ಬೆಂಗಳೂರು: ಬಿಹಾರದ ಹಿಂದಿ ಮಹಿಳೆಯೊಬ್ಬರು ಆಟೋ ಚಾಲಕನ ಮೇಲೆ ಚಪ್ಪಲಿಯಿಂದ ಹೊಡೆದ ಘಟನೆಯಿಂದ ಆಕ್ರೋಶ ಹೆಚ್ಚಾಗಿ, ಪೊಲೀಸ್ ಪ್ರಕರಣ ದಾಖಲಾಗುತ್ತಿದ್ದಂತೆ ಮಹಿಳೆ ಮತ್ತು ಆಕೆಯ ಪತಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾರೆ.
ದಂಪತಿಗಳು ಆಟೋ ಚಾಲಕನಲ್ಲಿ ಕ್ಷಮೆಯಾಚಿಸಿ, “ಎಲ್ಲಾ ಕನ್ನಡಿಗರೇ, ದಯವಿಟ್ಟು ನಮ್ಮನ್ನು ಕ್ಷಮಿಸಿ. ನಮಗೆ ಆಟೋ ಚಾಲಕರ ಮೇಲೆ ಗೌರವವಿದೆ. ನಾವು ಬೆಂಗಳೂರನ್ನು ತುಂಬಾ ಪ್ರೀತಿಸುತ್ತೇವೆ. ಇಲ್ಲಿನ ವಾತಾವರಣ ನಮಗೆ ತುಂಬಾ ಇಷ್ಟ ಎಂದು ಹೇಳಿಕೊಂಡಿದ್ದಾರೆ.
ನಾವು ಹೊರಡುವಾಗ ಏನೋ ಆಯಿತು. ನಾನು ಬೇಕಲು ಬೇಕು ಎಂದು ಹಾಗೆ ಮಾಡಲಿಲ್ಲ, ಕ್ಷಮಿಸಿ. ನಾನು ಗರ್ಭಿಣಿ. ಗರ್ಭಪಾತವಾಗುವ ಭಯದಿಂದ ನಾನು ಹೀಗೆ ಮಾತನಾಡಿದೆ. ನನಗೆ ಬೆಂಗಳೂರು ತುಂಬಾ ಇಷ್ಟ. ನನಗೆ ಬೆಂಗಳೂರು ಮತ್ತು ಬೆಂಗಳೂರು ಸಂಸ್ಕೃತಿಯ ಬಗ್ಗೆ ತುಂಬಾ ಗೌರವ ಮತ್ತು ಪ್ರೀತಿ ಇದೆ ಎಂದು ಆ ಮಹಿಳೆ ಕ್ಷೆಮೆಯಾಚಿವ ಜತೆಗೆ ಹೇಳಿಕೊಂಡಿದ್ದಾಳೆ.
“ನಾವು ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ಇದ್ದೇವೆ. ನಮಗೆ ಮನೆಯಷ್ಟೇ ಇಷ್ಟ. ಬೆಂಗಳೂರಿನ ಬಗ್ಗೆ ನಮಗೆ ಯಾವುದೇ ನಕಾರಾತ್ಮಕ ಅಭಿಪ್ರಾಯಗಳಿಲ್ಲ. ನಾವು ಆಟೋ ಚಾಲಕರನ್ನು ಗೌರವಿಸುತ್ತೇವೆ” ಎಂದು ಮಹಿಳೆಯ ಪತಿ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಮಹಿಳೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಭಾನುವಾರ ಪೊಲೀಸರು ಮಹಿಳೆಯನ್ನು ಕರೆಸಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಮಹಿಳೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಬೆಳ್ಳಂದೂರು ಬಳಿ ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದ ನನ್ನ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿ ಹೊಡೆದಿದೆ. ಈ ವೇಳೆ ನಾನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.
ಹೀಗಾಗಿ ಘಟನೆ ಸಮಯದಲ್ಲಿ ಕೋಪಗೊಂಡು ಚಪ್ಪಲಿಯಿಂದ ಹಲ್ಲೆ ನಡೆಸಿರುವುದಾಗಿ ಮಹಿಳೆ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾಳೆ. ಪೊಲೀಸರು ಮಹಿಳೆಯ ಹೇಳಿಕೆ ದಾಖಲಿಸಿಕೊಂಡು ವಾಪಸ್ ಕಳುಹಿಸಿದ್ದರು.
ಆ ಬಳಿಕ ಆಟೋ ಚಾಲಕನ ಬಳಿಗೆ ಹೋಗಿ ಕ್ಷೆಮೆ ಕೇಳಿ ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ ಎಂದು ಬೆಡಿಕೊಂಡಿದ್ದಾಳೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...