NEWSನಮ್ಮಜಿಲ್ಲೆ

ಯಾದಗಿರಿ: ಮೀನು ಸಾಕಾಣಿಕೆ ಮಾಡಲು ಕೆರೆಗಳಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ಗಂಗಾಮಾತೆ ಮೀನುಗಾರರ ಸಹಕಾರ ಸಂಘ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಯಾದಗಿರಿ ಜಿಲ್ಲೆಯ ಯರಗೋಳದೊಡ್ಡ ಕೆರೆ, ದುಪ್ಪಳ್ಳಿ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡುವ ಸಂಬಂಧ ಎರಡು ಸಂಘಗಳ ನಡುವೆ ಉಂಟಾಗಿರುವ ಶೀತಲ ಸಮರ ಮತ್ತು ಅಧಿಕಾರಿಗಳ ನಡೆಯನ್ನು ಪ್ರಶ್ನಿಸಿ ಒಂದು ಸಂಘಟನೆಯ ಪದಾಧಿಕಾರಿಗಳು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಸಂಚಾರಿ ನ್ಯಾಯ ಪೀಠದ ಮೆಟ್ಟಿಲೇರಿದ್ದಾರೆ.

ಗಂಗಾಮಾತೆ ಮೀನುಗಾರರ ಸಹಕಾರ ಸಂಘದ ಮುಖ್ಯ ಪ್ರವರ್ತಕ ಸಹೇಬ್‌ ಗೌಡ ಸೇರಿ 28 ಜನರು ಕಲಬುರಗಿ ಹೈಕೋರ್ಟ್ ಸಂಚಾರಿ ನ್ಯಾಯ ಪೀಠದ ಮೆಟ್ಟಿಲೇರಿದ್ದು, ಇವರ ಪರ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ವಕಾಲತ್ತು ವಹಿಸಿದ್ದಾರೆ.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಸದ್ಯ ಕಲಬುರಗಿ ಹೈಕೋರ್ಟ್ ಸಂಚಾರಿ ನ್ಯಾಯ ಪೀಠದ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಇಂದು (ಜ.12) ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಗೊಂಡ ವೇಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಕೀಲ ಶಿವರಾಜು ಅವರು ವಾದ ಮಂಡಿಸಿದರು.

ವಾದವನ್ನು ಆಲಿಸಿದ ಬಳಿಕ ಸಂಚಾರಿ ನ್ಯಾಯ ಪೀಠವು, ಪ್ರಮುಖವಾಗಿ ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘದ ಪದಾಧಿಕಾರಿಗಳು ಮತ್ತು ಮೀನುಗಾರಿಕಾ ಇಲಾಖೆ ನಿರ್ದೇಶಕರು, ಉಪ ನಿರ್ದೇಶಕರು, ಜಂಟಿ ನಿರ್ದೇಶಕರು ಮತ್ತು ಯಾದಗಿರಿ ಜಿಲ್ಲಾ ಪಂಚಾಯಿತಿಯ ಮೀನುಗಾರಿಕೆ ವಿಭಾಗದ ಅಧಿಕಾರಿಗಳು ಸೇರಿ ಒಟ್ಟು 8 ಅಧಿಕಾರಿಗಳಿಗೆ ನೋಟಿಸ್‌ ಜಾರಿಮಾಡಿ ವಿಚಾರಣೆಯನ್ನು ಮುಂದೂಡಿದೆ.

ಸಹೇಬ್‌ಗೌಡ

ಏನಿದು ಪ್ರಕರಣ: ಯಾದಗಿರಿ ಜಿಲ್ಲೆಯಲ್ಲಿರುವ ಯರಗೋಳದೊಡ್ಡ ಕೆರೆ, ದುಪ್ಪಳ್ಳಿ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡುವ ಸಂಬಂಧ ಗಂಗಾಮಾತೆ ಮೀನುಗಾರರ ಸಹಕಾರ ಸಂಘ ಮತ್ತು ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘದ ನಡುವೆ ಪೈಪೂಟಿ ಉಂಟಾಗಿದೆ.

ಈ ನಡುವೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಸದ್ಯ ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘಕ್ಕೆ ಯರಗೋಳದೊಡ್ಡ ಕೆರೆ, ದುಪ್ಪಳ್ಳಿ ಕೆರೆಗಳನ್ನು ಮೀನು ಸಾಕಾಣಿಕೆ ಮಾಡಲು ಗುತ್ತಿಗೆ ನೀಡಿದ್ದಾರೆ. ಆದರೆ ಇದು ಕಾನೂನು ಬಾಹಿರವಾಗಿದ್ದು, ಈ ಕೆರೆಗಳನ್ನು ನಮಗೆ ಗುತ್ತಿಗೆಗೆ ನೀಡಬೇಕು ಎಂದು ಗಂಗಾಮಾತೆ ಮೀನುಗಾರರ ಸಹಕಾರ ಸಂಘದ ಪದಾಧಿಕಾರಿಗಳು ಕೇಳುತ್ತಿದ್ದಾರೆ.

ಇನ್ನು ಈ ಎರಡು ಸಂಘಗಳು ಒಂದೆ ಎಂಬುದಾಗಿ ತಿಳಿದು ಅಧಿಕಾರಿಗಳು ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘಕ್ಕೆ ಕೆರೆಗಳನ್ನು ಗುತ್ತಿಗೆಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇವೆರಡು ಒಂದೇ ಅಲ್ಲ ಹಾಗಾಗಿ ಇದನ್ನು ಬದಲಾಯಿಸಿ ನಮಗೆ ನೀಡಬೇಕು ಎಂದು ಗಂಗಾಮಾತೆ ಮೀನುಗಾರರ ಸಹಕಾರ ಸಂಘದ ಪದಾಧಿಕಾರಿಗಳು ಅಧಿಕಾರಿಗಳನ್ನು ಕೇಳಿದ್ದಾರೆ.

ಆದರೆ ಅಧಿಕಾರಿಗಳು ಇದಕ್ಕೆ ಒಪ್ಪದ ಕಾರಣ ಗಂಗಾಮಾತೆ ಮೀನುಗಾರರ ಸಹಕಾರ ಸಂಘದ ಮುಖ್ಯ ಪ್ರವರ್ತಕ ಸಹೇಬ್‌ ಗೌಡ ಸೇರಿ 28 ಜನರು ಕಲಬುರಗಿ ಹೈಕೋರ್ಟ್ ಸಂಚಾರಿ ನ್ಯಾಯ ಪೀಠದ ಮೆಟ್ಟಿಲೇರಿದ್ದಾರೆ. ಇನ್ನು ಈ ಸಂಬಂಧ ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಸಂಚಾರಿ ನ್ಯಾಯ ಪೀಠ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಗಂಗಾಪರಮೇಶ್ವರಿ ಮೀನುಗಾರರ ಸಹಕಾರ ಸಂಘಕ್ಕೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...