ಬೆಂಗಳೂರು: ಕುಣಿಗಲ್ ನೀರಿನ ಸಮಸ್ಯೆ ಪರಿಹರಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಯಾಬಿನೆಟ್ನಲ್ಲಿ ನಮಗೆ ಸಹಾಯ ಮಾಡೋದಾಗಿ ಹೇಳಿದ್ದಾರೆ. ಅದಕ್ಕೆ ರಾಜೇಂದ್ರ ರಾಜಣ್ಣ ಯಾಕೆ ಮಾತಾಡ್ತಾರೆ. ನಾನು ಫೋನ್ ಮಾಡಿ ಬೆದರಿಕೆ ಹಾಕ್ತೀನಿ ಅಂತಾರೆ, ಒಬ್ಬ ಮಂತ್ರಿ ಮಗನಿಗೆ ಬೆದರಿಕೆ ಹಾಕೋಕೆ ಆಗುತ್ತಾ ನಾನು ಸಾಮಾನ್ಯ ರೈತನ ಮಗ ಅಂತ ಕುಣಿಗಲ್ ಶಾಸಕ ರಂಗನಾಥ್ ಸಚಿವ ರಾಜಣ್ಣ ಪುತ್ರನ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಹೇಮಾವತಿ ನಾಲೆ ವಿಚಾರದಲ್ಲಿ ಕುಣಿಗಲ್ ಶಾಸಕ ರಂಗನಾಥ್ ಬೆದರಿಕೆ ಹಾಕ್ತಿದ್ದಾರೆ ಎಂಬ ರಾಜಣ್ಣ ಪುತ್ರ ರಾಜೇಂದ್ರ ಹೇಳಿಕೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಫೋನ್ನಲ್ಲಿ ಮಾತಾಡಿದ್ರೆ ಅದು ಬೆದರಿಕೆ ಹೇಗೆ ಆಗಬೇಕು ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರ ಬಂದಿದೆ. ಜನರ ಪರ ನಾವು ಕೆಲಸ ಮಾಡೋಣ. ಶಿರಸಾವಹಿಸಿ ಕೆಲಸ ಮಾಡೋಣ. ಸಹಕಾರ ಸಂಘದಲ್ಲಿ ಬಿಜೆಪಿ- ಜೆಡಿಎಸ್ ಸದಸ್ಯರೇ ಅನೇಕ ವರ್ಷಗಳಿಂದ ಇದ್ದಾರೆ. ನಾನು ಕಾಂಗ್ರೆಸ್ ಬೆಂಬಲಿಗರನ್ನು ತರೋಕೆ ಪ್ರಯತ್ನ ಮಾಡುತ್ತಿದ್ದೇನೆ. ಹೀಗಾಗಿ ಸಹಕಾರಿ ಸಂಘದಿಂದ ಸಾಲ ಕೊಡಿ ಅಂತ ಸದನದಲ್ಲಿ ಕೇಳಿದ್ದೇನೆ. ರಾಜಣ್ಣ ಜತೆ ನನಗೆ ವೈಮಸ್ಸಿಲ್ಲ. ಅವರ ಜತೆ ಸಲುಗೆಯಿಂದ ಬಂದಿದ್ದೇನೆ. ಯಾಕೆ ನನ್ನ ಮೇಲೆ ಭಿನ್ನಾಭಿಪ್ರಾಯ ಮಾಡುತ್ತಿದ್ದಾರೆ ಅಂತ ಗೊತ್ತಿಲ್ಲ ಎಂದರು.
ನಾನು ಯಾವ ಮಂತ್ರಿ ಮಗ ಅಲ್ಲ. ಬೆದರಿಕೆ ಹಾಕೋ ಗುಣ ಇಲ್ಲ. ಶಿವಕುಮಾರ್ ಅವರು ಶಾಸಕನಾಗಿ ಹೇಗೆ ನಡೆದುಕೊಳ್ಳಬೇಕು ಅಂತ ಹೇಳಿ ಕೊಟ್ಟಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ. ನಾನು ಯಾರಿಗೂ ಬೆದರಿಕೆ ಹಾಕಿಲ್ಲ ಎಂದು ಹೇಳಿದರು.
ಇನ್ನು ಕುಣಿಗಲ್ಗೆ ಕೊರಟಗೆರೆಯಿಂದ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ, ಮಧುಗಿರಿಗೆ ಕೊಡುತ್ತಿಲ್ಲ ಅಂತ ರಾಜೇಂದ್ರ ಅರೋಪ ಮಾಡಿದ್ದಾರೆ. ನನ್ನನ್ನ ಜನ ಎರಡು ಬಾರಿ ಗೆಲ್ಲಿಸಿದ್ದಾರೆ ಅವರಿಗೆ ನೀರು ಕೊಡಬೇಕು. ಕುಣಿಗಲ್ಗೆ ಶೇ.90 ನೀರು ಹರಿದಿಲ್ಲ. ಕುಣಿಗಲ್ಗೆ ಹಾಸನದಿಂದ ನೀರು ಬೇಕು, ನೀರು ತರಲು ನಾನು ಹೋರಾಟ ಮಾಡುತ್ತೇನೆ ಎಂದರು.
ಜನರಿಗೆ ನಮ್ಮ ಸರ್ಕಾರದ ಬಗ್ಗೆ ನಿರೀಕ್ಷೆ ಇದೆ, ಅದನ್ನು ಮಾಡಬೇಕು. ಬೀದಿಯಲ್ಲಿ ಮಾತಾಡೋದಕ್ಕಿಂತ ಪಕ್ಷದ ವೇದಿಕೆಯಲ್ಲಿ ಮಾತಾಡಬೇಕು. ಮದುಗಿರಿಯವರಿಗೆ ನೀರು ತರೋಕೆ ನಾನು ಪ್ರಯತ್ನ ಮಾಡುತ್ತೇನೆ ನಾನೇ ನಿಂತು ಮಧುಗಿರಿ ರೈತರಿಗೆ ನೀರು ಕೊಡ್ತೀನಿ. ಕುಣಿಗಲ್ ರೈತರಿಗೆ ಅನ್ಯಾಯ ಮಾಡಬೇಡಿ ಎಂದು ಹೇಳಿದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...