ಕುತ್ತಿಗೆಗೆ ಸೀರೆ ಬಿಗಿದ ಸ್ಥಿತಿಯಲ್ಲಿ ಪತ್ನಿ ಮೃತದೇಹ, ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಮೃತದೇಹ ಪತ್ತೆ

ಮುದ್ದೇಬಿಹಾಳ: ಕಾಲಿಗೆ ಹಾಗೂ ಕುತ್ತಿಗೆಗೆ ಸೀರೆ ಬಿಗಿದು ಹತ್ಯೆ ಮಾಡಿರುವ ಸ್ಥಿತಿಯಲ್ಲಿ ಪತ್ನಿಯ ಮೃತದೇಹವಿದ್ದರೆ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತಿಯ ಮೃತದೇಹ ಪತ್ತೆಯಾಗಿರುವ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದ ನಿವಾಸಿ ಸಿದ್ದಪ್ಪ ಹರನಾಳ ಹಾಗೂ ಆತನ ಪತ್ನಿ ಮೇಘಾ ಹರನಾಳ ಎಂಬುವರ ಶವಗಳೇ ಪತ್ತೆಯಾಗಿರುವುದು.
ಎಂಟು ವರ್ಷಗಳ ಹಿಂದೆ ಮೇಘಾ ಅವರನ್ನು ಸಿದ್ದಪ್ಪ ಹರನಾಳ ವಿವಾಹವಾಗಿದ್ದ. ದಂಪತಿಗೆ ಮುದ್ದಾದ ನಾಲ್ವರು ಮಕ್ಕಳಿದ್ದಾರೆ. ಆದರೆ, ಈಗ ಆ ಮಕ್ಕಳು ಅಪ್ಪ ಅಮ್ಮನ ಕಳೆದುಕೊಂಡು ಅನಾಥರಾಗಿದ್ದಾರೆ.
ಪತಿ ಸಿದ್ದಪ್ಪನೇ ಪತ್ನಿ ಮೇಘಾ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತ ಮೇಘಾಳ ತಾಯಿ ಗದ್ದೆಮ್ಮ ಹೊಸಮನಿ ಈ ಆರೋಪ ಮಾಡಿದ್ದಾರೆ.
ಸಿದ್ದಪ್ಪನ ತಾಯಿ ಶಾಂತಮ್ಮ ಹಾಗೂ ಸಹೋದರ ಶ್ರೀಕಾಂತ ಕಿರುಕುಳವೇ ಇದಕ್ಕೆ ಕಾರಣ ಎಂದು ಗದ್ದೆಮ್ಮ ದೂರಿದ್ದಾರೆ. ಕಳೆದ ಎರಡ್ಮೂರು ವರ್ಷಗಳಿಂದ ಸಿದ್ದಪ್ಪ ಹಾಗೂ ಮೇಘಾಳ ಸಂಸಾರದಲ್ಲಿ ಆಗಾಗ ಜಗಳವಾಗುತ್ತಿತ್ತು. ನಡುವೆ ರಾಜಿ ಪಂಚಾಯಿತಿ ಮಾಡಿ ಚೆನ್ನಾಗಿರಿ ಎಂದು ಹೇಳಿದ್ದೆವು. ಈಗ ನಮ್ಮ ಮಗಳನ್ನು ಕೊಲೆ ಮಾಡಿ ಅಳಿಯ ನೇಣಿಗೆ ಶರಣಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ನಾಲ್ವರು ಮಕ್ಕಳನ್ನು ಈಗ ಅನಾಥರನ್ನಾಗಿ ಮಾಡಿ ಹೋಗಿದ್ದಾರೆ ಎಂದು ಮೇಘಾಳ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಂಪತಿಯ ಜಗಳ ಇಬ್ಬರ ಪ್ರಾಣವನ್ನು ತೆಗೆಯುವ ಮಟ್ಟಕ್ಕೆ ಹೋಗಿರುವುದು ಮಾತ್ರ ಭಾರಿ ನೋವು ತರುತ್ತಿದೆ ಎಂದು ಗೋಳಾಡುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಬಾಲಣ್ಣ ನಂದಗಾವಿ ಹಾಗೂ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದ ಘಟನೆಯ ಕುರಿತು ಸತ್ತಾಂಶ ಹೊರಬೀಳಬೇಕಿದೆ.
ಇನ್ನು ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...
ಬೃಹತ್ ಇ-ಖಾತಾ ಮೇಳಕ್ಕೆ DCM ಡಿಕೆಶಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ
ಬೆಂಗಳೂರು: ಬಿಬಿಎಂಪಿ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಬೃಹತ್ ಇ-ಖಾತಾ ಮೇಳಕ್ಕೆ ಉಪ ಮುಖ್ಯಮಂತ್ರಿ...