CrimeNEWSನಮ್ಮಜಿಲ್ಲೆವಿಡಿಯೋ

BMTC ಬಸ್‌ನಲ್ಲಿ ಕಿಟಕಿ ವಿಚಾರ: ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳಾ ಮಣಿಗಳಿಬ್ಬರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಫ್ರೀಯಾಗಿ ಸರ್ಕಾರಿ ಬಸ್‌ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಮಾಡಿಕೊಟ್ಟ ಬಳಿಕ ಮಹಿಳೆ ಮಹಿಳೆಯರ ನಡುವೆ ಗಲಾಟೆ, ಹೊಡೆದಾಟಗಳು ಹೆಚ್ಚಾಗಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಗಲಾಟೆಗಳು ಈಗ ಒಂದು ಹಂತ ಮೇಲಕ್ಕೆ ಹೋಗಿದ್ದು, ಚಪ್ಪಲಿಯಿಂದ ಹೊಡೆದಾಡಿಕೊಳ್ಳುವ ಮಟ್ಟವನ್ನು ತಲುಪಿದೆ. ಆದರೂ ಇಂಥವರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸುವುದಕ್ಕೆ ಸರ್ಕಾರವಾಗಲಿ ಅಥವಾ ಸಾರಿಗೆ ಅಧಿಕಾರಿಗಳಾಗಲಿ ಮುಂದೆ ಬಾರದಿರುವುದು ಇತರ ಪ್ರಯಾಣಿಕರಲ್ಲಿ ಕೀಳು ಭಾವನೆಗೆ ಕಾರಣವಾಗಿದೆ.

ಹೌದು! ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ʼಶಕ್ತಿʼ ಯೋಜನೆಯಿಂದ ರಾಜ್ಯದಾದ್ಯಂತ ಸಂಚರಿಸುತ್ತಿರುವ ಬಸ್‌ಗಳು ಪ್ರತಿದಿನ ಫುಲ್‌ ರಷ್‌ ಆಗಿರುತ್ತವೆ. ಕರ್ನಾಟಕದ ಯಾವುದೇ ಬಸ್‌ಸ್ಟ್ಯಾಂಡ್‌ ನೋಡಿ ನಾರಿಮಣಿಗಳಿಂದ ತುಂಬಿ ತುಳುಕುತ್ತಿರುತ್ತವೆ. ಇನ್ನು ಸೀಟು ಹಿಡಿಯಲು ಅನೇಕರು ಪ್ರಾಣ ಕಳೆದುಕೊಂಡಿದ್ದು ಇದೆ. ಈ ನಡುವೆ ಬಸ್‌ನಲ್ಲಿ ಸೀಟು ಹಿಡಿಯಲು ಜನರ ನಡವೆ ಫೈಟ್‌ ನಡೆಯುತ್ತಲೇ ಇದೆ.

ಬಹುತೇಕ ಘಟನೆಗಳಲ್ಲಿ ಬಸ್‌ನ ಸೀಟಿಗಾಗಿ ಹೆಣ್ಣುಮಕ್ಕಳೇ ಜಗಳವಾಡುವುದು, ಹೊಡೆದಾಡುವುದು ಮಾಡಿಕೊಂಡಿದ್ದಾರೆ. ಅದೇ ರೀತಿಯ ಮತ್ತೊಂದು ಘಟನೆ ಇದೀಗ ನಡೆದಿದೆ. ಫ್ರೀ ಪ್ರಯಾಣದ ಎಫೆಕ್ಟ್‌ನಿಂದ ರಾಜ್ಯದಲ್ಲಿ ಸಂಚರಿಸುವ ಎಲ್ಲ ಬಸ್‌ಗಳು ಫುಲ್‌ ರಷ್‌ ಆಗಿರುತ್ತವೆ. ಇದರ ಜತೆಗೆ ಬಸ್‌ ಹತ್ತುವ ಬಹುತೇಕ ಮಹಿಳೆಯರಿಗೆ ಕಿಟಕಿ ಸೈಡ್‌ ಸೀಟ್‌ನಲ್ಲೇ ಕುಳಿತುಕೊಳ್ಳಬೇಕು ಎಂಬ ಹಠ. ಈ ಹಠದಿಂದಲ್ಲೇ ನಿನ್ನೆ ಮಹಿಳೆಯರ ನಡುವೆ ದೊಡ್ಡ ಫೈಟ್‌ ನಡೆದಿದೆ.

ರಾಜ್ಯ ಸರ್ಕಾರದ ಉಚಿತ ಬಸ್ ಯೋಜನೆಯಿಂದ ಅನುಕೂಲ ಎಷ್ಟಿದೆಯೋ ಅಷ್ಟೇ ಅನಾನುಕೂಲಗಳಾಗುತ್ತಿವೆ. ತುಂಬಿ ತುಳುಕುತ್ತಿರುವ ಬಸ್‌ನಲ್ಲಿ ಕಿಟಕಿ ಓಪನ್ ಮಾಡೋ‌ ವಿಚಾರಕ್ಕೆ ಚಪ್ಪಲಿಯಿಂದ ಯುವತಿಯರಿಬ್ಬರು ಹೊಡೆದಾಡಿದ್ದಾರೆ.

ಬೆಂಗಳೂರಿನ ರಾಜಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಳ್ಳುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಮೆಜೆಸ್ಟಿಕ್ ಟು ಪೀಣ್ಯಾ ಬಸ್‌ನಲ್ಲಿ ಈ ಘಟನೆ ನಡೆದಿದೆ.

ಮೆಜೆಸ್ಟಿಕ್‌ನಿಂದ‌ ಪೀಣ್ಯಾ ಕಡೆ ಈ ಬಸ್ ಸಂಚರಿಸುತ್ತಿತ್ತು. ಈ ವೇಳೆ ಈ ಬಸ್‌ನಲ್ಲಿ ಕಿಟಕಿ ತೆಗೆಯೋ ವಿಚಾರಕ್ಕೆ ಇಬ್ಬರು ಯುವತಿಯರ ನಡುವೆ ಕಿರಿಕ್ ಆಗಿದೆ. ಅದು ಮಾತಿಗೆ ಮಾತು ಬೆಳೆದು ಚಪ್ಪಲಿ, ಶೂನಿಂದ ಪರಸ್ಪರ ಆ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಜನರು ಫ್ರೀ ಬಸ್‌ ಎಫೆಕ್ಟ್‌ ಬಗ್ಗೆ ಪರ-ವಿರೋಧವಾಗಿ ವ್ಯಾಪಕ ಚರ್ಚೆ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ