NEWSನಮ್ಮಜಿಲ್ಲೆಮೈಸೂರು

ವೈ.ರಾಮಕೃಷ್ಣರ ಸೇವೆ-ಹೋರಾಟ ಇಂದಿಗೂ ಸ್ಮರಣೀಯ: ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ವೈ.ರಾಮಕೃಷ್ಣ ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.

ಇಂದು ಡಾ. ಬಾಬೂ ಜಗಜೀವನರಾಮ್ ಅಧ್ಯಯನ, ಸಂಶೋಧನ ಮತ್ತು ವಿಸ್ತೀರ್ಣ ಕೇಂದ್ರ, ಮಾನಸಗಂಗೋತ್ರಿ ಮೈಸೂರು ಇವರ ವತಿಯಿಂದ ಇಂದು ರಾಣಿ ಬಹಾದ್ದೂರ್ ಸಭಾಂಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ವೈ. ರಾಮಕೃಷ್ಣ ಅವರ ಸಾಧನೆ ( ಬದುಕು, ಸಂಘಟನೆ ಮತ್ತು ರಾಜಕಾರಣ) ಎಂಬ ವಿಷಯ ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಇವರು ವಿಧಾನ ಸಭೆಯಲ್ಲಿ ಮಾತನಾಡುವಂತಹ ಶೈಲಿಯೇ ಆಕರ್ಷಣೆಯಾಗಿತ್ತು ರಾಜಕೀಯ ಪಕ್ಷಗಳು ಇವರನ್ನು ನಾಯಕನಾಗಿ ಮಾಡಿಕೊಳ್ಳಬೇಕೆಂದು ಪ್ರೋತ್ಸಾಹ ನೀಡುತ್ತಿದ್ದರು. ಇವರ ನಡವಳಿಕೆ, ಭಾಷಣಗಳು, ಕಮಿಟ್ ಮೆಂಟ್‌ಗಳು ಇವರನ್ನು ಇಲ್ಲಿಯವರೆಗೂ ಕರೆತಂದಿತು. ಇವರು ಯಾರ ಜತೆ ಇದ್ದರೂ ರಾಯಲ್ ಆಗಿ ಸಿನ್ಸಿಯರ್ ಆಗಿ ಇರುತ್ತಿದ್ದರು ಎಂದು ಹೇಳಿದರು.

ಇವರು ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದರು. ಸಾಮಾಜಿಕ ಸುಧಾರಣೆಗಾಗಿ, ಸಮಾಜದಲ್ಲಿ ಸುಧಾರಣೆ ತರಬೇಕೆಂದು ಹೋರಾಡಿದವರು ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ಶ್ರಮಿಸಿದವರು ರಾಮಕೃಷ್ಣ ಅವರು ಎಂದು ತಿಳಿಸಿದರು.

ಇವರು ವಿಧಾನ ಸೌಧದಲ್ಲಿ ನಿಂತು ಮಾತನಾಡುತ್ತಿದ್ದರೆ ರಾಮಕೃಷ್ಣ ಎಂದು ಕಾಣುತ್ತಿರಲಿಲ್ಲ ರಾಮಕೃಷ್ಣ ರಾವ್ ಎಂದು ಕಾಣುತ್ತಿದ್ದರು. ಇವರು ವಿಧಾನ ಸೌಧದಲ್ಲಿ ಮಾಡಿದಂತಹ ಹೆಸರು ಬೇರೆ ಯಾರು ಸಹ ಮಾಡಿಲ್ಲ. ಈ ಸಮಾಜದಲ್ಲಿ ಪ್ರಾಮಾಣಿಕ ರಾಜಕಾರಣಿ ಇದ್ದರು ಎಂದರೆ ಅವರೇ ರಾಮಕೃಷ್ಣ ಅವರು ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಎನ್. ಕೆ.ಲೋಕನಾಥ್ ಮಾತನಾಡಿ ವೈ.ರಾಮಕೃಷ್ಣ ಅವರು ಸಮಾಜದಲ್ಲಿ ಏನೆಲ್ಲ ಸುಧಾರಣೆ ಮಾಡಿದ್ದರೆ ಎಂಬುದನೆಲ್ಲ ನಾವು ಸ್ಮರಿಸಬೇಕು. ಅವರು ಮಾಡಿರುವಂತಹ ಕೆಲಸದ ಮೇಲೆ ಗೌರವವನ್ನು ಇಡಬೇಕು. ಅವರು ನಡೆದುಬಂದಂತಹ ಆದಿಯಲ್ಲಿ ನಾವು ನಡೆಯಬೇಕು. ಅವರು ಹೇಳಿರುವಂತಹ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಮಾಜಿ ಸಚಿವರಾದ ಸೋಮಶೇಖರ್, ಸಿ.ಎಂ ಇಬ್ರಾಹಿಂ, ಕೋಟೆ ಎಂ.ಶಿವಣ್ಣ, ವಿಶ್ವನಾಥ್, ಕೆ.ಪಿ.ಸಿ.ಸಿ..ಎಸ್.ಸಿ. ರಾಜ್ಯ ಘಟಕದ ಅಧ್ಯಕ್ಷರಾದ ಆರ್.ಧರ್ಮಸೇನಾ, ಮಾತಾಂಗ ಫೌಂಡೇಶನ್ ನ ಅಧ್ಯಕ್ಷರಾದ ಆರ್.ಲೋಕೇಶ್,ಖಜಾಂಚಿ ಆರ್.ಟಿ.ಒ.ವೆಂಕಟೇಶ್, ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಕೆ.ಸದಾಶಿವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!