿದ್ದೀರಿ ಹೇಳುತ್ತೀರಾ?
ಇಲ್ಲ ನಮ್ಮ ಕೂಟ ಹಾಗೂ ಒಕ್ಕೂಟದಿಂದ ಸರಿ ಸಮಾನ ವೇತನ ಕೊಡಿಸಲು ಆಗುವುದಿಲ್ಲ ಎಂದಾದರೆ ತಾವು ಮೌನವಾಗಿ ಇದ್ದುಬಿಡಿ. ಸಂಬಳ ಹೆಚ್ಚಾಗಲಿ ಇಲ್ಲ ಆಗದೆ ಇರಲಿ ಅದನ್ನು ನಾವು ಅಧಿಕಾರಿಗಳ ಜತೆ ಸೇರಿ ನೋಡಿಕೊಳ್ಳುತ್ತೇವೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಸಂಬಂಧ ಹೋರಾಟ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರೊಂದಿಗೆ ನಾವು ಸೇರಿ ಹೋರಾಟ ಮಾಡುತ್ತೇವೆ ಎಂದು ನೊಂದ ನೌಕರರು ಪ್ರಶ್ನಿಸುವ ಮೂಲಕ ಸ್ಪಷ್ಟ ಸಂದೇಶ ನೀಡಿ ಎಚ್ಚರಿಕೆ ಕೊಟ್ಟಿದ್ದಾರೆ.
ಇನ್ನು ತಾವು ಉತ್ತರನ ಪೌರುಷ ಒಲೆಮುಂದೆ ಎಂಬಂತೆ ನೌಕರರಿಗೆ ದಾರಿ ತಪ್ಪಿಸುವ ಕೆಲಸ ಬಿಟ್ಟು ಸರಿ ಸಮಾನ ವೇತನ ಕೊಡಿಸುವತ್ತ ಮುಂದಾಗಿ ಇಲ್ಲ ಅದೂ ಕೂಡ ಈ 16 ದಿನದಲ್ಲೇ ಆಗಬೇಕು. ಇಲ್ಲ ಸರ್ಕಾರ ಇದಕ್ಕೆ ಒಪ್ಪಲಿಲ್ಲ ಎಂದಾದರೆ ಜಂಟಿ ಸಮಿತಿಯವರಂತೆ ಹೋರಾಟದ ದಿನಾಂಕ ಘೊಷಿಸಿ ನೌಕರರು ಅಧಿಕಾರಿಗಳಿಗೆ ಮನವಿ ಮಾಡಿ.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...