NEWSನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಭಾರಿ ಮತಗಳ ಅಂತರದಿಂದ ವಿಜಯಮಾಲೆ ಧರಿಸಿರುವ ಹಿನ್ನೆಲೆ ಹಾಗೂ ಕಾಂಗ್ರೆಸ್​ ಸೋತಿರುವುದರಿಂದ ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಎಂಬ ಪ್ರಶ್ನೆ ಹರಿದಾಡುತ್ತಿದೆ.

ಹೌದು! ಈ ಕುರಿತು ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ತಮ್ಮ ರಾಜೀನಾಮೆ ಕುರಿತು ಚಲುವರಾಯಸ್ವಾಮಿ ಪ್ರಸ್ತಾಪಿಸಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು, ಸ್ಟಾರ್ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ‌ ರಾಜೀನಾಮೆ ಕೊಡಬೇಕಾಗುತ್ತೆ.

ಅಷ್ಟೇ ಅಲ್ಲ ಚುನಾವಣೆ ಸೋತರೇ ನನಗೆ ಕೆಲಸ ಮಾಡುವುದಕ್ಕೆ ಮನಸ್ಸು ಬರಲ್ಲ. ಟೇಬಲ್ ಕುಟ್ಟಲು ಆಗಲ್ಲ, ಸಂಪುಟದಲ್ಲಿ ತಲೆ ಎತ್ತಿ ಮಾತಾಡಲು ಆಗಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕು. ಈ ಚುಣಾವಣೆಯಲ್ಲಿ ಸೋತರೆ ಅಳಲ್ಲ, ಯಾರ ಕೈಗೂ ಸಿಗುವುದಿಲ್ಲ.

ಇನ್ನು ಎರಡು ತಿಂಗಳು ಎಲ್ಲಾದರೂ ಹೊರಗಡೆ ಪ್ರವಾಸಕ್ಕೆ ಹೋಗುತ್ತೇನೆ. ಮೊಬೈಲ್​ನ ಹಳೇ ಸಿಮ್ ಕಿತ್ತೆಸೆದು ಹೊಸ ಸಿಮ್ ಹಾಕಿಕೊಳ್ತೇನೆ. ರಾಜಕೀಯ ನಿವೃತ್ತಿ ಘೋಷಣೆ ಮಾಡಿ, ನೆಮ್ಮದಿಯಾಗಿ ಇರ್ತೀನಿ ಎಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಚಲುವರಾಯಸ್ವಾಮಿ ಭಾಷಣ ಮಾಡಿದ್ದರು.

ಸದ್ಯ ಈಗ ಮಂಡ್ಯದಲ್ಲಿ ಎಚ್.​ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ಜೆಡಿಎಸ್ ಕಾರ್ಯಕರ್ತರು ಸಚಿವ ಚಲುವರಾಯಸ್ವಾಮಿ ಅವರ ಭಾಷಣದ ವಿಡಿಯೋ ವೈರಲ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ.

ಈ ಬಗ್ಗೆ ಮಾತನಾಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಎಚ್​ಡಿಕೆ ಮೇಲೆ ಬಹಳ ನಿರೀಕ್ಷೆ ಇಟ್ಟು ಮತ ಹಾಕಿರಬಹುದು. ಜನರು ನಮ್ಮಲ್ಲಿ‌ ಏನು ತಪ್ಪು‌ ಕಂಡು ಹಿಡಿದಿದ್ದಾರೋ ಗೊತ್ತಿಲ್ಲ. ಮಂಡ್ಯದಲ್ಲಿ ಒನ್ ಸೈಡ್ ಚುನಾವಣೆ ಆಗಿದೆ ಎಂದು ಹೇಳಿದ್ದಾರೆ.

ಇನ್ನು ವಿಧಾನಸಭೆ ಚುನಾವಣೆ ಬಳಿಕ ಜಾರಿಗೊಂಡಿರುವ ಗ್ಯಾರಂಟಿ ಯೋಜನೆಗಳು ಮುಂದುರಿಯಲಿವೆ ಎಂದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ತೆಗೆದುಕೊಳ್ಳುವುದು ಪಕ್ಷಕ್ಕೆ ಬಿಟ್ಟಿದ್ದು. ನಮ್ಮ ಪಕ್ಷ ರಾಜೀನಾಮೆ ಕೇಳಿದ್ರೆ ಕೊಡ್ತೀನಿ. ಖಂಡಿತಾ ಮಂಡ್ಯ ಕ್ಷೇತ್ರದ ಸೋಲಿನಿಂದ ನನಗೆ ಮುಜುಗರ ಆಗಿದೆ. ನಾನು ಸದಾ ಇಲ್ಲೇ ಇರುತ್ತಿದ್ದೆ, ಹೀಗಿರುವಾಗ ಮುಜುಗರ ಆಗುತ್ತದೆ. ಜೆಡಿಎಸ್ ಕಾರ್ಯಕರ್ತರು ನನ್ನ ಹೇಳಿಕೆ ವೈರಲ್ ಮಾಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಒಳ್ಳೆಯದಾಗಲಿ ಎಂದಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ