CRIMENEWSನಮ್ಮಜಿಲ್ಲೆ

ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ನದಿಗೆ ನೂಕಿ ಹತ್ಯೆ ಮಾಡಲು ಯತ್ನಿಸಿದ ಪತ್ನಿ!

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೇ ನದಿಗೆ ನೂಕಿ ಹತ್ಯೆ ಮಾಡಲು ಪತ್ನಿಯೇ ಯತ್ನಿಸಿದ ಆರೋಪ ಕೇಳಿ ಬಂದಿದ್ದು, ಸದ್ಯ ನದಿ ಪಾಲಾಗುತ್ತಿದ್ದ ಪತಿಯನ್ನು ಸಾರ್ವನಿಕರು ರಕ್ಷಿಸಿದ್ದಾರೆ.

ಇದು ರಾಯಚೂರು ತಾಲೂಕಿನ ಗುರ್ಜಾಪುರ ಸೇತುವೆ ಬಳಿ ನಡೆದಿದೆ. ಕೃಷ್ಣಾ ನದಿಗೆ ಪತ್ನಿ ನೂಕಿ ಅಲ್ಲಿಂದ ಪರಾರಿಯಾಗಿದ್ದಾಳೆ. ಇತ್ತ ನದಿಗೆ ಬಿದ್ದ ವ್ಯಕ್ತಿಯನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೀವ ಉಳಿಸಿಕೊಂಡು ಬಂದ ವ್ಯಕ್ತಿ ಪತ್ನಿಯೇ ನನ್ನನ್ನು ನದಿಗೆ ನೂಕಿದ್ದಳು ಎಂದು ಹೇಳಿದ್ದಾರೆ. ಆದರೆ, ಘಟನೆ ಬಗ್ಗೆ ಇನ್ನೂ ವಿವರಣೆ ಸಿಕ್ಕಿಲ್ಲ. ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿರುವುದರಿಂದ ಮೈದುಂಬಿ ಹರಿಯುತ್ತಿದೆ.

ಈ ವೇಳೆ ಸೇತುವೆ ಮಾರ್ಗದಿಂದ ತೆರಳಿದ್ದ ನವದಂಪತಿ ಇದನ್ನು ಕಂಡು ಫೋಟೊ ತೆಗೆದುಕೊಳ್ಳಲು ನಿಂತಿದ್ದಾರೆ. ಮೊದಲು ಪತ್ನಿ ಫೊಟೋ ತೆಗೆದ ಪತಿ ಬಳಿಕ ತನ್ನ ಫೋಟೋ ತೆಗೆಯಲು ಪತ್ನಿಗೆ ಹೇಳಿದ್ದಾರೆ.

ಆಗ ಸೇತುವೆ ತುದಿಗೆ ನಿಲ್ಲಿಸಿದ ಪತ್ನಿ ಫೋಟೋ ತೆಗೆಯುವ ನೆಪದಲ್ಲಿ ನನ್ನನ್ನು ನದಿಗೆ ನೂಕಿದ್ದಾಳೆ ಎಂದು ಪತಿ ಆರೋಪಿಸುತ್ತಿದ್ದಾರೆ.

ಅಲ್ಲದೆ ನಾನು ನದಿಗೆ ಬಿದ್ದ ಕೂಡಲೇ ಈಜಿಕೊಂಡು ಹೋಗಿ ಕಲ್ಲು ಬಂಡೆಯಲ್ಲಿ ಕುಳಿತುಕೊಂಡೆ. ಬಳಿಕ ರಕ್ಷಣೆಗಾಗಿ ಜೋರಾಗಿ ಕೂಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಹಗ್ಗದ ನೆರವಿನೊಂದಿಗೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ನನ್ನನ್ನು ರಕ್ಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಈ ದಂಪತಿ ಎಲ್ಲಿಯವರು, ಆಕೆ ಹೀಗೆ ಏಕೆ ಮಾಡಿದಳು ಎಂಬ ಬಗ್ಗೆ ಹಾಗೂ ಈ ಘಟನೆಯ ಬಗ್ಗೆಯೂ ನಿಖರ ಕಾರಣ ತಿಳಿದು ಬಂದಿಲ್ಲ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ