NEWSನಮ್ಮಜಿಲ್ಲೆಶಿಕ್ಷಣ-

ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ : ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತನಾಗಿದ್ದ ಯೋಗೇಶ್‌ ಈಗ ಇತರ ಮಕ್ಕಳಂತೆ ಶಾಲೆಯಲ್ಲಿ ಕಲಿಯುತ್ತಾ, ನಲಿಯುತ್ತಾ ಉಜ್ವಲ ಭವಿಷ್ಯದೆಡೆಗೆ ಹೆಜ್ಜೆ ಹಾಕುತ್ತಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಬಸಾಪುರದ ಯೋಗೇಶ್‌ ಎಂಬ ಬಾಲಕನನ್ನು ಆತನ ತಂದೆ ತಾಯಿ ಒತ್ತಾಯಪೂರ್ವಕವಾಗಿ ಶಾಲೆ ಬಿಡಿಸಿ ಕಳೆದ 2 ವರ್ಷದಿಂದ ಕುರಿ ಮೇಯಿಸಲು ತೊಡಗಿಸಿದ್ದರು.

ಈ ವಿಚಾರವು ಸ್ಥಳೀಯರೊಬ್ಬರಿಂದ ನಮ್ಮ ಗಮನಕ್ಕೆ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಬಾಲಕನ ಮನೆಗೆ ಕಳುಹಿಸಿ, ಆತನ ತಂದೆ ತಾಯಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಿ, ಕೇವಲ 24 ಗಂಟೆಗಳ ಒಳಗೆ ಬಾಲಕನನ್ನು ಶಾಲೆಗೆ ಸೇರ್ಪಡೆ ಮಾಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಬಾಲ್ಯದಲ್ಲಿ ನಾನು ಕೂಡ ಯೋಗೇಶ್‌ ನಂತೆ ಶಾಲೆಯಿಂದ ವಂಚಿತನಾಗಿದ್ದೆ, ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ದಾಖಲಾತಿ ಮಾಡಿ ಶಿಕ್ಷಣ ಸಿಗುವಂತೆ ಮಾಡಿದ್ದರಿಂದ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ ಎಂದು ತನ್ನ ಬಾಲ್ಯವನ್ನು ಮೆಲುಕು ಹಾಕಿದ್ದಾರೆ.

ಮರಳಿ ಶಿಕ್ಷಣದತ್ತ ಮುಖಮಾಡಿರುವ ಈ ಬಾಲಕನ ಭವಿಷ್ಯವೂ ಉಜ್ವಲವಾಗಲಿ ಎಂಬ ಹಾರೈಕೆ ನನ್ನದು. ಇಂತಹ ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ನಿಮಗೂ ಕಂಡು ಬಂದರೆ ನಮ್ಮ ಕಚೇರಿಯ @osd_cmkarnataka ಟ್ವಿಟರ್ ಖಾತೆಯನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ