CrimeNEWSನಮ್ಮಜಿಲ್ಲೆ

ಜಮೀನಿನ ಪೈಪ್​ಲೈನ್​ ತೆರವು ಸಂಬಂಧ ಮಹಿಳೆಯ ಬೆತ್ತಲೆಗೊಳಿಸಿ 20 ಜನರಿಂದ ಹಲ್ಲೆ: ಎಫ್‌ಐಆರ್‌ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಮಗ ಮಾಡಿದ ತಪ್ಪಿಗೆ ತಾಯಿಯನ್ನು ಬೆತ್ತಲೆಗೊಳಿಸಿದ್ದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಪೈಪ್​ಲೈನ್​ ತೆರವು ಸಂಬಂಧ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ 20 ಜನರಿದ್ದ ಗುಂಪು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗ್ರಾಮವೊಂದರ ಮಹಿಳೆ ತನ್ನ ಜಮೀನಿನಲ್ಲಿ ಹಾದು ಹೋಗಿದ್ದ ಪೈಪ್ ಲೈನ್ ತೆರವು ಮಾಡುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿ ಸದಸ್ಯರಿಗೆ ಮನವಿ ಮಾಡಿದ್ದರು. ಪೈಪ್​ ಲೈನ್​ ತೆರವು ಮಾಡದೇ ಒಂಟಿಯಾಗಿರುವ ಮಹಿಳೆಯನ್ನು ಟಾರ್ಗೆಟ್ ಮಾಡಿ ಆಗಾಗ ಕ್ಯಾತೆ ತೆಗೆಯುತ್ತಿದ್ದರು. ಕಳೆದ 10 ದಿನಗಳ ಹಿಂದೆ ಈ ಬಗ್ಗೆ ಕೇಳಲು ಹೋದಾಗ ಮಹಿಳೆಯನ್ನು ಬೆತ್ತಲೆಗೊಳಿಸಿ ಪಂಚಾಯತಿ ಅಧ್ಯಕ್ಷ ಸೇರಿ ಇತರೆ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಈ ಸಂಬಂಧ ನ್ಯಾಯ ಕೇಳಿ ಬೈಲಹೊಂಗಲದ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಪೊಲೀಸರು ಕೇಸ್​ ದಾಖಲಿಸಿಕೊಂಡಿಲ್ಲ. ಹೀಗಾಗಿ ಸಂತ್ರಸ್ತ ಮಹಿಳೆ ಬೆಳಗಾವಿಯ ಎಸ್​ಪಿ ಕಚೇರಿಗೆ ತೆರಳಿ ಭೀಮಾಶಂಕರ್ ಗುಳೇದ್​​ರನ್ನು ಭೇಟಿ ಮಾಡಿದ್ದಾರೆ. ಅಧಿಕಾರಿ ಬಳಿ ತನ್ನ ಮೇಲೆ ಆದ ದೌರ್ಜನ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಎಸ್​ಪಿ ಸೂಚನೆ ಮೇರೆಗೆ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿ 20 ಜನರ ಮೇಲೆ ಐಪಿಸಿ 1860ರ ಅಡಿ 143, 147, 354 (a), 354 (b), 323, 324, 384, 201, 427, 342, 307, 504, 505, 149 ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ