CrimeNEWSನಮ್ಮಜಿಲ್ಲೆ

ಜಮೀನಿನ ಪೈಪ್​ಲೈನ್​ ತೆರವು ಸಂಬಂಧ ಮಹಿಳೆಯ ಬೆತ್ತಲೆಗೊಳಿಸಿ 20 ಜನರಿಂದ ಹಲ್ಲೆ: ಎಫ್‌ಐಆರ್‌ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಮಗ ಮಾಡಿದ ತಪ್ಪಿಗೆ ತಾಯಿಯನ್ನು ಬೆತ್ತಲೆಗೊಳಿಸಿದ್ದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಪೈಪ್​ಲೈನ್​ ತೆರವು ಸಂಬಂಧ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ 20 ಜನರಿದ್ದ ಗುಂಪು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗ್ರಾಮವೊಂದರ ಮಹಿಳೆ ತನ್ನ ಜಮೀನಿನಲ್ಲಿ ಹಾದು ಹೋಗಿದ್ದ ಪೈಪ್ ಲೈನ್ ತೆರವು ಮಾಡುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿ ಸದಸ್ಯರಿಗೆ ಮನವಿ ಮಾಡಿದ್ದರು. ಪೈಪ್​ ಲೈನ್​ ತೆರವು ಮಾಡದೇ ಒಂಟಿಯಾಗಿರುವ ಮಹಿಳೆಯನ್ನು ಟಾರ್ಗೆಟ್ ಮಾಡಿ ಆಗಾಗ ಕ್ಯಾತೆ ತೆಗೆಯುತ್ತಿದ್ದರು. ಕಳೆದ 10 ದಿನಗಳ ಹಿಂದೆ ಈ ಬಗ್ಗೆ ಕೇಳಲು ಹೋದಾಗ ಮಹಿಳೆಯನ್ನು ಬೆತ್ತಲೆಗೊಳಿಸಿ ಪಂಚಾಯತಿ ಅಧ್ಯಕ್ಷ ಸೇರಿ ಇತರೆ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಈ ಸಂಬಂಧ ನ್ಯಾಯ ಕೇಳಿ ಬೈಲಹೊಂಗಲದ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಪೊಲೀಸರು ಕೇಸ್​ ದಾಖಲಿಸಿಕೊಂಡಿಲ್ಲ. ಹೀಗಾಗಿ ಸಂತ್ರಸ್ತ ಮಹಿಳೆ ಬೆಳಗಾವಿಯ ಎಸ್​ಪಿ ಕಚೇರಿಗೆ ತೆರಳಿ ಭೀಮಾಶಂಕರ್ ಗುಳೇದ್​​ರನ್ನು ಭೇಟಿ ಮಾಡಿದ್ದಾರೆ. ಅಧಿಕಾರಿ ಬಳಿ ತನ್ನ ಮೇಲೆ ಆದ ದೌರ್ಜನ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಎಸ್​ಪಿ ಸೂಚನೆ ಮೇರೆಗೆ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿ 20 ಜನರ ಮೇಲೆ ಐಪಿಸಿ 1860ರ ಅಡಿ 143, 147, 354 (a), 354 (b), 323, 324, 384, 201, 427, 342, 307, 504, 505, 149 ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ