NEWSದೇಶ-ವಿದೇಶನಮ್ಮರಾಜ್ಯ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಾ ಯಾತ್ರೆ ಬನ್ನಿ ಮರಕ್ಕೆ ಪೂಜೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ ಅತ್ಯಾಕರ್ಷಕ ಜಂಬೂ ಸವಾರಿ, 415 ನೇ ನಾಡಹಬ್ಬ ದಸರಾ ಮೆರವಣಿಗೆ ಇಂದು ವೈಭವಯುತವಾಗಿ ನಡೆಯಲಿದೆ.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮೆರವಣಿಗೆಗೆ ಕೆಲವೇ ಕೆಲವು ಗಂಟೆಗಳು ಮಾತ್ರ ಉಳಿದಿದ್ದು, 415ನೇ ನಾಡಹಬ್ಬ ದಸರಾ ಮೆರವಣಿಗೆಗೆ ಇಡೀ ಮೈಸೂರು ಸಜ್ಜಾಗಿದೆ. ವಿಶ್ವದ ದೃಷ್ಟಿ ಇಂದು ಮೈಸೂರಿನ ಮೇಲಿದೆ. ಜಂಬೂಸವಾರಿ ಕಣ್ತುಂಬಿಕೊಳ್ಳಲು ಕರುನಾಡು ಕೂಡ ಕಾತರದಿಂದ ಕಾಯುತ್ತಿದೆ.

ಐತಿಹಾಸಿಕ `ದಸರಾ’: ದಸರಾ ಮೆರವಣಿಗೆ ಆರಂಭಕ್ಕೂ ಮುನ್ನ ಮೈಸೂರು ಅರಮನೆಯಲ್ಲಿ (Mysuru Darasa) ಖಾಸಗಿ ದರ್ಬಾರ್ ಭಾಗವಾಗಿ ವಿಜಯಯಾತ್ರೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಅರಮನೆಯ ಕಲ್ಯಾಣ ಮಂಟಪದ ಮುಂಭಾಗ ಜಟ್ಟಿ ಸಮುದಾಯದವರು ಜಟ್ಟಿ ಕಾಳಗ ನಡೆಸಿ ಮಹಾರಾಜರಿಗೆ ತಮ್ಮ ನಿಷ್ಠೆ ಪ್ರದರ್ಶಿಸಲಿದ್ದಾರೆ. ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಾ ಯಾತ್ರೆ ನಡೆಸಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ಮಧ್ಯಾಹ್ನ 1.46ರಿಂದ 2.08ರಲ್ಲಿ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜದ ಪೂಜೆ ನೆರವೇರಲಿದೆ. ನಂತರ ನಾಡಿನ ಕಲೆ ಸಂಸ್ಕೃತಿ, ಪರಂಪರೆಯನ್ನು ಸಾರುವ ಸ್ತಬ್ಧಚಿತ್ರಗಳು, ಕಲಾತಂಡಗಳ ಅದ್ದೂರಿ ಮೆರವಣಿಗೆ ಆರಂಭವಾಗಲಿದೆ. ಸಂಜೆ 4ರಿಂದ 4.30ವರೆಗೆ ಸಲ್ಲುವ ಶುಭ ಕುಂಭ ಮುಹೂರ್ತದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಿದ್ದಾರೆ.

750 ಕೆಜಿ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡಿ ಮೂರ್ತಿಯನ್ನು ಹೊತ್ತ ಅಭಿಮನ್ಯು ಸಾಂಸ್ಕೃತಿಕ ನಗರಿಯ ರಾಜಬೀದಿಯಲ್ಲಿ ಸಾಗಲಿದೆ. ಕ್ಯಾಪ್ಟನ್ ಅಭಿಮನ್ಯುಗೆ 9ಆನೆಗಳು ಸಾಥ್ ನೀಡಲಿವೆ. ಈ ಕ್ಷಣಕ್ಕೆ 5 ಲಕ್ಷಕ್ಕೂ ಹೆಚ್ಚು ಮಂದಿ ಸಾಕ್ಷಿಯಾಗಲಿದ್ದಾರೆ.

ಲಕ್ಷಾಂತರ ಜನ ದಸರಾ ಕಣ್ತುಂಬಿಕೊಳ್ಳಲು ಮೈಸೂರಿಗೆ ಈಗಾಗಲೇ ದೇಶ ವಿದೇಶದಿಂದ ಆಗಮಿಸಿದ್ದು, ರಾಜ್ಯ ಅಂತಾರಾಜ್ಯದಿಂದ ಆಗಮಿಸುತ್ತಿದ್ದಾರೆ. ಬರುವ ಎಲ್ಲರೂ ಸುರಕ್ಷಿತವಾಗಿ ದಸರಾ ನೋಡಬೇಕು ಎಂಬ ನಿಟ್ಟಿನಲ್ಲಿ ಪೊಲೀಸರು ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್