NEWSದೇಶ-ವಿದೇಶನಮ್ಮರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ: 415ನೇ ಜಂಬೂಸವಾರಿಗೆ ಕ್ಷಣಗಣನೆ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶದಿಂದ ಲಕ್ಷಾಂತರ ಜನರು 415ನೇ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತರಿದಿಂದ ಕಾಯುತ್ತಿದ್ದಾರೆ.

ಇನ್ನು ಕ್ಯಾಪ್ಟನ್ ಅಭಿಮನ್ಯು ಐದನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲು ರೆಡಿಯಾಗಿದ್ದಾನೆ. ಇಂದು ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡ್ಲಿದ್ದಾರೆ.

ಜಂಬೂಸವಾರಿ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಕೊಡಗು ಸಂಸದ ಹಾಗೂ ರಾಜವಂಶಸ್ಥರಾದ ಯದುವೀರ್ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹಾದೇವಪ್ಪ, ಸಾಥ್ ನೀಡಲಿದ್ದಾರೆ.

ಇನ್ನು, ಚಿನ್ನದ ಅಂಬಾರಿ ಹೊತ್ತು ಸಾಗೋ ಕ್ಯಾಪ್ಟನ್ ಅಭಿಮನ್ಯುವಿಗೆ ಲಕ್ಷ್ಮೀ, ಹಿರಣ್ಯ ಕುಮ್ಕಿ ಆನೆಗಳಾಗಿ ಸಾಥ್ ನೀಡಿದರೆ, ಧನಂಜಯ ನಿಶಾನೆ ಆನೆಯಾಗಲಿದ್ದಾನೆ. ಗೋಪಿ ನೌಪತ್ ಆನೆಯಾಗಲಿದ್ದು 9 ಆನೆಗಳು ದಸರಾ ಮೆರವಣಿಗೆಯಲ್ಲಿ ಸಾಗಲಿವೆ.

140ಕ್ಕೂ ಹೆಚ್ಚು ಕಲಾತಂಡ ಹಾಗೂ 51 ಸ್ತಬ್ಧ ಚಿತ್ರ: ವಿವಿಧ ಜಿಲ್ಲೆಗಳ ಕಲಾತಂಡಗಳು, ಕಿಲುಕುದುರೆ, ಗೊರವರ ಕುಣಿತ, ಡೊಳ್ಳು ಕುಣಿತ, ಯಕ್ಷಗಾನ, ಕೀಲುಗೊಂಬೆ, ಮರಗಾಲು, ವೀರಗಾಸೆ, ಹಾಡಿ ಮಕ್ಕಳ ಕುಣಿತ ಸೇರಿ 140ಕ್ಕೂ ಹೆಚ್ಚು ಕಲಾ ತಂಡಗಳು ಹಾಗೂ 51 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ.

ಇನ್ನು, ಜಂಬೂ ಸವಾರಿ ನಿಮಿತ್ತ ನಗರದಾದ್ಯಂತ ಬಿಗಿ ಪೊಲೀಸ್ ಬದೋಬಸ್ತ್‌ ಮಾಡಲಾಗಿದ್ದು ಅರಮನೆ ಸುತ್ತಮುತ್ತ ಹಾಗೂ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಹದ್ದಿನ ಕಣ್ಣಿಡಲಾಗಿದೆ. ನವರರಾತ್ರಿ ಕಳೆದಿದ್ದು ಇನ್ನೇನಿದ್ದರು ಐತಿಹಾಸಿಕ 415ನೇ ಜಂಬೂ ಸವಾರಿಯ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಂಡರೆ ಪೂರ್ಣವಾಗಲಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್