CrimeNEWSನಮ್ಮಜಿಲ್ಲೆವಿಡಿಯೋ

BMTC ಬಸ್‌ನಲ್ಲಿ ಕಿಟಕಿ ವಿಚಾರ: ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳಾ ಮಣಿಗಳಿಬ್ಬರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಫ್ರೀಯಾಗಿ ಸರ್ಕಾರಿ ಬಸ್‌ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಮಾಡಿಕೊಟ್ಟ ಬಳಿಕ ಮಹಿಳೆ ಮಹಿಳೆಯರ ನಡುವೆ ಗಲಾಟೆ, ಹೊಡೆದಾಟಗಳು ಹೆಚ್ಚಾಗಿವೆ.

ಈ ಗಲಾಟೆಗಳು ಈಗ ಒಂದು ಹಂತ ಮೇಲಕ್ಕೆ ಹೋಗಿದ್ದು, ಚಪ್ಪಲಿಯಿಂದ ಹೊಡೆದಾಡಿಕೊಳ್ಳುವ ಮಟ್ಟವನ್ನು ತಲುಪಿದೆ. ಆದರೂ ಇಂಥವರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸುವುದಕ್ಕೆ ಸರ್ಕಾರವಾಗಲಿ ಅಥವಾ ಸಾರಿಗೆ ಅಧಿಕಾರಿಗಳಾಗಲಿ ಮುಂದೆ ಬಾರದಿರುವುದು ಇತರ ಪ್ರಯಾಣಿಕರಲ್ಲಿ ಕೀಳು ಭಾವನೆಗೆ ಕಾರಣವಾಗಿದೆ.

ಹೌದು! ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ʼಶಕ್ತಿʼ ಯೋಜನೆಯಿಂದ ರಾಜ್ಯದಾದ್ಯಂತ ಸಂಚರಿಸುತ್ತಿರುವ ಬಸ್‌ಗಳು ಪ್ರತಿದಿನ ಫುಲ್‌ ರಷ್‌ ಆಗಿರುತ್ತವೆ. ಕರ್ನಾಟಕದ ಯಾವುದೇ ಬಸ್‌ಸ್ಟ್ಯಾಂಡ್‌ ನೋಡಿ ನಾರಿಮಣಿಗಳಿಂದ ತುಂಬಿ ತುಳುಕುತ್ತಿರುತ್ತವೆ. ಇನ್ನು ಸೀಟು ಹಿಡಿಯಲು ಅನೇಕರು ಪ್ರಾಣ ಕಳೆದುಕೊಂಡಿದ್ದು ಇದೆ. ಈ ನಡುವೆ ಬಸ್‌ನಲ್ಲಿ ಸೀಟು ಹಿಡಿಯಲು ಜನರ ನಡವೆ ಫೈಟ್‌ ನಡೆಯುತ್ತಲೇ ಇದೆ.

ಬಹುತೇಕ ಘಟನೆಗಳಲ್ಲಿ ಬಸ್‌ನ ಸೀಟಿಗಾಗಿ ಹೆಣ್ಣುಮಕ್ಕಳೇ ಜಗಳವಾಡುವುದು, ಹೊಡೆದಾಡುವುದು ಮಾಡಿಕೊಂಡಿದ್ದಾರೆ. ಅದೇ ರೀತಿಯ ಮತ್ತೊಂದು ಘಟನೆ ಇದೀಗ ನಡೆದಿದೆ. ಫ್ರೀ ಪ್ರಯಾಣದ ಎಫೆಕ್ಟ್‌ನಿಂದ ರಾಜ್ಯದಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಫುಲ್‌ ರಷ್‌ ಆಗಿರುತ್ತವೆ. ಇದರ ಜತೆಗೆ ಬಸ್‌ ಹತ್ತುವ ಬಹುತೇಕ ಮಹಿಳೆಯರಿಗೆ ಕಿಟಕಿ ಸೈಡ್‌ ಸೀಟ್‌ನಲ್ಲೇ ಕುಳಿತುಕೊಳ್ಳಬೇಕು ಎಂಬ ಹಠ. ಈ ಹಠದಿಂದಲ್ಲೇ ನಿನ್ನೆ ಮಹಿಳೆಯರ ನಡುವೆ ದೊಡ್ಡ ಫೈಟ್‌ ನಡೆದಿದೆ.

ರಾಜ್ಯ ಸರ್ಕಾರದ ಉಚಿತ ಬಸ್ ಯೋಜನೆಯಿಂದ ಅನುಕೂಲ ಎಷ್ಟಿದೆಯೋ ಅಷ್ಟೇ ಅನಾನುಕೂಲಗಳಾಗುತ್ತಿವೆ. ತುಂಬಿ ತುಳುಕುತ್ತಿರುವ ಬಸ್‌ನಲ್ಲಿ ಕಿಟಕಿ ಓಪನ್ ಮಾಡೋ‌ ವಿಚಾರಕ್ಕೆ ಚಪ್ಪಲಿಯಿಂದ ಯುವತಿಯರಿಬ್ಬರು ಹೊಡೆದಾಡಿದ್ದಾರೆ.

ಬೆಂಗಳೂರಿನ ರಾಜಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಳ್ಳುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಮೆಜೆಸ್ಟಿಕ್ ಟು ಪೀಣ್ಯಾ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಮೆಜೆಸ್ಟಿಕ್‌ನಿಂದ‌ ಪೀಣ್ಯಾ ಕಡೆ ಈ ಬಸ್ ಸಂಚರಿಸುತ್ತಿತ್ತು. ಈ ವೇಳೆ ಈ ಬಸ್‌ನಲ್ಲಿ ಕಿಟಕಿ ತೆಗೆಯೋ ವಿಚಾರಕ್ಕೆ ಇಬ್ಬರು ಯುವತಿಯರ ನಡುವೆ ಕಿರಿಕ್ ಆಗಿದೆ. ಅದು ಮಾತಿಗೆ ಮಾತು ಬೆಳೆದು ಚಪ್ಪಲಿ, ಶೂನಿಂದ ಪರಸ್ಪರ ಆ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಜನರು ಫ್ರೀ ಬಸ್‌ ಎಫೆಕ್ಟ್‌ ಬಗ್ಗೆ ಪರ-ವಿರೋಧವಾಗಿ ವ್ಯಾಪಕ ಚರ್ಚೆ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...